Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪ್ರೊ.ವಿ.ಬಿ. ಅರ್ತಿಕಜೆ ಅವರ `ಮಾರ್ದನಿ...

ಪ್ರೊ.ವಿ.ಬಿ. ಅರ್ತಿಕಜೆ ಅವರ `ಮಾರ್ದನಿ ಮಾಲೆ' ಕೃತಿ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ26 Jan 2019 9:31 PM IST
share
ಪ್ರೊ.ವಿ.ಬಿ. ಅರ್ತಿಕಜೆ ಅವರ `ಮಾರ್ದನಿ ಮಾಲೆ ಕೃತಿ ಬಿಡುಗಡೆ

ಪುತ್ತೂರು, ಜ. 26: ಕಳೆದ ನಾಲ್ಕು ದಶಕಗಳಿಂದ ಅಂಕಣಕಾರರಾಗಿ ಅಕ್ಷರ ಲೋಕದಲ್ಲಿ ಸಾಹಿತ್ಯ ಸೇವೆ ನಡೆಸುತ್ತಿರುವ ಪ್ರೊ. ವಿಬ.ಬಿ. ಅರ್ತಿಕಜೆ ಅವರ ಅಂಕಣ ಬರಹಗಳು ಅನುಭವ ಜನ್ಯವಾಗಿ ಮೂಡಿ ಬಂದಿದೆ. ಅಂಕಣಕಾರರಾಗಿ ಸುದೀರ್ಘ ಅವಧಿಯಲ್ಲಿ ವಿವಿಧ ವಿಷಯಗಳನ್ನು ಓದುಗರ ಮನ ಮುಟ್ಟುವಂತೆ ಪ್ರಸ್ತುತ ಪಡಿಸುವ ಮೂಲಕ ಇವರ ಕೃತಿಗಳು ಪ್ರಸಿದ್ಧಿ ಪಡೆದಿವೆ ಎಂದು ಪುತ್ತೂರು ವಿವೇಕಾನಂದ ಮಹಾವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ರಾಕೇಶ್ ಕುಮಾರ್ ಕಮ್ಮಜೆ ಹೇಳಿದರು.

ಅವರು ಶನಿವಾರ ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಲೇಖಕ-ಅಂಕಣಕಾರ ಪ್ರೊ. ವಿ.ಬಿ. ಅರ್ತಿಕಜೆ ಅವರ ಅಂಕಣ ಬರಹಗಳ ಸಂಗ್ರಹ ಮಾರ್ದನಿ-ಮಾಲೆ ಕೃತಿ ಬಿಡುಗಡೆಯ ಸಮಾರಂಭದಲ್ಲಿ ಕೃತಿ ಪರಿಚಯ ಮಾಡಿದರು. ಪ್ರೊ.ವಿ.ಬಿ. ಅರ್ತಿಕಜೆ ಅವರ ಅಂಕಣ ವಸ್ತು-ಶಬ್ದ ಇಷ್ಟವಾಗುತ್ತದೆ. ಸರಳವಾದ ಸಂಗತಿಗಳನ್ನು ಓದುಗರಿಗೆ ತಮ್ಮದೇ ವಿಮರ್ಶೆಯೊಂದಿಗೆ ತಲುಪಿಸುವ ರೀತಿ ವಿಶಿಷ್ಟವಾದದ್ದು ಎಂದರು. 

ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಬಿ. ಪುರಂದರ ಭಟ್ ಸಾಹಿತ್ಯವು ಮನುಷ್ಯನಿಗೆ ಎದುರಾಗುವ ಎಲ್ಲಾ ಮಾನಸಿಕ ಚಂಚಲತೆಯನ್ನು ಪರಿಹರಿಸುವ ಜನೋಪಯೋಗಿ ಪ್ರಭಾವಿ ಮಾಧ್ಯಮವಾಗಿದೆ. ಪ್ರೊ.ವಿ.ಬಿ. ಅರ್ತಿಕಜೆ ಅವರ ಮನಸ್ಸು ಮತ್ತು ಉದ್ದೇಶ ಅವರ ಕೃತಿಗಳಲ್ಲಿ ಇರುತ್ತದೆ. ಅಂಕಣ ಬರಹಗಾರರಾಗಿ ಅವರು ಆಯ್ಕೆ ಮಾಡದ ವಿಷಯಗಳೇ ವಿರಳ ಎಂದರು. 

ಪುತ್ತೂರು ತಾಲೂಕು ಪಂಚಾಯತ್ ಅಧ್ಯಕ್ಷ ಕೆ. ರಾಧಾಕೃಷ್ಣ ಬೋರ್ಕರ್ ಕೃತಿ ಬಿಡುಗಡೆಗೊಳಿಸಿ ಮಾತನಾಡಿ, ಹಿರಿಯ ಸಾಹಿತಿ, ಪತ್ರಕರ್ತ, ಅನುಭವಿ ಅಂಕಣಕಾರ ಪ್ರೊ.ವಿ.ಬಿ. ಅರ್ತಿಕಜೆ ಅವರು ಪತ್ರಿಕೋದ್ಯಮ ಮತ್ತು ಸಾಹಿತ್ಯ ಕ್ಷೇತ್ರಕ್ಕೆ ಅನುಪಮ ಕೊಡುಗೆ ನೀಡಿದ್ದಾರೆ. ಇಂತಹ ಶ್ರೇಷ್ಠ ವ್ಯಕ್ತಿಯು ಬರೆದ ಮಾರ್ದನಿ-ಮಾಲೆ ಕೃತಿಯನ್ನು ಬಿಡುಗಡೆಗೊಳಿಸುವುದು ಒಂದು ಹೆಮ್ಮೆಯ ಸಂಗತಿಯಾಗಿದೆ. ಪುತ್ತೂರು ತಾಲೂಕು ಪತ್ರಕರ್ತರ ಸಂಘವು ಈ ದಿಸೆಯಲ್ಲಿ ಹಿರಿಯ ಪತ್ರಕರ್ತರೊಬ್ಬರ ಪುಸ್ತಕವನ್ನು ಬಿಡುಗಡೆಗೊಳಿಸುವ ಕಾರ್ಯಕ್ರಮವನ್ನು ಏರ್ಪಡಿಸಿ ಉತ್ತಮ ಕೆಲಸ ಮಾಡಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಸುಧಾಕರ ಸುವರ್ಣ ತಿಂಗಳಾಡಿ ಮಾತನಾಡಿ, ನಿತ್ಯ ಧಾವಂತದ ನಡುವೆ ಸಾಹಿತ್ಯದ ಕುರಿತು ಒಲವು ಇದ್ದರೂ ಗಮನ ಹರಿಸಲಾರದ ಒತ್ತಡದಲ್ಲಿ ಪತ್ರಕರ್ತರು ಇರುತ್ತಾರೆ. ಪುತ್ತೂರು ಪತ್ರಕರ್ತರ ಸಂಘವು ಸೃಜನಶೀಲ ಸಂಘವಾಗಿ ಹಿರಿಯ ಅಂಕಣಕಾರ ಪ್ರೊ.ವಿ.ಬಿ. ಅರ್ತಿಕಜೆ ಅವರ ಕೃತಿ ಬಿಡುಗಡೆಯ ಕಾರ್ಯವನ್ನು ಮಾಡಿದೆ. ಇದು ಸಂಘಕ್ಕೆ ಒಂದು ಹೆಮ್ಮೆ ಮತ್ತು ಪತ್ರಕರ್ತರಿಗೆ ಆತ್ಮ ಸಂತೋಷದ ಸಂಗತಿಯಾಗಿದೆ ಎಂದರು.

ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಕಾರ್ಯದರ್ಶಿ ಗಣೇಶ್ ಕಲ್ಲರ್ಪೆ ಸ್ವಾಗತಿಸಿ, ಪುತ್ತೂರು ತಾಲೂಕು ಪತ್ರಕರ್ತರ ಸಂಘದ ನಿಕಟಪೂರ್ವ ಅಧ್ಯಕ್ಷ ಮಹೇಶ್ ಪುಚ್ಚಪ್ಪಾಡಿ ವಂದಿಸಿದರು. ಪತ್ರಕರ್ತ ಸಂಶುದ್ದೀನ್ ಸಂಪ್ಯ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X