Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ರಾಜಗಾಂಭೀರ್ಯದಿಂದ ನಡೆದು ಬಂದ...

ಉಡುಪಿ: ರಾಜಗಾಂಭೀರ್ಯದಿಂದ ನಡೆದು ಬಂದ ‘ಚಾಂಪಿಯನ್ ಸುಲ್ತಾನ್’

ಮುಹಮ್ಮದ್ ಇರ್ಷಾದ್ ಅಬಿದಿನ್ ಮನೆಯಲ್ಲಿ ಸಾಕುತ್ತಿರುವ ಓಂಗೋಲ್ ಗೋತಳಿ

ವಾರ್ತಾಭಾರತಿವಾರ್ತಾಭಾರತಿ26 Jan 2019 8:21 PM IST
share
ಉಡುಪಿ: ರಾಜಗಾಂಭೀರ್ಯದಿಂದ ನಡೆದು ಬಂದ ‘ಚಾಂಪಿಯನ್ ಸುಲ್ತಾನ್’

ಉಡುಪಿ, ಜ.26: ಇತ್ತೀಚೆಗೆ ರಾಯಚೂರಿನ ಸಿಂಧನೂರಿನಲ್ಲಿ ನಡೆದ ರಾಜ್ಯ ಮಟ್ಟದ ಪಶು ಮೇಳದಲ್ಲಿ ‘ಚಾಂಪಿಯನ್’ ಪಟ್ಟವನ್ನು ಪಡೆದ ಬ್ರಹ್ಮಾವರ ಉಪ್ಪಿನಕೋಟೆಯ ಮುಹಮ್ಮದ್ ಇರ್ಷಾದ್ ಅಬಿದಿನ್ ಅವರ ಆಂಧ್ರ ಪ್ರದೇಶದ ಓಂಗೋಲ್ ಗೋತಳಿಯ ಎತ್ತು ‘ಸುಲ್ತಾನ್’, ಇಂದು ಬೀಡಿನಗುಡ್ಡೆ ಮಹಾತ್ಮಗಾಂಧಿ ಬಯಲು ರಂಗಮಂದಿರ ಮೈದಾನದಲ್ಲಿ ರಾಜಗಾಂಭೀರ್ಯದ ನಡೆಯೊಂದಿಗೆ ಸಚಿವ ಜಯಮಾಲ ಸೇರಿದಂತೆ ನೆರೆದಿದ್ದ ಗಣ್ಯರ ಎದುರು ನಡೆದು ಬಂದು ಎಲ್ಲರ ಗಮನ ಸೆಳೆಯಿತು.

ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಈತ ಸಾಗಬೇಕಾಗಿದ್ದರೂ ‘ಸಿದ್ಧ’ನಾಗದ ಕಾರಣ, ಪರೇಡ್ ಮುಗಿದ ಬಳಿಕ ರಾಷ್ಟ್ರಧ್ವಜ ಹಿಡಿದ ಮಾಲಕರೊಂದಿಗೆ ತಾನು ಗೆದ್ದ ಟ್ರೋಫಿ ಸಹಿತ ಕುಳಿತ ಬಾಲಕನನ್ನು ಹೊತ್ತು ಹೆಜ್ಜೆಯ ಮೇಲೆ ಹೆಜ್ಜೆಯನಿಟ್ಟು ಸಾಗಿಬಂದ ಆತನ ‘ಭವ್ಯತೆ’ಯನ್ನು ಎಲ್ಲರೂ ಬೆರಗುಗಣ್ಣಿನಿಂದ ನೋಡಿದರು.

ಉಪ್ಪಿನಕೋಟೆಯಲ್ಲಿ ಕಳೆದ ಹಲವು ವರ್ಷಗಳಿಂದ ಕೃಷಿಯೊಂದಿಗೆ ಹೈನುಗಾರಿಕೆ ನಡೆಸುತ್ತಿರುವ ಮುಹಮ್ಮದ್ ಇರ್ಷಾದ್ ಅಬಿದಿನ್, ಮನೆಯಲ್ಲಿ ಸಾಕುತ್ತಿರುವ ಆಂಧ್ರಪ್ರದೇಶ ಮೂಲದ ಓಂಗೋಲ್ ಗೋತಳಿಯ ‘ಸುಲ್ತಾನ್’ ಹೋದಲ್ಲೆಲ್ಲಾ ನೋಡುಗರ ಗಮನ ಸೆಳೆಯುತ್ತಿದೆ. ಅಬಿದಿನ್‌ರಲ್ಲಿ 20ಕ್ಕೂ ಅಧಿಕ ದೇಶಿಯ ಗೋತಳಿಗಳಿವೆ. ಇದರಲ್ಲಿ ಸುಲ್ತಾನ್ ಎಲ್ಲ ಆಕರ್ಷಣೆಯ ಕೇಂದ್ರಬಿಂದುವಾಗಿದೆ.

ಸುಮಾರು ಏಳು ವರ್ಷ ಪ್ರಾಯದ ಸುಲ್ತಾನ್ ಸುಮಾರು 6.2 ಅಡಿ ಎತ್ತರವಿದ್ದು, ಅಂದಾಜು 1,450 ಕೆ.ಜಿ. ತೂಗುತ್ತಿದೆ. ಇದನ್ನು 3.7 ಲಕ್ಷ ರೂ.ಗೆ ಅವರು ಆಂಧ್ರಪ್ರದೇಶದಿಂದ ಖರೀದಿಸಿ ತಂದಿದ್ದಾರೆ. ಗೋಸಾಕಣೆಯಲ್ಲಿ ತೊಡಗಿಸಿಕೊಂಡಿರುವ ಅಬಿದಿನ್‌ರಲ್ಲಿ 12 ಗುಜರಾತಿನ ಗೀರು ತಳಿಗಳು ಕೂಡ ಇವೆ.

ಇಂದಿಲ್ಲಿ ಆತ ತನ್ನ ಗಂಭೀರ, ಆದರೆ ಸೌಮ್ಯ ಸ್ವಭಾವದೊಂದಿಗೆ ಎಲ್ಲರನ್ನು ಸೂಜಿಗಲ್ಲಿನಂತೆ ಸೆಳೆದಿದ್ದು, ಶಾಲಾ ಮಕ್ಕಳು, ಪೊಲೀಸ್ ಅಧಿಕಾರಿಗಳು, ಸರಕಾರಿ ಅಧಿಕಾರಿಗಳು ಆತನೊಂದಿಗೆ ನಿಂತು ಸೆಲ್ಫಿ ಕ್ಲಿಕ್ಲಿಸಿಕೊಳ್ಳುವಲ್ಲಿ ಪೈಪೋಟಿ ನಡೆಸಿ ಖುಷಿಪಟ್ಟರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X