Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗುಡಿಸಲಲ್ಲಿ ವಾಸಿಸುವ ಶಾಸಕನಿಗೆ ಮನೆ...

ಗುಡಿಸಲಲ್ಲಿ ವಾಸಿಸುವ ಶಾಸಕನಿಗೆ ಮನೆ ನಿರ್ಮಿಸುತ್ತಿರುವ ಮತದಾರರು

ವಾರ್ತಾಭಾರತಿವಾರ್ತಾಭಾರತಿ30 Jan 2019 4:56 PM IST
share
ಗುಡಿಸಲಲ್ಲಿ ವಾಸಿಸುವ ಶಾಸಕನಿಗೆ ಮನೆ ನಿರ್ಮಿಸುತ್ತಿರುವ ಮತದಾರರು

ಭೋಪಾಲ್, ಜ. 30: ರಾಜಕಾರಣಿಗಳು ಶ್ರೀಮಂತರಾಗಿರುತ್ತಾರೆ ಎಂಬುದು ಸಾಮಾನ್ಯ ನಂಬಿಕೆ. ಆದರೆ ಮಧ್ಯ ಪ್ರದೇಶದ ಶಿಯೋಪುರ್ ನಲ್ಲಿರುವ ವಿಜಯಪುರ್ ಕ್ಷೇತ್ರದ 55 ವರ್ಷದ ನೂತನ ಬಿಜೆಪಿ ಶಾಸಕ ಸೀತಾರಾಂ ಆದಿವಾಸಿ ತಮ್ಮ ಪತ್ನಿಯೊಂದಿಗೆ ಮುಳಿಹುಲ್ಲಿನ ಗುಡಿಸಲಿನಲ್ಲಿ ವಾಸಿಸುತ್ತಿದ್ದಾರೆ.

ಅವರ ಪಾಡನ್ನು ನೋಡಿ ಅವರ ಕ್ಷೇತ್ರದ ಜನತೆ ದೇಣಿಗೆ ನೀಡಿ ಅವರಿಗೆ ಮನೆಯೊಂದನ್ನು ನಿರ್ಮಿಸುತ್ತಿದ್ದಾರೆ. ಸೀತಾರಾಂ ಅವರು ಚುನಾವಣೆಯಲ್ಲಿ ಸ್ಥಳೀಯ ಪ್ರಬಲ ಕಾಂಗ್ರೆಸ್ ನಾಯಕ ರಾಮನಿವಾಸ್ ರಾವತ್ ಅವರನ್ನು ಸೋಲಿಸಿದ್ದರು.

ಶಾಸಕರು ತಮಗಾಗಿ ಹಲವು ಹೋರಾಟ ನಡೆಸಿರುವುದರಿಂದ ಅವರಿಗಾಗಿ ಮನೆ ನಿರ್ಮಿಸಲು ಎಲ್ಲರೂ ತುಂಬು ಮನಸ್ಸಿನ ಸಹಕಾರ ನೀಡುತ್ತಿದ್ದಾರೆ. ಪ್ರತಿಯೊಬ್ಬರೂ ತಮ್ಮ ಕೈಲಾದಷ್ಟು ಹಣ ನೀಡುತ್ತಿದ್ದಾರೆ. ಅವರು ಚುನಾವಣೆಯಲ್ಲಿ ಗೆದ್ದಾಗ ನಾಣ್ಯ ತುಲಾಭಾರವನ್ನೂ ಮತದಾರರು ನಡೆಸಿದ್ದು ಈ ಹಣವನ್ನೂ ಮನೆ ನಿರ್ಮಿಸಲು ಶಾಸಕರು ನೀಡಿದ್ದಾರೆ.

ತಮ್ಮ ಬಳಿ ಮನೆ ನಿರ್ಮಿಸಲು ಅಗತ್ಯ ಹಣವಿಲ್ಲ ಎಂದು ಶಾಸಕ ಒಪ್ಪಿಕೊಳ್ಳುತ್ತಾರೆ.  ಅವರು ತಮ್ಮ ಕ್ಷೇತ್ರದ ಜನರ ಕಲ್ಯಾಣಕ್ಕಾಗಿ ಹೋರಾಡುವುದರಿಂದ ಎಲ್ಲರೂ ಅವರ ಮೇಲೆ ಅಭಿಮಾನ ಹೊಂದಿದ್ದಾರೆಂದು ಶಾಸಕರ ಪತ್ನಿ ಇಮಾರ್ತಿ ಭಾಯಿ ಹೇಳುತ್ತಾರೆ.

ಚುನಾವಣೆ ಸ್ಪರ್ಧಿಸುವ ಸಂದರ್ಭ ಆಸ್ತಿ ಘೋಷಣಾ ಪತ್ರದಲ್ಲಿ ಅವರು ತಮ್ಮ ಬಳಿ ರೂ 46,733   ಹಣವಿದೆಯೆಂದು ಅದರಲ್ಲಿ ರೂ 25,000 ನಗದು  ಆಗಿದ್ದರೆ ಉಳಿದ  ಹಣ ಎರಡು ಬ್ಯಾಂಕ್ ಠೇವಣಿ ರೂಪದಲ್ಲಿದೆ ಎಂದು ಮಾಹಿತಿ ನೀಡಿದ್ದರು. ಇದರ ಹೊರತಾಗಿ ಅವರ ಗುಡಿಸಲಿರುವ 600 ಚದರ ಅಡಿ ಜಾಗ ಹಾಗೂ ಇನ್ನೊಂದು ಎರಡು ಎಕರೆ ಭೂಮಿ ಅವರ ಹೆಸರಲ್ಲಿದ್ದು ಇವುಗಳ ಮಾರುಕಟ್ಟೆ ಮೌಲ್ಯ 5 ಲಕ್ಷ ರೂ. ಆಗಿದೆ.

ಮಧ್ಯ ಪ್ರದೇಶದಲ್ಲಿ ಶಾಸಕರಿಗೆ ಮಾಸಿಕ 1.10 ಲಕ್ಷ ರೂ. ಸಂಭಾವನೆ ದೊರೆಯುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X