Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭಾರತಕ್ಕೆ ಪ್ರಾಬಲ್ಯ ಸಾಧಿಸುವ ವಿಶ್ವಾಸ

ಭಾರತಕ್ಕೆ ಪ್ರಾಬಲ್ಯ ಸಾಧಿಸುವ ವಿಶ್ವಾಸ

ತಿರುಗೇಟು ನೀಡಲು ಕಿವೀಸ್ ತಯಾರಿ

ವಾರ್ತಾಭಾರತಿವಾರ್ತಾಭಾರತಿ25 Jan 2019 11:34 PM IST
share
ಭಾರತಕ್ಕೆ ಪ್ರಾಬಲ್ಯ ಸಾಧಿಸುವ ವಿಶ್ವಾಸ

ನಾಳೆ ಎರಡನೇ ಏಕದಿನ

ವೌಂಟ್ ವೌಂಗನ್ಯೂ(ನ್ಯೂಝಿಲೆಂಡ್), ಜ.25: ಮೊದಲ ಪಂದ್ಯವನ್ನು ಭರ್ಜರಿಯಾಗಿ ಗೆದ್ದುಕೊಂಡು ಸರಣಿಯಲ್ಲಿ ಉತ್ತಮ ಆರಂಭ ಪಡೆದಿರುವ ಟೀಮ್ ಇಂಡಿಯಾ ಶನಿವಾರ ಇಲ್ಲಿ ನಡೆಯುವ ತನ್ನ ಎರಡನೇ ಏಕದಿನ ಪಂದ್ಯದಲ್ಲಿ ನ್ಯೂಝಿಲೆಂಡ್‌ನ್ನು ಸೋಲಿಸಿ ಮತ್ತಷ್ಟು ಒತ್ತಡ ಹೇರುವ ವಿಶ್ವಾಸದಲ್ಲಿದೆ.

ಮೊದಲ ಪಂದ್ಯದಲ್ಲಿ ನ್ಯೂಝಿಲೆಂಡ್ ದಾಂಡಿಗರು ತಮ್ಮದೇ ಮೈದಾನದಲ್ಲಿ ಭಾರತದ ಸ್ಪಿನ್‌ದ್ವಯರಾದ ಕುಲದೀಪ್ ಯಾದವ್ ಹಾಗೂ ಯಜುವೇಂದ್ರ ಚಹಾಲ್, ವೇಗದ ಬೌಲರ್ ಮುಹಮ್ಮದ್ ಶಮಿ ದಾಳಿಯನ್ನು ಎದುರಿಸಲಾಗದೆ ತಿಣುಕಾಡಿದ್ದರು.

ಆಸ್ಟ್ರೇಲಿಯದಲ್ಲಿ ಐತಿಹಾಸಿಕ ಸರಣಿ ಜಯಿಸಿ ಬಂದಿರುವ ಭಾರತದ ಆಟಗಾರರು ಮೊದಲ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದರು.

ಸ್ಪಿನ್ನರ್‌ಗಳಾದ ಕುಲದೀಪ್ ಹಾಗೂ ಚಹಾಲ್ ಮೊದಲ ಪಂದ್ಯದಲ್ಲಿ ಆರು ವಿಕೆಟ್ ಹಂಚಿಕೊಂಡಿದ್ದರು. ಎರಡನೇ ಪಂದ್ಯದಲ್ಲೂ ಅದೇ ಪ್ರದರ್ಶನ ಪುನರಾವರ್ತಿಸಲು ಎದುರು ನೋಡುತ್ತಿದ್ದಾರೆ.

ಭಾರತ ವಿಶ್ವಕಪ್‌ಗೆ ಮಧ್ಯಮ ಕ್ರಮಾಂಕವನ್ನು ಇನ್ನಷ್ಟೇ ಅಂತಿಮಗೊಳಿಸಬೇಕಾಗಿದೆ. ಸರಣಿಯಲ್ಲಿ ಕೇವಲ 1 ಪಂದ್ಯ ನಡೆದಿರುವ ಕಾರಣ ಆಡುವ -11ರ ಬಳಗದ ಕುರಿತು ಕೊಹ್ಲಿ ಪಡೆ ಹೆಚ್ಚು ಚಿಂತಿಸುತ್ತಿಲ್ಲ. ಬಿಸಿಸಿಐ ಆಡಳಿತ ನೋಡಿಕೊಳ್ಳುತ್ತಿರುವ ಆಡಳಿತಾಧಿಕಾರಿ ಸಮಿತಿಯು ಹಾರ್ದಿಕ್ ಪಾಂಡ್ಯ ಮೇಲಿನ ಅಮಾನತು ಕ್ರಮವನ್ನು ಹಿಂಪಡೆದ ಕಾರಣ ಅವರು ತಂಡವನ್ನು ಸೇರಲು ನ್ಯೂಝಿಲೆಂಡ್‌ನತ್ತ ಪ್ರಯಾಣ ಬೆಳೆಸಲಿದ್ದಾರೆ. ಅವರು 3ನೇ ಏಕದಿನ ಬಳಿಕ ಆಯ್ಕೆಗೆ ಲಭ್ಯವಿರುವ ಸಾಧ್ಯತೆಯಿದೆ. ನೇಪಿಯರ್‌ನಲ್ಲಿ ಭಾರತ ಆಲ್‌ರೌಂಡರ್ ವಿಜಯ ಶಂಕರ್‌ರನ್ನು ಕಣಕ್ಕಿಳಿಸಿತ್ತು. ಪಿಚ್ ಪರಿಸ್ಥಿತಿಯನ್ನು ಆಧರಿಸಿ ರವೀಂದ್ರ ಜಡೇಜರನ್ನು ಮತ್ತೆ ಕಣಕ್ಕಿಳಿಸುವ ಸಾಧ್ಯತೆಯಿದೆ. ನಾಯಕ ಕೊಹ್ಲಿಗೆ ಸರಣಿಯ ಕೊನೆಯ 2 ಪಂದ್ಯಗಳಿಂದ ವಿಶ್ರಾಂತಿ ನೀಡಿರುವ ಹಿನ್ನೆಲೆಯಲ್ಲಿ ಜ.28 ರಂದು ನಡೆಯುವ ಮೂರನೇ ಏಕದಿನದ ಬಳಿಕ ಅಂತಿಮ-11ರ ಬಳಗದಲ್ಲಿ ಭಾರೀ ಬದಲಾವಣೆಯಾಗುವ ನಿರೀಕ್ಷೆಯಿದೆ. ಮೊದಲ ಏಕದಿನ ಪಂದ್ಯದಲ್ಲಿ ಶಿಖರ್ ಧವನ್ ಹಳೆಯ ಲಯಕ್ಕೆ ಮರಳಿರುವುದು ಭಾರತ ಪಾಳಯದಲ್ಲಿ ಹೊಸ ಹುರುಪು ತಂದಿದೆ. ಮೊದಲ ಪಂದ್ಯದಲ್ಲಿ ಎಡಗೈ ದಾಂಡಿಗ ಧವನ್ ಔಟಾಗದೆ 75 ರನ್ ಗಳಿಸಿದ್ದರು. ಕಿವೀಸ್ ಈ ಹಿಂದೆ ಭಾರತ ವಿರುದ್ಧ ಸ್ವದೇಶದಲ್ಲಿ 4-0 ಅಂತರದಿಂದ ಸರಣಿ ಜಯಿಸಿತ್ತು. ಒಂದು ವೇಳೆ 2ನೇ ಪಂದ್ಯದಲ್ಲಿ ಎಚ್ಚೆತ್ತುಕೊಳ್ಳದಿದ್ದರೆ, 0-4 ರಿಂದ ಸರಣಿ ಸೋಲುವ ಅಪಾಯವಿದೆ. ನ್ಯೂಝಿಲೆಂಡ್‌ನ ಎರಡೂ ವಿಭಾಗ ಬಲಿಷ್ಠವಾಗಿದೆ. 2ನೇ ಏಕದಿನದಲ್ಲಿ ವೇಗಿ ಟಿಮ್ ಸೌಥಿ ಸ್ಥಾನಕ್ಕೆ ಸ್ಪಿನ್ನರ್ ಐಶ್ ಸೋಧಿ ಅವಕಾಶ ಪಡೆಯಬಹುದು. ಇತ್ತೀಚೆಗೆ ಶ್ರೀಲಂಕಾ ವಿರುದ್ಧ 2 ಪಂದ್ಯಗಳಲ್ಲಿ ಸೋಧಿ 5 ವಿಕೆಟ್ ಕಬಳಿಸಿದ್ದರು.

ಉಭಯ ತಂಡಗಳ ಸಂಭಾವ್ಯ 11 ಆಟಗಾರರು

►ಭಾರತ: 1. ರೋಹಿತ್ ಶರ್ಮಾ, 2. ಶಿಖರ್ ಧವನ್, 3. ವಿರಾಟ್ ಕೊಹ್ಲಿ(ನಾಯಕ), 4. ಅಂಬಟಿ ರಾಯುಡು, 5. ಕೇದಾರ್ ಜಾಧವ್, 6. ಎಂಎಸ್ ಧೋನಿ, 7. ವಿಜಯ ಶಂಕರ್, 8. ಕುಲದೀಪ್ ಯಾದವ್, 9. ಭುವನೇಶ್ವರ ಕುಮಾರ, 10. ಮುಹಮ್ಮದ್ ಶಮಿ, 11. ಯಜುವೇಂದ್ರ ಚಹಾಲ್.

►ನ್ಯೂಝಿಲೆಂಡ್: 1. ಮಾರ್ಟಿನ್ ಗಪ್ಟಿಲ್, 2. ಕಾಲಿನ್ ಮುನ್ರೊ, 3. ಕೇನ್ ವಿಲಿಯಮ್ಸನ್(ನಾಯಕ), 4. ರಾಸ್ ಟೇಲರ್, 5. ಟಾಮ್ ಲಥಮ್, 6. ಹೆನ್ರಿ ನಿಕೊಲ್ಸ್, 7. ಮಿಚೆಲ್ ಸ್ಯಾಂಟ್ನರ್, 8. ಟಿಮ್ ಸೌಥಿ/ಐಶ್ ಸೋಧಿ, 9. ಲಾಕಿ ಫರ್ಗ್ಯುಸನ್, 10. ಡಗ್ ಬ್ರೆಸ್‌ವೆಲ್, 11. ಟ್ರೆಂಟ್ ಬೌಲ್ಟ್.

ಪಂದ್ಯದ ಸಮಯ ಬೆಳಗ್ಗೆ 7.30 ಗಂಟೆಗೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X