Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಭಾರತೀಯತೆ ಎಂಬುದು ಬಹುತ್ವದಿಂದ...

ಭಾರತೀಯತೆ ಎಂಬುದು ಬಹುತ್ವದಿಂದ ರೂಪಗೊಂಡಿದೆ: ಡಾ.ಬಂಜಗೆರೆ ಜಯಪ್ರಕಾಶ್

ವಾರ್ತಾಭಾರತಿವಾರ್ತಾಭಾರತಿ26 Jan 2019 9:28 PM IST
share
ಭಾರತೀಯತೆ ಎಂಬುದು ಬಹುತ್ವದಿಂದ ರೂಪಗೊಂಡಿದೆ: ಡಾ.ಬಂಜಗೆರೆ ಜಯಪ್ರಕಾಶ್

ಬೆಂಗಳೂರು, ಜ.26: ಕರ್ನಾಟಕತ್ವ, ಕನ್ನಡತ್ವ, ಭಾರತೀಯತೆ ಎನ್ನುವುದು ಏಕಕಾರಿಯಲ್ಲ. ಅದು ಬಹುತ್ವದ ನೆಲೆಯಿಂದ ರೂಪಗೊಂಡಿರುವುದು. ಇದರಲ್ಲಿ ಹಲವು ಧರ್ಮ, ಭಾಷೆಗಳಿವೆ. ಹಲವು ಸಮುದಾಯಗಳಿವೆ ಎಂದು ಚಿಂತಕ ಡಾ. ಬಂಜಗೆರೆ ಜಯಪ್ರಕಾಶ್ ಹೇಳಿದ್ದಾರೆ.

ಶನಿವಾರ ನಗರದ ಕಸಾಪದಲ್ಲಿ ನಾವೇ ಕರ್ನಾಟಕ ಸಂಘಟನೆ ಆಯೋಜಿಸಿದ್ದ ‘ಒಕ್ಕೂಟ ವ್ಯವಸ್ಥೆಯಲ್ಲಿ ಕರ್ನಾಟಕದ ಸ್ಥಾನಮಾನ’ ಕುರಿತ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕರ್ನಾಟಕದ ಶಕ್ತಿಯಿರುವುದು ಬಹುತ್ವದಲ್ಲೇ ಹೊರತು, ಏಕತೆಯಲ್ಲಿ ಅಲ್ಲ ಎಂದು ನುಡಿದರು.

ಒಂದು ದೇಶವು ಭಾಷೆ ಅಥವಾ ಜನಾಂಗದಿಂದ ನಿರ್ಮಾಣವಾಗುತ್ತದೆಯೇ ಹೊರತು ಒಂದು ಸೀಮಿತ ಧರ್ಮದಿಂದ ಅಲ್ಲ ಎಂಬುದನ್ನು ಎಲ್ಲರೂ ಅರಿಯಬೇಕಿದೆ. ಇನ್ನು ಕರ್ನಾಟಕ ವಿಚಾರದಲ್ಲೂ ಕೊಂಕಣಿ, ಕೊಡವ, ತುಳು, ಮರಾಠಿ, ಉರ್ದು ಭಾಷಿಕರು, ಜೈನ, ಮುಸ್ಲಿಂ, ಬೌದ್ಧ ಧರ್ಮೀಯರು ನಮ್ಮ ಜತೆಯಲ್ಲಿದ್ದಾರೆ. ಅವುಗಳನ್ನು ಹೊರುತು ಪಡಿಸಿ ಕರ್ನಾಟಕತ್ವವನ್ನು ಕಾಣಲು ಸಾಧ್ಯವಿಲ್ಲ. ಹೀಗಾಗಿ, ಎಲ್ಲಾ ಜಾತಿ ಧರ್ಮ, ಭಾಷೆಗಳಿಂದ ಒಂದಾದ ರಾಜ್ಯ, ರಾಷ್ಟ್ರವನ್ನು ಬೇರ್ಪಡಿಸುವ ಬದಲು ಪ್ರಾದೇಶಿಕ ಸಂಸ್ಕೃತಿ, ಬೇಡಿಕೆಗಳಿಗೆ ಆದ್ಯತೆ ನೀಡಬೇಕು ಎಂದು ತಿಳಿದರು.

ಒಂದು ಭಾಷೆಯ ನೆಲೆಗಟ್ಟಿನಲ್ಲಿ ರಾಜ್ಯಗಳು ರೂಪತಾಳಿವೆ. ಅವುಗಳು ಪುರಾತನ ಕಾಲದಿಂದ ತನ್ನದೇ ಆದ ಧರ್ಮ, ಸಂಸ್ಕೃತಿ ಮೈಗೂಡಿಸಿಕೊಂಡು ಬಂದಿವೆ. ಅಂತೆಯೇ ಕರ್ನಾಟಕವು ಸೇರಿದಂತೆ ದಕ್ಷಿಣ ಭಾರತ ದ್ರಾವಿಡ ರಾಜ್ಯಗಳು ಅವೈದಿಕ ಧರ್ಮವನ್ನು ರೂಢಿಸಿಕೊಂಡು ಬಂದಿವೆ. ಆದರೆ, ಇಂದು ಅಖಿಲ ಭಾರತ ಹೆಸರಿನಲ್ಲಿ ಒಂದೇ ಧರ್ಮ, ಒಂದೇ ಭಾಷೆಯೆಂದು ಹೇಳಿಕೊಳ್ಳುತ್ತಾ, ಹಿಂದೂ ಧರ್ಮ ಹಾಗೂ ಹಿಂದಿ ಭಾಷೆಯನ್ನು ಎರವಲು ತಂದು ಹೇರುವ ಮೂಲಕ ಆ ರಾಜ್ಯಗಳ ಸಂಸ್ಕೃತಿ ಅಸ್ಮಿತೆಗೆ ಧಕ್ಕೆ ತರಲಾಗುತ್ತಿದೆ ಎಂದರು. ಪತ್ರಕರ್ತ ಅಗ್ನಿ ಶ್ರೀಧರ್ ಮಾತನಾಡಿ, ಕುಟುಂಬ ರಾಜಕಾರಣದಿಂದ ಇಂದು ದೇಶ-ರಾಜ್ಯಗಳು ನಲುಗಿ ಹೋಗಿವೆ. ಪ್ರಜಾಪ್ರಭುತ್ವ ವ್ಯವಸ್ಥೆಯ ಅರ್ಥವನ್ನೇ ಹಾಳು ಮಾಡುತ್ತಿವೆ. ಬಸವಣ್ಣನವರು ಕನ್ನಡವನ್ನು ಬರೆದರು. ಆದರೆ ಅವರು ಬರಿ ಕನ್ನಡಿಗರಿಗಾಗಿ ಬರೆದಿದ್ದಲ್ಲ, ಎಲ್ಲರಿಗಾಗಿ ಬರೆದದ್ದು. ಅದೇ ರೀತಿ, ರನ್ನ, ಪಂಪ ಮತ್ತಿತರರು ಬರೆದದ್ದು ಕೇವಲ ಕನ್ನಡಿಗರಿಗಾಗಿ ಅಲ್ಲ, ಎಲ್ಲರಿಗಾಗಿ. ಹಾಗೆಯೇ ರಾಜಕೀಯ ಕೂಡ ಎಲ್ಲರ ಸ್ವತ್ತು. ಇದನ್ನು ಪ್ರಜೆಗಳು ಪ್ರಶ್ನಿಸುವಂತಾಗಬೇಕು ಎಂದರು. ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರಕಾರದ ನೀತಿಗಳು ರೈತ ಸ್ನೇಹಿಯಾಗಿಲ್ಲ. ಈ ನಾಡಿನಲ್ಲಿ ಸಾಲಬಾಧೆಯಿಂದ ಅಥವಾ ಬೆಳೆ ವಿಲದಿಂದ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆದರೆ ಯಾವುದಾದರೂ ರಾಜಕಾರಣಿ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡ ಉದಾಹರಣೆ ಇದೆಯೇ ಎಂದು ಪ್ರಶ್ನಿಸಿದರು.

ದೇಶಕ್ಕೆ, ವಿಶ್ವಕ್ಕೆ ಅನ್ನ ಕೊಡುವ ರೈತ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾನೆ ಎಂದರೆ ನಮ್ಮ ವ್ಯವಸ್ಥೆಗಳು ಯಾವ ಮಟ್ಟಕ್ಕೆ ತಲುಪಿವೆ ಎಂಬುದನ್ನು ಅರಿಯಬಹುದು ಎಂದ ಕೋಡಿಹಳ್ಳಿ ಚಂದ್ರಶೇಖರ್, ಮಾರುವವರು ತಮಗೆ ಬೇಕಾದ ಬೆಲೆಯನ್ನು ನಿಗದಿಪಡಿಸಿಕೊಳ್ಳುವ ಅಧಿಕಾರ ಹೊಂದಿದ್ದಾರೆ. ಅದೇ ಅದನ್ನು ಬೆಳೆಯುವ ರೈತನಿಗೆ ಯಾಕೆ ಆ ಅಧಿಕಾರವಿಲ್ಲ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಸಂಘಟನೆ ಅಧ್ಯಕ್ಷ ಹಾಗೂ ಲೇಖಕ ಪಾರ್ವತೀಶ್ ಬಿಳಿದಾಳೆ, ಸದಸ್ಯ ಡಾ. ರವಿಕುಮಾರ್ ಬಾಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X