ಹಿಂದೂ ಹುಡುಗಿಯನ್ನು ಮುಟ್ಟುವ ಕೈಗಳು ಇರಬಾರದು: ವಿವಾದ ಸೃಷ್ಟಿಸಿದ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಹೇಳಿಕೆ
ಹೊಸದಿಲ್ಲಿ, ಜ.27: ಹಿಂದೂ ಹುಡುಗಿಯನ್ನು ಮುಟ್ಟುವ ಯಾವ ಕೈಯನ್ನಾದರೂ ಕಡಿಯಬೇಕು ಎಂದು ಹೇಳುವ ಮೂಲಕ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಹೊಸ ವಿವಾದ ಸೃಷ್ಟಿಸಿದ್ದಾರೆ.
“ನಮ್ಮ ಆಲೋಚನೆಗಳಲ್ಲಿ ಮೂಲಭೂತ ಬದಲಾವಣೆಗಳಾಗಬೇಕು. ನಮ್ಮ ನಡುವೆ ಏನು ನಡೆಯುತ್ತಿದೆ ಎನ್ನುವುದನ್ನು ನಾವು ಗಮನಿಸಬೇಕು. ಜಾತಿ ಯಾವುದೇ ಇರಲಿ ಹುಡುಗಿಯರನ್ನು ಮುಟ್ಟುವ ಕೈಗಳು ಇರಬಾರದು” ಎಂದು ಸಚಿವರು ಹೇಳಿದರು.
ಈ ಹಿಂದೆ ನಾವು ಅಧಿಕಾರಕ್ಕೆ ಬಂದಿರುವುದೇ ಸಂವಿಧಾನವನ್ನು ಬದಲಿಸಲು ಎಂಬ ಹೇಳಿಕೆ ನೀಡಿದ ಹೆಗಡೆ ವಿವಾದ ಸೃಷ್ಟಿಸಿದ್ದರು.
#WATCH: Union Minister Ananth Kumar Hegde in Kodagu, "We have to rethink about priorities of our society. We shouldn’t think of caste. If a Hindu girl is touched by a hand, then that hand should not exist." #Karnataka pic.twitter.com/4uVNnIrNeu
— ANI (@ANI) January 27, 2019
Next Story