Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರತಿಭಟನೆಗೆ ದ್ರೌಪದಿ ವಸ್ತ್ರಾಪಹರಣ...

ಪ್ರತಿಭಟನೆಗೆ ದ್ರೌಪದಿ ವಸ್ತ್ರಾಪಹರಣ ಪೋಸ್ಟರ್ ಬಳಕೆ : ಕಾಂಗ್ರೆಸ್ ಕ್ಷಮೆ ಯಾಚನೆಗೆ ಬಿಜೆಪಿ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ25 Jan 2019 11:48 PM IST
share
ಪ್ರತಿಭಟನೆಗೆ ದ್ರೌಪದಿ ವಸ್ತ್ರಾಪಹರಣ ಪೋಸ್ಟರ್ ಬಳಕೆ : ಕಾಂಗ್ರೆಸ್ ಕ್ಷಮೆ ಯಾಚನೆಗೆ ಬಿಜೆಪಿ ಆಗ್ರಹ

ಹೈದರಾಬಾದ್, ಜ.25: ತೆಲಂಗಾಣದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ಚುನಾವಣಾ ಆಯೋಗ ವಿಫಲವಾಗಿದೆ ಎಂದು ಆರೋಪಿಸಿ ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷ ಶುಕ್ರವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯ ಸಂದರ್ಭ ದ್ರೌಪದಿ ವಸ್ತ್ರಾಪಹರಣದ ಪೋಸ್ಟರ್ ಬಳಸಿರುವ ಬಗ್ಗೆ ಬಿಜೆಪಿ ಆಕ್ಷೇಪಿಸಿದೆ. ಪೋಸ್ಟರ್‌ಗೆ ‘ತೆಲಂಗಾಣದಲ್ಲಿ ಪ್ರಜಾಪ್ರಭುತ್ವ’ ಎಂಬ ತಲೆಬರಹ ನೀಡಲಾಗಿತ್ತು. ಮತದಾರರನ್ನು ದ್ರೌಪದಿ ಹಾಗೂ ಚುನಾವಣಾ ಆಯೋಗವನ್ನು ದುಶ್ಯಾಸನ ಎಂಬಂತೆ ಚಿತ್ರಿಸಲಾಗಿತ್ತು.

ಚುನಾವಣಾ ಆಯೋಗವು ಮತದಾರರಾದ ದ್ರೌಪದಿಯ ವಸ್ತ್ರಾಪಹರಣ ಮಾಡುತ್ತಿರುವುದು ಹಾಗೂ ಒಂದು ಬದಿಯಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಮತ್ತು ಇನ್ನೊಂದು ಬದಿಯಲ್ಲಿ ಎಐಎಂಐಎಂ ನಾಯಕ ಅಸದುದ್ದೀನ್ ಉವೈಸಿ ಮೂಕಪ್ರೇಕ್ಷಕರಂತೆ ಇದನ್ನು ನೋಡುತ್ತಿರುವುದಾಗಿ ಪೋಸ್ಟರ್‌ನಲ್ಲಿ ಚಿತ್ರಿಸಲಾಗಿದೆ. ಪೋಸ್ಟರ್‌ನಲ್ಲಿ ಮಹಿಳೆ ಹಾಗೂ ಪೌರಾಣಿಕ ಪಾತ್ರಗಳ ಬಳಕೆ ಮಾಡಿರುವುದನ್ನು ಹೊಸದಾಗಿ ನೇಮಕಗೊಂಡಿರುವ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅನುಮೋದಿಸುತ್ತಾರೆಯೇ ಎಂದು ತೆಲಂಗಾಣ ಬಿಜೆಪಿ ವಕ್ತಾರ ಕೃಷ್ಣಸಾಗರ ರಾವ್ ಪ್ರಶ್ನಿಸಿದ್ದು, ಮಹಿಳೆಯರನ್ನು ಅವಮಾನಿಸಿದ್ದಕ್ಕಾಗಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ. ಪ್ರತಿಭಟನೆ ನಡೆಸಲು ಪ್ರತಿಯೊಬ್ಬರಿಗೂ ಹಕ್ಕಿದೆ. ಆದರೆ ಪೋಸ್ಟರ್‌ನಲ್ಲಿ ದ್ರೌಪದಿಯನ್ನು ಬಳಸಿಕೊಂಡಿರುವ ರೀತಿ ಸಂಪೂರ್ಣ ತಪ್ಪು ಎಂದು ಕೃಷ್ಣಸಾಗರರಾವ್ ಹೇಳಿದ್ದಾರೆ. ಸೋನಿಯಾ, ರಾಹುಲ್, ಪ್ರಿಯಾಂಕರ ಕಾರ್ಟೂನ್ ರಚಿಸಿದರೆ ಆ ಪಕ್ಷದವರ ಪ್ರತಿಕ್ರಿಯೆ ಹೇಗಿರಬಹುದು. ಸೋನಿಯಾ ಗಾಂಧಿಯವರ ಬಗ್ಗೆ ತನಗೆ ಬಹಳಷ್ಟು ಗೌರವವಿದೆ. ಕಾಂಗ್ರೆಸ್‌ನವರು ತಮ್ಮ ಹಕ್ಕು ಪಡೆಯುವುದಕ್ಕಾಗಿ ಹೋರಾಡಬಹುದು, ಆದರೆ ಮಹಿಳೆಯರನ್ನು ಅವಮಾನಿಸುವ ಮಟ್ಟಕ್ಕೆ ಇದು ಹೋಗಬಾರದು ಎಂದವರು ಹೇಳಿದ್ದಾರೆ.

ಆದರೆ ಪೋಸ್ಟರ್‌ನಲ್ಲಿ ಏನು ತಪ್ಪಿದೆ ಎಂದು ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ಮರ್ರಿ ಶಶಿಧರ ರೆಡ್ಡಿ ಪ್ರಶ್ನಿಸಿದ್ದು, ಈ ಪ್ರಕರಣದ ಸಂಪೂರ್ಣ ಹೊಣೆಯನ್ನು ತಾನು ಹೊತ್ತುಕೊಳ್ಳುವುದಾಗಿ ತಿಳಿಸಿದ್ದಾರೆ. ಹಿಂದೂ ಭಾವನೆಗಳಿಗೆ ಘಾಸಿಯಾಗುವ ಯಾವುದೇ ದೃಶ್ಯ ಈ ಪೋಸ್ಟರ್‌ನಲ್ಲಿಲ್ಲ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X