Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಾಸ, ವಚನ ಸಾಹಿತ್ಯ ಸಮಾಜದ ಎರಡು ಕಣ್ಣು:...

ದಾಸ, ವಚನ ಸಾಹಿತ್ಯ ಸಮಾಜದ ಎರಡು ಕಣ್ಣು: ಸರ್ವಾಧ್ಯಕ್ಷೆ ಡಾ. ಲೀಲಾದೇವಿ ಅಭಿಮತ

ರಾಜ್ಯಮಟ್ಟದ ಮಹಿಳಾ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ27 Jan 2019 10:05 PM IST
share
ದಾಸ, ವಚನ ಸಾಹಿತ್ಯ ಸಮಾಜದ ಎರಡು ಕಣ್ಣು: ಸರ್ವಾಧ್ಯಕ್ಷೆ ಡಾ. ಲೀಲಾದೇವಿ ಅಭಿಮತ

ಸಾಗರ, ಜ.27: ದಾಸ ಸಾಹಿತ್ಯ ಮತ್ತು ವಚನ ಸಾಹಿತ್ಯ ಸಮಾಜದ ಎರಡು ಕಣ್ಣುಗಳಿದ್ದಂತೆ. ಎರಡರ ಕಾಲಘಟ್ಟ ಬೇರೆಯಾಗಿದ್ದರೂ, ಸಮಾಜ ಪರಿವರ್ತನೆಯ ಉದ್ದೇಶ ಒಂದೇ ಆಗಿದೆ ಎಂದು ಮಾಜಿ ಸಚಿವೆ ಹಾಗೂ ವಚನ ಮತ್ತು ದಾಸ ಸಾಹಿತ್ಯ ರಾಜ್ಯಮಟ್ಟದ ಮಹಿಳಾ ಸಮ್ಮೇಳನದ ಸರ್ವಾಧ್ಯಕ್ಷೆ ಡಾ. ಲೀಲಾದೇವಿ ಆರ್. ಪ್ರಸಾದ್ ಹೇಳಿದ್ದಾರೆ.

ಇಲ್ಲಿನ ಬ್ರಾಸಂ ಸಭಾಭವನದಲ್ಲಿ ಭಾನುವಾರ ಸ್ನೇಹ ಸಾಗರ ಸ್ವಸಹಾಯ ಮಹಿಳಾ ಮಂಡಳಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಚನ ಸಾಹಿತ್ಯ ಮತ್ತು ದಾಸ ಸಾಹಿತ್ಯ ರಾಜ್ಯಮಟ್ಟದ ಮಹಿಳಾ ಸಮ್ಮೇಳನದ ಸರ್ವಾಧ್ಯಕ್ಷೆ ಸ್ಥಾನದಿಂದ ಮಾತನಾಡಿದ ಅವರು, ದಾಸ ಸಾಹಿತ್ಯ 11ನೇ ಶತಮಾನದಲ್ಲಿ, ವಚನ ಸಾಹಿತ್ಯ 12ನೇ ಶತಮಾನದಲ್ಲಿ ಸಮಾಜದ ಅಂಕುಡೊಂಕುಗಳನ್ನು ತಿದ್ದಿ, ಸತ್ಸಮಾಜ ನಿರ್ಮಾಣಕ್ಕೆ ಪ್ರಮುಖ ಕೊಡುಗೆ ನೀಡಿವೆ ಎಂದರು. ವಚನ ಸಾಹಿತ್ಯವೂ ಸಮಾಜದಲ್ಲಿನ ಕಂದಾಚಾರ, ಮೂಡನಂಬಿಕೆ, ಮೇಲುಕೀಳುಗಳನ್ನು ತೊಡೆದು ಹಾಕುವಲ್ಲಿ ಪ್ರಮುಖಪಾತ್ರ ವಹಿಸಿದೆ. ಬಸವಣ್ಣ, ಅಕ್ಕಮಹಾದೇವಿ, ಅಲ್ಲಮಪ್ರಭು ಸೇರಿದಂತೆ ಸಾವಿರಾರು ವಚನಕಾರರು ಬೇರೆಬೇರೆ ಅಂಕಿತ ನಾಮದೊಂದಿಗೆ ವಚನಗಳನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡಿದ್ದಾರೆ ಎಂದು ತಿಳಿಸಿದರು. ದಾಸರಾಗಲೀ, ವಚನಕಾರರಾಗಲೀ ಯಾವುದೇ ವಿಶ್ವವಿದ್ಯಾನಿಲಯಕ್ಕೆ ಹೋಗಿ ಪದವಿ ಪಡೆದವರಲ್ಲ, ಡಾಕ್ಟರೇಟ್ ಮಾಡಿದವರಲ್ಲ. ಜನ ವಿಶ್ವವಿದ್ಯಾಲಯದಲ್ಲಿ ಓಡಾಡಿಕೊಂಡು ಜನರ ಭಾವನೆಗಳನ್ನು, ಅವರು ದಿನನಿತ್ಯ ಅನುಭವಿಸುತ್ತಿದ್ದ ಸಂಕಟಗಳನ್ನು ತಮ್ಮ ವಸ್ತುವಾಗಿ ಇರಿಸಿಕೊಂಡು ದಾಸಪದ ಹಾಗೂ ವಚನಗಳನ್ನು ರಚನೆ ಮಾಡಿದ್ದಾರೆ ಎಂದರು.

ಸುಮಾರು 900 ವರ್ಷಗಳ ಹಿಂದೆ ರಚಿತವಾಗಿರುವ ದಾಸ ಹಾಗೂ ವಚನ ಸಾಹಿತ್ಯ ಇಂದಿಗೂ ಜನಮಾನಸದಲ್ಲಿ ಗಟ್ಟಿಯಾಗಿ ನೆಲೆಯೂರಿರುವುದರ ಹಿಂದೆ ಎಷ್ಟೊಂದು ಸತ್ವ ಹಾಗೂ ಸತ್ಯ ಇದೆ ಎನ್ನುವುದನ್ನು ನಾವು ಅರ್ಥೈಸಿಕೊಳ್ಳಬೇಕು. ಇವುಗಳ ತುಲಾನಾತ್ಮಕ ಅಧ್ಯಯನ ನಡೆಸಿ, ಅವುಗಳನ್ನು ನಮ್ಮ ಬದುಕಿನಲ್ಲಿ ಹೇಗೆ ಅಳವಡಿಸಿಕೊಳ್ಳಬೇಕು ಎನ್ನುವುದರ ಕುರಿತು ಚಿಂತನೆ ನಡೆಸಬೇಕು ಎಂದು ಹೇಳಿದರು. ನಂತರ 'ದಾಸ ಸಾಹಿತ್ಯದ ವಿಶೇಷತೆ ವಿಷಯ ಕುರಿತು ಮೈಸೂರಿನ ಡಾ. ನಾಗರತ್ನಾ ಟಿ.ಎಸ್., 'ವಚನಕಾರರಲ್ಲಿ ಸಾಮಾಜಿಕ ಪ್ರಜ್ಞೆ ವಿಷಯ ಕುರಿತು ಪ್ರಾಧ್ಯಾಪಕಿ ಸಂಪದಾ ಕೇರಿಮನಿ ಉಪನ್ಯಾಸ ನೀಡಿದರು. ಚೂಡಾಮಣಿ ರಾಮಚಂದ್ರ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಸದಸ್ಯೆ ಅನಿತಾಕುಮಾರಿ, ನಂದಾ ಗೊಜನೂರು, ಪುಷ್ಪಾ ಮಲ್ಲಿಕಾರ್ಜುನ್, ಸುನಂದಾ ಶಶಿಭೂಷಣ್, ಸವಿತಾ ಇನ್ನಿತರರು ಉಪಸ್ಥಿತರಿದ್ದರು. ನಂತರ ವಚನ ಮತ್ತು ದಾಸರಪದಗಳ ಗಾಯನ ಕಾರ್ಯಕ್ರಮ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X