Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ರಣಜಿ ಸೆಮಿಫೈನಲ್: ಇನಿಂಗ್ಸ್ ಮುನ್ನಡೆಯ...

ರಣಜಿ ಸೆಮಿಫೈನಲ್: ಇನಿಂಗ್ಸ್ ಮುನ್ನಡೆಯ ನಿರೀಕ್ಷೆಯಲ್ಲಿ ಕರ್ನಾಟಕ

►ಪಾಂಡೆ ಬಳಗ 275ಕ್ಕೆ ಆಲೌಟ್ ►ಸೌರಾಷ್ಟ್ರ ಪ್ರಥಮ ಇನಿಂಗ್ಸ್ 227/7 ►ಮೋರೆಗೆ 5 ವಿಕೆಟ್‌ಗಳ ಗುಚ್ಛ

ವಾರ್ತಾಭಾರತಿವಾರ್ತಾಭಾರತಿ25 Jan 2019 11:42 PM IST
share
ರಣಜಿ ಸೆಮಿಫೈನಲ್: ಇನಿಂಗ್ಸ್ ಮುನ್ನಡೆಯ ನಿರೀಕ್ಷೆಯಲ್ಲಿ ಕರ್ನಾಟಕ

ಬೆಂಗಳೂರು, ಜ.25: ಬೆಳಗಾವಿ ಹುಡುಗ ರೋನಿತ್ ಮೋರೆ ಶುಕ್ರವಾರ ಕರ್ನಾಟಕ ತಂಡದ ಪಾಲಿನ ದಿನದ ಹೀರೊ ಆಗಿ ಮೂಡಿಬಂದರು. ಸೌರಾಷ್ಟ್ರದ ವಿರುದ್ಧದ ರಣಜಿ ಸೆಮಿಫೈನಲ್ ಪಂದ್ಯದಲ್ಲಿ ಎದುರಾಳಿ ಪಡೆಯ 5 ವಿಕೆಟ್ ಕಬಳಿಸಿದ ಅವರು, ಪಾಂಡೆ ಬಳಗದ ಪ್ರಥಮ ಇನಿಂಗ್ಸ್ ಮುನ್ನಡೆಯ ಕನಸಿಗೆ ರೆಕ್ಕೆ ಕಟ್ಟಿದ್ದಾರೆ. ಪ್ರವಾಸಿಗರು ತಮ್ಮ ಪ್ರಥಮ ಇನಿಂಗ್ಸ್‌ನಲ್ಲಿ 227 ರನ್ ಗಳಿಸಿ 7 ವಿಕೆಟ್ ಕಳೆದುಕೊಂಡಿದ್ದಾರೆ. ಇಲ್ಲಿಯ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದ ಎರಡನೇ ದಿನವಾದ ಶುಕ್ರವಾರ 9 ವಿಕೆಟ್‌ಗೆ 264 ರನ್‌ನಿಂದ ತನ್ನ ಪ್ರಥಮ ಇನಿಂಗ್ಸ್ ಮುಂದುವರಿಸಿದ ಕರ್ನಾಟಕ 275 ರನ್‌ಗೆ ಎಲ್ಲ ವಿಕೆಟ್ ಕಳೆದುಕೊಂಡಿತು. ಗುರುವಾರ ಅಜೇಯರಾಗುಳಿದಿದ್ದ ವಿಕೆಟ್‌ಕೀಪರ್ ಶರತ್(83) ಶುಕ್ರವಾರ ಮತ್ತೆ 9 ರನ್ ಸೇರಿಸಿದರು. ಇನ್ನೊಂದು ತುದಿಯಲ್ಲಿದ್ದ ರೋನಿತ್ ಮೋರೆ 2 ರನ್ ಗಳಿಸಿ ಜಡೇಜಗೆ ವಿಕೆಟ್ ಒಪ್ಪಿಸಿದರು.

ಸೌರಾಷ್ಟ್ರ ಪರ ಜೈದೇವ್ 4, ಮಕ್ವಾನಾ 3 ಧರ್ಮೇಂದ್ರ ಜಡೇಜ 2 ಹಾಗೂ ಸಕಾರಿಯಾ ಒಂದು ವಿಕೆಟ್ ಪಡೆದರು.

ಕರ್ನಾಟಕದ ಉತ್ತಮ ಮೊತ್ತಕ್ಕೆ ಪ್ರತಿಯಾಗಿ ತನ್ನ ಪ್ರಥಮ ಇನಿಂಗ್ಸ್ ಆರಂಭಿಸಿದ ಜೈದೇವ್ ಬಳಗಕ್ಕೆ ಮೊದಲ ವಿಕೆಟ್‌ಗೆ ಹರ್ವಿಕ್ ದೇಸಾಯಿ(16) ಹಾಗೂ ಸ್ನೆಲ್ ಪಟೇಲ್(85) 41 ರನ್ ಸೇರಿಸಿದರು. ದೇಸಾಯಿಯನ್ನು ಔಟ್ ಮಾಡುವ ಮೂಲಕ ಮೋರೆ ತಮ್ಮ ವಿಕೆಟ್ ಬೇಟೆಯನ್ನು ಆರಂಭಿಸಿದರು. ವಿಶ್ವರಾಜ್ ಜಡೇಜ(5) ಮೋರೆಗೆ ಎರಡನೇ ಬಲಿಯಾದರು. 63 ರನ್‌ಗೆ 2 ವಿಕೆಟ್ ಕಳೆದುಕೊಂಡಿದ್ದ ಸೌರಾಷ್ಟ್ರ ತಂಡದ ಖಾತೆಗೆ ರಾಷ್ಟ್ರೀಯ ಆಟಗಾರ ಚೇತೇಶ್ವರ ಪೂಜಾರ(45) ಹಾಗೂ ಸ್ನೆಲ್ ಪಟೇಲ್ ಮೂರನೇ ವಿಕೆಟ್‌ಗೆ 74 ರನ್ ಸೇರಿಸಿದರು. ಭರ್ಜರಿ ಅರ್ಧಶತಕ ಸಿಡಿಸಿದ್ದ ಸ್ನೆಲ್, ಶ್ರೇಯಸ್ ಗೋಪಾಲ್ ಬೌಲಿಂಗ್‌ನಲ್ಲಿ ಕೀಪರ್ ಶರತ್‌ಗೆ ಕ್ಯಾಚ್ ನೀಡಿದರು. ಪೂಜಾರ ಅವರು ಮಿಥುನ್ ಬೌಲಿಂಗ್‌ನಲ್ಲಿ ಅವರಿಗೆ ಮರು ಕ್ಯಾಚ್ ನೀಡಿ ನಿರ್ಗಮಿಸಿದರು.

ಆ ಬಳಿಕ ಶೆಲ್ಡನ್ ಜಾಕ್ಸನ್(46) ಹಾಗೂ ಅರ್ಪಿತ್ ವಸವದಾ(ಅಜೇಯ 26) ಪ್ರವಾಸಿ ಬಳಗದ ಪರ ಉತ್ತಮವಾಗಿ ಬ್ಯಾಟ್ ಬೀಸಿದರು. ಪ್ರೇರಕ್ ಮಂಕಡ್(0) ಹಾಗೂ ಕಮಲೇಶ್ ಮಕ್ವಾನಾ(1) ವಿಕೆಟ್‌ಗಳನ್ನು ಶೀಘ್ರಗತಿಯಲ್ಲಿ ಕಬಳಿಸಿದ ಮೋರೆ ಕೊನೆಯಲ್ಲಿ ಕರ್ನಾಟಕ ಬಳಗದಲ್ಲಿ ಹರ್ಷ ಮೂಡಲು ಕಾರಣರಾಗಿದ್ದಾರೆ. ಸೌರಾಷ್ಟ್ರಕ್ಕೆ ಇನಿಂಗ್ಸ್ ಮುನ್ನಡೆ ಸಾಧಿಸಲು ಇನ್ನೂ 48 ರನ್‌ಗಳ ಅಗತ್ಯವಿದ್ದು, ಉಳಿದ ಮೂರು ವಿಕೆಟ್‌ಗಳಲ್ಲಿ ಆತಿಥೇಯರ ಸವಾಲು ಮೀರುತ್ತದಾ ಎಂಬುದು ಶನಿವಾರದ ಕುತೂಹಲವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X