Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಸತುವು ಸಮೃದ್ಧವಾಗಿರುವ ಆಹಾರಗಳು…

ಸತುವು ಸಮೃದ್ಧವಾಗಿರುವ ಆಹಾರಗಳು…

ವಾರ್ತಾಭಾರತಿವಾರ್ತಾಭಾರತಿ28 Jan 2019 8:16 PM IST
share
ಸತುವು ಸಮೃದ್ಧವಾಗಿರುವ ಆಹಾರಗಳು…

ಶರೀರದಲ್ಲಿ ಝಿಂಕ್ ಅಥವಾ ಸತುವಿನ ಕೊರತೆಯು ಅಧಿಕ ರಕ್ತದೊತ್ತಡಕ್ಕೆ ಗುರಿಯಾಗುವ ಅಪಾಯವನ್ನು ಹೆಚ್ಚಿಸುತ್ತದೆ ಎನ್ನುವುದು ಅಮೆರಿಕದ ರೈಟ್ ಸ್ಟೇಟ್ ವಿವಿಯ ಇತ್ತೀಚಿನ ಅಧ್ಯಯನವೊಂದು ಬಹಿರಂಗಗೊಳಿಸಿದೆ. ಪೋಷಕಾಂಶವಾಗಿರುವ ಸತುವು ಶರೀರದ ಮೇಲೆ ದಾಳಿಯಿಡುವ ಬ್ಯಾಕ್ಟೀರಿಯಾಗಳನ್ನು ನಿವಾರಿಸುವಲ್ಲಿ ರೋಗ ನಿರೋಧಕ ವ್ಯವಸ್ಥೆಗೆ ನೆರವಾಗುತ್ತದೆ.

ನಮ್ಮ ಮೂತ್ರಪಿಂಡಗಳು ಸೋಡಿಯಂ ಅನ್ನು ವಿಸರ್ಜಿಸುವ ಮತ್ತು ಶರೀರದಿಂದ ಅದನ್ನು ಮರುಹೀರಿಕೊಳ್ಳುವ ರೀತಿಯು ನಮ್ಮ ರಕ್ತದೊತ್ತಡದ ಮೇಲೂ ಪರಿಣಾಮವನ್ನುಂಟು ಮಾಡುತ್ತದೆ ಎಂದು ಅಧ್ಯಯನ ವರದಿಯು ಹೇಳಿದೆ. ಸತುವಿನ ಕೊರತೆಯು ಲಕ್ಷಾಂತರ ಜನರನ್ನು ,ವಿಶೇಷವಾಗಿ ಟೈಪ್-1 ಮಧುಮೇಹ ಅಥವಾ ದೀರ್ಘಕಾಲಿಕ ಮೂತ್ರಪಿಂಡ ರೋಗದಿಂದ ಬಳಲುತ್ತಿರುವವರನ್ನು ಕಾಡುವ ಸಾಮಾನ್ಯ ಸಮಸ್ಯೆಯಾಗಿದೆ.

ಸತುವು ಸಮೃದ್ಧವಾಗಿರುವ ಆಹಾರಗಳು

ಸಂತಾನೋತ್ಪತ್ತಿ ವ್ಯವಸ್ಥೆ ಮತ್ತು ರೋಗ ನಿರೋಧಕ ಶಕ್ತಿಯ ಬೆಳವಣಿಗೆ ಮತ್ತು ಕಾರ್ಯ ನಿರ್ವಹಣೆಯಲ್ಲಿ ಸತುವು ಪ್ರಮುಖ ಪಾತ್ರವನ್ನು ಹೊಂದಿದೆ. ಸತುವಿನ ಕೊರತೆಯು ತಲೆಗೂದಲು ಉದುರುವಿಕೆ,ಚರ್ಮದ ಸೋಂಕುಗಳು ಇತ್ಯಾದಿ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಸತುವು ಸಮೃದ್ಧವಾಗಿರುವ ಕೆಲವು ಆಹಾರಗಳ ಮಾಹಿತಿ ಇಲ್ಲಿದೆ...

ಮೊಟ್ಟೆ: ಮೊಟ್ಟೆಯ ಹಳದಿ ಭಾಗವು ಸತುವಿನ ಆಗರವಾಗಿದ್ದು, ಈ ಖನಿಜಾಂಶದ ಕೊರತೆಯಿಂದ ಶರೀರವನ್ನು ಕಾಡುವ ಸೋಂಕುಗಳು ಮತ್ತು ಇತರ ಕಾಯಿಲೆಗಳನ್ನು ದೂರವಿಡಲು ನೆರವಾಗುತ್ತದೆ.

ಧಾನ್ಯಗಳು: ಧಾನ್ಯಗಳು ನಮ್ಮ ಶರೀರಕ್ಕೆ ದಿನನಿತ್ಯ ಅಗತ್ಯವಾಗಿರುವ ಸತುವನ್ನು ಒದಗಿಸುತ್ತವೆ. ಅವು ವಿಟಾಮಿನ್‌ಗಳು ಮತ್ತು ಖನಿಜಗಳನ್ನೂ ಹೆಚ್ಚಿನ ಪ್ರಮಾಣದಲ್ಲಿ ಒಳಗೊಂಡಿವೆ.

ಮಾಂಸ: ವಾರಕ್ಕೆರಡು ಬಾರಿ ಮಾಂಸವನ್ನು ಸೇವಿಸುವುದರಿಂದ ಶರೀರದಲ್ಲಿಯ ಸತುವಿನ ಕೊರತೆ ನೀಗುತ್ತದೆ. ಬೀಫ್,ಮಟನ್ ಮತ್ತು ಕೋಳಿಯ ಮಾಂಸ ಸಾಕಷ್ಟು ಸತುವನ್ನು ಒಳಗೊಂಡಿವೆ. ಆದರೆ ಇವು ಅಧಿಕ ಕೊಲೆಸ್ಟ್ರಾಲ್ ಮತ್ತು ಕೊಬ್ಬುಗಳನ್ನೂ ಒಳಗೊಂಡಿರುವುದರಿಂದ ಇವುಗಳ ಸೇವನೆಯ ಬಳಿಕ ವ್ಯಾಯಾಮ ಅಗತ್ಯವಾಗಿದೆ.

ಕುಂಬಳ ಬೀಜಗಳು: 100 ಗ್ರಾಂ. ಕುಂಬಳದ ಬೀಜಗಳನ್ನು ನಿಯಮಿತವಾಗಿ ತಿನ್ನುವುದರಿಂದ ಶರೀರಕ್ಕೆ ಪ್ರತಿನಿತ್ಯ ಅಗತ್ಯವಾಗಿರುವ ಸತುವು ದೊರೆಯುತ್ತದೆ. ಇವುಗಳ ಅತ್ಯುತ್ತಮ ಲಾಭವನ್ನು ಪಡೆಯಲು ಹಸಿಯಾಗಿಯೇ ತಿನ್ನಬೇಕು.

ಬೆಳ್ಳುಳ್ಳಿ: ಬೆಳ್ಳುಳ್ಳಿಯು ನಮ್ಮ ಶರೀರವನ್ನು ವಿವಿಧ ಕಾಯಿಲೆಗಳಿಂದ ದೂರವಿಡಲು ನೆರವಾಗುವ ಪೋಷಕಾಂಶಗಳನ್ನು ಒಳಗೊಂಡಿದೆ. ಇದರಲ್ಲಿ ಸತುವು ಸಾಕಷ್ಟು ಪ್ರಮಾಣದಲ್ಲಿದ್ದು,ಮ್ಯಾಂಗನೀಸ್,ವಿಟಾಮಿನ್ ಬಿ6,ವಿಟಾಮಿನ್ ಸಿ ಮತ್ತು ಸೆಲೆನಿಯಂ ಹೆಚ್ಚಿನ ಪ್ರಮಾಣದಲ್ಲಿರುತ್ತವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X