Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಳಕು ಮೀನುಗಾರಿಕೆಯಿಂದ ಮರಳಲು ಅವಕಾಶ...

ಬೆಳಕು ಮೀನುಗಾರಿಕೆಯಿಂದ ಮರಳಲು ಅವಕಾಶ ನೀಡದ ಸಾಂಪ್ರದಾಯಿಕ ಮೀನುಗಾರರು

ಮಂಗಳೂರು ಬಂದರ್‌ನಲ್ಲಿ ಬೀಡುಬಿಟ್ಟ ಪೊಲೀಸ್

ವಾರ್ತಾಭಾರತಿವಾರ್ತಾಭಾರತಿ28 Jan 2019 8:12 PM IST
share
ಬೆಳಕು ಮೀನುಗಾರಿಕೆಯಿಂದ ಮರಳಲು ಅವಕಾಶ ನೀಡದ ಸಾಂಪ್ರದಾಯಿಕ ಮೀನುಗಾರರು

ಮಂಗಳೂರು, ಜ. 28: ಬೆಳಕು ಮೀನುಗಾರಿಕೆ ನಡೆಸಿ ಮಂಗಳೂರು ಬಂದರು ದಕ್ಕೆ ಸೇರಲು ಮುಂದಾದ ಪರ್ಸಿನ್ ಮತ್ತು ಬುಲ್‌ಟ್ರಾಲ್ ಮೀನುಗಾರರನ್ನು ಸಾಂಪ್ರದಾಯಿಕ ಮೀನುಗಾರರು ಸೋಮವಾರ ಅವಕಾಶ ಕಲ್ಪಿಸದ ಕಾರಣ ದಕ್ಕೆಯಲ್ಲಿ ಕೆಲಕಾಲ ಬಿಗುವಿನ ವಾತಾವರಣ ಕಂಡು ಬಂತು. ಈ ಮಧ್ಯೆ ಪೊಲೀಸ್ ವಾಹನ ಬಂದರು ದಕ್ಕೆಯಲ್ಲಿ ಬೀಡುಬಿಟ್ಟಿದ್ದು, ಅಹಿತಕರ ಘಟನೆ ನಡೆಯದಂತೆ ಮುಂಜಾಗರೂಕತೆ ವಹಿಸಿದೆ.

ಸಮುದ್ರದ ತೀರದಿಂದ 12 ನಾಟಿಕಲ್‌ ನಾಚೆಗೆ ಸಮುದ್ರೊಳಗೆ ಮತ್ತು ಹೊರಗೆ ಲೈಟ್ ಫಿಶಿಂಗ್ (ಬೆಳಕು ಹಾಯಿಸಿ)ಮೀನುಗಾರಿಕೆಯನ್ನು ರಾಜ್ಯ ಸರಕಾರ ಈ ಹಿಂದೆ ನಿಷೇಧಿಸಿತ್ತು. ಇದರ ವಿರುದ್ಧ ಪರ್ಸಿನ್ ಮೀನುಗಾರರ ಸಂಘಟನೆಯು ಹೈಕೋರ್ಟ್ ಮೆಟ್ಟಲೇರಿತ್ತು. ಅದರಂತೆ ಹೈಕೋರ್ಟ್ ಜ.21ಕ್ಕೆ ನೀಡಿದ ಆದೇಶದಲ್ಲಿ 12 ನಾಟಿಕಲ್ ಮೈಲಿನಾಚೆ ಲೈಟ್ ಫಿಶಿಂಗ್‌ಗೆ ಅನುಮತಿ ನೀಡಿತ್ತು. ಈ ಆದೇಶದ ಪ್ರತಿಯನ್ನು ಅಖಿಲ ಕರ್ನಾಟಕ ಪರ್ಸಿನ್ ಮೀನುಗಾರರ ಸಂಘವು ದ.ಕ.ಜಿಲ್ಲಾ ಮೀನುಗಾರಿಕಾ ಉಪನಿರ್ದೇಶಕರಿಗೆ ನೀಡಿ ಲೈಟ್ ಫಿಶಿಂಗ್ ಮಾಡಲು ನಿರ್ಧರಿಸಿತ್ತು. ಇದನ್ನು ತಿಳಿದ ಸಾಂಪ್ರದಾಯಿಕ ಮೀನುಗಾರರು, ವ್ಯಾಪಾರಸ್ಥರು ಶನಿವಾರ ಬಂದರು ದಕ್ಕೆಯಲ್ಲಿರುವ ಮೀನುಗಾರಿಕಾ ಉಪನಿರ್ದೇಶಕರ ಕಚೇರಿಯ ಮುಂದೆ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ ಯಾವ ಕಾರಣಕ್ಕೂ ಲೈಟ್ ಫಿಶಿಂಗ್ ಮಾಡಬಾರದು ಎಂದು ಆಗ್ರಹಿಸಿದ್ದರು.

ಇದರ ಮಧ್ಯೆ ಪರ್ಸಿನ್ ಮತ್ತು ಬುಲ್‌ಟ್ರಾಲ್ ಮೀನುಗಾರರು ಬೆಳಕು ಫಿಶಿಂಗ್‌ಗೆ ತೆರಳಿತ್ತು. ಈ ಮೀನುಗಾರರ ಪೈಕಿ ಸುಮಾರು 7 ಬೋಟ್‌ಗಳು ಸೋಮವಾರ ಬಂದರು ದಕ್ಕೆ ಸೇರುವ ಮುನ್ಸೂಚನೆ ಪಡೆದ ಸಾಂಪ್ರದಾಯಿಕ ಮೀನುಗಾರರು, ವ್ಯಾಪಾರಸ್ಥರು ದಕ್ಕೆಯಲ್ಲಿ ಜಮಾಯಿಸಿದರು. ಅಲ್ಲದೆ ದಡದ ಸಮೀಪದ ಬಂದ 2 ಬೋಟನ್ನು ವಾಪಸ್ ಕಳುಹಿಸಿದರು ಎನ್ನಲಾಗಿದೆ. ಹಾಗಾಗಿ ಬೆಳಕು ಮೀನುಗಾರಿಕೆ ನಡೆಸಿದ್ದ ಮೀನುಗಾರರು ಕಡಲಲ್ಲೇ ಬಾಕಿಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಒಟ್ಟಿನಲ್ಲಿ ದಕ್ಕೆಯಲ್ಲಿ ಬಿಗುವಿನ ವಾತಾವರಣವಿದ್ದು, ಪೊಲೀಸರು ಬೀಡುಬಿಟ್ಟಿದ್ದಾರೆ.

ಟ್ರಾಲ್‌ಬೋಟ್ ಮೀನುಗಾರರ ಸಂಘದ ಸಭೆ: ಸರಕಾರದ ದ್ವಂದ ನಿಲುವಿನಿಂದ ಆಕ್ರೋಶಗೊಂಡಿರುವ ಟ್ರಾಲ್‌ಬೋಟ್ ಮೀನುಗಾರರು ಸಂಘದ ಪದಾಧಿಕಾರಿಗಳು ಸೋಮವಾರ ಸಭೆ ಸೇರಿ ಈ ಬಗ್ಗೆ ಚರ್ಚೆ ನಡೆಸಿದ್ದಾರಲ್ಲದೆ, ಕಾನೂನು ಹೋರಾಟ ಮಾಡಲು ತಂಡವೊಂದನ್ನು ರಚಿಸಿದ್ದಾರೆ. ಅಲ್ಲದೆ, ಬುಧವಾರ ಸಂಘದ ಮಹಾಸಭೆಯನ್ನು ಕರೆದು ಮುಂದಿನ ಹೋರಾಟದ ಬಗ್ಗೆ ತೀರ್ಮಾನಿಸಲು ನಿರ್ಧರಿಸಲಾಗಿದೆ ಎಂದು ಸಂಘದ ಅಧ್ಯಕ್ಷ ನಿತಿನ್ ಕುಮಾರ್ ಪತ್ರಿಕೆಗೆ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X