Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೂಡುಬಿದಿರೆ: ಎಂ.ಸಿ.ಎಸ್. ಬ್ಯಾಂಕ್...

ಮೂಡುಬಿದಿರೆ: ಎಂ.ಸಿ.ಎಸ್. ಬ್ಯಾಂಕ್ ನಿರ್ದೇಶಕರ ಚುನಾವಣೆ

ಅಮರನಾಥ ಶೆಟ್ಟಿ ಬಳಗಕ್ಕೆ ಭರ್ಜರಿ ಬಹುಮತ

ವಾರ್ತಾಭಾರತಿವಾರ್ತಾಭಾರತಿ28 Jan 2019 9:03 PM IST
share
ಮೂಡುಬಿದಿರೆ: ಎಂ.ಸಿ.ಎಸ್. ಬ್ಯಾಂಕ್ ನಿರ್ದೇಶಕರ ಚುನಾವಣೆ

ಮೂಡುಬಿದಿರೆ, ಜ. 28: ಮುಂದಿನ 2019 ಎಪ್ರಿಲ್ ನಿಂದ 2024ರ ಮಾರ್ಚ್‍ವರೆಗಿನ 5 ಸಹಕಾರಿ ವರ್ಷಗಳ ಅವಧಿಗೆ ರವಿವಾರ ಬ್ಯಾಂಕಿನ ಆವರಣದಲ್ಲಿ ನಡೆದ ನಿರ್ದೇಶಕರುಗಳ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ , ಮಾಜಿ ಸಚಿವ ಕೆ. ಅಮರನಾಥ ಶೆಟ್ಟಿಯವರ ಪಕ್ಷಾತೀತ ಬಳಗಕ್ಕೆ ಸಹಕಾರಿಗಳ ಬಹುಮತ ಲಭಿಸಿದೆ. ಈ ಬಾರಿ 11ರಿಂದ 13ಕ್ಕೇರಿದ್ದ ನಿರ್ದೇಶಕರುಗಳ ಸ್ಥಾನಗಳ ಪೈಕಿ ಮೂರು ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿತ್ತು. ಉಳಿದಂತೆ ಒಟ್ಟು 14 ಮಂದಿ ಉಮೇದುವಾರರಿದ್ದ ಉಳಿದ 10 ಸ್ಥಾನಗಳಿಗೆ ಚುನಾವಣೆ ನಡೆಯಿತು. ಒಟ್ಟು 7245 ಸಹಕಾರಿ ಮತಗಳ ಪೈಕಿ 3039 ಮತಗಳು ಚಲಾವಣೆಯಾಗಿವೆ.

ಫಲಿತಾಂಶ: 

7 ಸಾಮಾನ್ಯ ಸ್ಥಾನಗಳಿಗೆ 1. ಕೆ. ಅಮರನಾಥ ಶೆಟ್ಟಿ (2496 ಮತಗಳು), 2. ಎಂ.ಪಿ.ಅಶೋಕ್ ಕಾಮತ್ ( 2262), ಮನೋಜ್ ಕುಮಾರ್ ಶೆಟ್ಟಿ(2168), ಬಾಹುಬಲಿ ಪ್ರಸಾದ್ ಎಂ.(2063), ಎಂ.ಜ್ಞಾನೇಶ್ವರ ಕಾಳಿಂಗ ಪೈ (1938), ಅಬ್ದುಲ್ ಗಫೂರ್ ಸಿ.ಹೆಚ್ (1798), ಜಾರ್ಜ್ ಮೋನಿಸ್ (1797) ಆಯ್ಕೆಯಾಗಿದ್ದಾರೆ. ಸಹಕಾರ ಭಾರತಿ ಬೆಂಬಲಿತರಾಗಿದ್ದ ಟಿ.ರಘುವೀರ ಶೆಣೈ (1755) ಮತ್ತು ಪ್ರಸಾದ್ ಕುಮಾರ್(1356) ಪರಾಭವ ಗೊಂಡರು. ಈ ವಿಭಾಗದಲ್ಲಿ 164  ಅಸಿಂಧು ಮತಗಳಿದ್ದವು.

2 ಮಹಿಳಾ ಮೀಸಲು ಸ್ಥಾನಗಳಿಗೆ 1. ಪ್ರೇಮಾ ಎಸ್. ಸಾಲ್ಯಾನ್ (2080) 2. ಅನಿತಾ ಶೆಟ್ಟಿ (1805) ಆಯ್ಕೆಯಾಗಿದ್ದು ಸಹಕಾರ ಭಾರತಿ ಬೆಂಬಲಿತರಾಗಿದ್ದ ಯಶೋಧಾ ಎಸ್. ಸಾಲ್ಯಾನ್ (1039) ಪರಾಭವಗೊಂಡರು. ಇಲ್ಲಿ 332 ಅಸಿಂಧು ಮತಗಳಿದ್ದವು.

1 ಪರಿಶಿಷ್ಟ ಜಾತಿ ಮೀಸಲು ಸ್ಥಾನಕ್ಕೆ ಎಂ.ಪದ್ಮನಾಭ (1786) ಆಯ್ಕೆಯಾದರೆ ಸ್ವತಂತ್ರ ಅಭ್ಯರ್ಥಿಯಾಗಿದ್ದ ಕೊರಗಪ್ಪ (1036) ಪರಾಭವ ಕಂಡರು. ಇಲ್ಲಿ 452 ಅಸಿಂಧು ಮತಗಳಿದ್ದವು.

ಪ.ಪಂಗಡಕ್ಕೆ ಮೀಸಲಾದ 1 ಸ್ಥಾನಕ್ಕೆ ದಯಾನಂದ ನಾಯ್ಕ , ಹಿಂದುಳಿದ ವರ್ಗ  ಪ್ರವರ್ಗ-ಎ ಮೀಸಲಾದ 2 ಸ್ಥಾನಕ್ಕೆ ಗಣೇಶ್ ನಾಯಕ್ ಮತ್ತು ಜಯರಾಮ ಕೋಟ್ಯಾನ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದರು. ನೂತನ ಆಯ್ಕೆಯಲ್ಲಿ ಹೆಚ್ಚಳವಾದ 2 ಸ್ಥಾನಗಳೂ ಸೇರಿದಂತೆ ಒಟ್ಟು ನಾಲ್ಕು ಹೊಸ ಮುಖಗಳಿವೆ.

ಅಭಿನಂದನೆ: ರವಿವಾರ ರಾತ್ರಿ 8.30ರ ವೇಳೆಗೆ ಫಲಿತಾಂಶದ ಸ್ಪಷ್ಟ ಚಿತ್ರಣ ದೊರೆಯುತ್ತಿದ್ದಂತೆ ಚುನಾವಣಾಧಿಕಾರಿ, ಸಹಕಾರಿ ಉಪನಿಬಂಧಕರ ಕಛೇರಿಯ ವಿಲಾಸ್ ವಿವರಗಳನ್ನು ಅಧಿಕೃತವಾಗಿ ಘೋಷಿಸಿದರು. ಬಳಿಕ ಆಯ್ಕೆಯಾದ ನಿರ್ದೇಶಕರುಗಳು ಕೆ. ಅಮರನಾಥ ಶೆಟ್ಟಿ ಅಧ್ಯಕ್ಷತೆಯಲ್ಲಿ ಸಭೆ ಸೇರಿ ಚುನಾವಣಾ ಪ್ರಕ್ರಿಯೆಗಳನ್ನು ನಡೆಸಿದ ತಂಡಕ್ಕೆ ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕೆ. ಅಮರನಾಥ ಶೆಟ್ಟಿಯವರು ಬ್ಯಾಂಕಿನಿಂದ ದೊರೆತಿರುವ ಉತ್ತಮ ಸೇವೆಯಿಂದಾಗಿ ಜನತೆ ಮತ್ತೆ ನಮ್ಮನ್ನು ವಿಶ್ವಾಸದಿಂದ ಆರಿಸಿದೆ. ಅವರ ಪ್ರೀತಿ, ವಿಶ್ವಾಸ, ಆಶಯದಂತೆ ಸಂಸ್ಥೆ ಮುನ್ನಡೆಯಲು ಎಲ್ಲರ ಸಹಕಾರ ಅಗತ್ಯವಿದೆ ಎಂದರು. ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಚಂದ್ರಶೇಖರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X