Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ರಣಜಿ ಸೆಮಿಫೈನಲ್: ಕರ್ನಾಟಕಕ್ಕೆ ಮುನ್ನಡೆ

ರಣಜಿ ಸೆಮಿಫೈನಲ್: ಕರ್ನಾಟಕಕ್ಕೆ ಮುನ್ನಡೆ

► ಶ್ರೇಯಸ್ ಅಜೇಯ ಅರ್ಧಶತಕ ► ದ್ವಿತೀಯ ಇನಿಂಗ್ಸ್‌ 237/8

ವಾರ್ತಾಭಾರತಿವಾರ್ತಾಭಾರತಿ26 Jan 2019 11:30 PM IST
share
ರಣಜಿ ಸೆಮಿಫೈನಲ್: ಕರ್ನಾಟಕಕ್ಕೆ ಮುನ್ನಡೆ

ಬೆಂಗಳೂರು, ಜ.26: ಆಲ್‌ರೌಂಡರ್ ಶ್ರೇಯಸ್ ಗೋಪಾಲ್‌ರ ಅಜೇಯ ಅರ್ಧಶತಕ, ಮಾಯಾಂಕ್ ಅಗರ್ವಾಲ್ ಹಾಗೂ ಅಭಿಮನ್ಯು ಮಿಥುನ್ ಅವರ ಉತ್ತಮ ಬ್ಯಾಟಿಂಗ್ ನೆರವಿನಿಂದ ಕರ್ನಾಟಕ ತಂಡ ಸೌರಾಷ್ಟ್ರ ವಿರುದ್ಧ ನಡೆಯುತ್ತಿರುವ ರಣಜಿ ಸೆಮಿಫೈನಲ್ ಪಂದ್ಯದ ತನ್ನ ಎರಡನೇ ಇನಿಂಗ್ಸ್‌ನಲ್ಲಿ 8 ವಿಕೆಟ್‌ಗೆ 237 ರನ್ ಗಳಿಸಿದೆ. ಇದರಿಂದ ಪ್ರಥಮ ಇನಿಂಗ್ಸ್‌ನಲ್ಲಿ ದೊರೆತ 39 ರನ್‌ಗಳೊಂದಿಗೆ ಒಟ್ಟು 276 ರನ್ ಮುನ್ನಡೆ ಸಾಧಿಸಿ ಉತ್ತಮ ಸ್ಥಿತಿಯಲ್ಲಿದೆ. ಇದಕ್ಕೂ ಮೊದಲು ರೋನಿತ್ ಮೋರೆ ದಾಳಿಗೆ ತತ್ತರಿಸಿದ ಸೌರಾಷ್ಟ್ರ ತಂಡ ಪ್ರಥಮ ಇನಿಂಗ್ಸ್ ನಲ್ಲಿ 236 ರನ್ ಗಳಿಸಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು.

ಇಲ್ಲಿಯ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದ ಮೂರನೇ ದಿನವಾದ ಶನಿವಾರ ಸೌರಾಷ್ಟ್ರ ತಂಡ 7 ವಿಕೆಟ್‌ಗೆ 227ರಿಂದ ತನ್ನ ಪ್ರಥಮ ಇನಿಂಗ್ಸ್ ಮುಂದುವರಿಸಿತು. ಈ ಮೊತ್ತಕ್ಕೆ ಇಂದು 9 ರನ್ ಸೇರಿಸುವಷ್ಟರಲ್ಲಿ ತನ್ನೆಲ್ಲ ವಿಕೆಟ್‌ಗಳನ್ನು ಒಪ್ಪಿಸಿತು. ಎರಡನೇ ದಿನ ಕ್ರೀಸ್ ಕಾಯ್ದುಕೊಂಡಿದ್ದ ವಸವದಾ(30) ವೇಗಿ ಮೋರೆಗೆ ಶನಿವಾರ ಮೊದಲ ಬಲಿಯಾದರು. ಧರ್ಮೇಂದ್ರ(3) ಹಾಗೂ ನಾಯಕ ಜೈದೇವ್ ಉನಾದ್ಕತ್(0) ಅವರು ಮಿಥುನ್‌ಗೆ ತಮ್ಮ ವಿಕೆಟ್‌ಗಳನ್ನು ಒಪ್ಪಿಸಿದರು. ಪ್ರವಾಸಿಗರ ಬ್ಯಾಟಿಂಗ್ ಬೆನ್ನೆಲುಬು ಮುರಿದ ಮೋರೆ ಒಟ್ಟು 6 ವಿಕೆಟ್‌ಗಳನ್ನು ಪಡೆದರೆ, ಅವರಿಗೆ ಉತ್ತಮ ಸಾಥ್ ನೀಡಿದ ಮಿಥುನ್ 3 ವಿಕೆಟ್ ಕಬಳಿಸಿದರು. ಶ್ರೇಯಸ್‌ಗೆ ಒಂದು ವಿಕೆಟ್ ದಕ್ಕಿತು.

ಪ್ರಥಮ ಇನಿಂಗ್ಸ್‌ನಲ್ಲಿ ಮುನ್ನಡೆ ದೊರೆತ ಖುಷಿಯಲ್ಲಿ ತನ್ನ ಎರಡನೇ ಸರದಿಯ ಬ್ಯಾಟಿಂಗ್ ಆರಂಭಿಸಿದ ಪಾಂಡೆ ಬಳಗಕ್ಕೆ ಉನಾದ್ಕತ್ ಆರಂಭದಲ್ಲೇ ಕಾಡಿದರು. ಆರ್.ಸಮರ್ಥ್(5) ಅವರು ಉನಾದ್ಕತ್ ಎಸೆತದಲ್ಲಿ ಬೌಲ್ಡ್ ಆಗುವ ಮೂಲಕ ಮತ್ತೊಮ್ಮೆ ವೈಫಲ್ಯ ಅನುಭವಿಸಿದರು. ಈ ವೇಳೆ ತಂಡದ ಕೈಹಿಡಿದ ರಾಷ್ಟ್ರೀಯ ತಂಡದ ಆಟಗಾರ ಮಾಯಾಂಕ್ (46) ಉತ್ತಮ ಜೊತೆಯಾಟಗಳನ್ನು ಬೆಳೆಸಿದರು. ತಂಡದ ಮೊತ್ತ 26 ರನ್ ಆಗಿದ್ದಾಗ ಕೆ.ಸಿದ್ಧಾರ್ಥ್(8) ವಿಕೆಟ್ ಕೈಚೆಲ್ಲಿದರು. ಕರುಣ್ ನಾಯರ್(15) ಮಿಂಚಲು ವಿಫಲರಾದರು. ನಾಯಕ ಮನೀಷ್ ಪಾಂಡೆ (26) ಆರಂಭದಲ್ಲಿ ಉತ್ತಮ ಆಟವಾಡಿದರೂ ದೊಡ್ಡ ಮೊತ್ತವನ್ನಾಗಿ ಪರಿವರ್ತಿಸಲು ವಿಫಲರಾದರು.

ತಂಡದ ಮೊತ್ತ 108 ರನ್ ಆಗಿದ್ದಾಗ ಮಾಯಾಂಕ್ 5ನೆಯವರಾಗಿ ಔಟಾದರು. ಈ ಹಂತದಲ್ಲಿ ಬ್ಯಾಟಿಂಗ್ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಿದ ಆಲ್‌ರೌಂಡರ್ ಶ್ರೇಯಸ್ ಗೋಪಾಲ್(ಅಜೇಯ 61) ಕರುನಾಡ ತಂಡಕ್ಕೆ ಆಸರೆ ಒದಗಿಸಿದ್ದಾರೆ. ಪ್ರಥಮ ಇನಿಂಗ್ಸ್ ಹೀರೊ ವಿಕೆಟ್ ಕೀಪರ್ ಶರತ್(7), ವಿನಯಕುಮಾರ್ ಹಾಗೂ ಕೆ.ಗೌತಮ್ (11) ವಿಕೆಟ್‌ಗಳು ಅತ್ಯಲ್ಪ ಕಾಲದಲ್ಲಿ ಉರುಳಿದವು. ಮುರಿಯದ 9ನೇ ವಿಕೆಟ್ ಜೊತೆಯಾಟದಲ್ಲಿ ಶ್ರೇಯಸ್ ಹಾಗೂ ಮಿಥುನ್(35) 61 ರನ್ ಸೇರಿಸಿ ತಂಡದ ಒಟ್ಟು ಮುನ್ನಡೆಯನ್ನು 250ರ ಗಡಿ ದಾಟಿಸಿದ್ದಾರೆ.

ಸೌರಾಷ್ಟ್ರ ಪರ ಉನಾದ್ಕತ್ ಹಾಗೂ ಧರ್ಮೇಂದ್ರ ತಲಾ 3 ವಿಕೆಟ್ ಪಡೆದರೆ ಮಂಕಡ್ 2 ವಿಕೆಟ್‌ಗೆ ತೃಪ್ತಿಪಟ್ಟರು.

ಇನ್ನೂ ಎರಡು ದಿನಗಳ ಆಟ ಬಾಕಿ ಉಳಿದಿದ್ದು ಪಂದ್ಯ ಸ್ಪಷ್ಟ ಲಿತಾಂಶ ಕಾಣುವ ನಿರೀಕ್ಷೆಯಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X