Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಾಕಿ ಪಿಂಚಣಿ ಬಗ್ಗೆ ವಾರದೊಳಗೆ ತನಿಖೆ...

ಬಾಕಿ ಪಿಂಚಣಿ ಬಗ್ಗೆ ವಾರದೊಳಗೆ ತನಿಖೆ ನಡೆಸಿ ಸರಕಾರಕ್ಕೆ ವರದಿ: ಉಡುಪಿ ತಹಶೀಲ್ದಾರ್ ಪ್ರದೀಪ್ ಕುರ್ಡೆಕರ್

ಉಡುಪಿ ತಾಪಂ ಸಾಮಾನ್ಯ ಸಭೆ

ವಾರ್ತಾಭಾರತಿವಾರ್ತಾಭಾರತಿ30 Jan 2019 7:22 PM IST
share
ಬಾಕಿ ಪಿಂಚಣಿ ಬಗ್ಗೆ ವಾರದೊಳಗೆ ತನಿಖೆ ನಡೆಸಿ ಸರಕಾರಕ್ಕೆ ವರದಿ: ಉಡುಪಿ ತಹಶೀಲ್ದಾರ್ ಪ್ರದೀಪ್ ಕುರ್ಡೆಕರ್

ಉಡುಪಿ, ಜ.30: ಆಧಾರ್ ಡುಪ್ಲಿಕೇಶನ್ ಸಮಸ್ಯೆಯಿಂದಾಗಿ ಕಳೆದ ಕೆಲವು ತಿಂಗಳುಗಳಿಂದ ಬಿಡುಗಡೆಯಾಗದೆ ಬಾಕಿ ಇರುವ ವಿವಿಧ ಪಿಂಚಣಿಗಳ ಕುರಿತ ತನಿಖೆಯನ್ನು ವಾರದೊಳಗೆ ಪೂರ್ಣಗೊಳಿಸಿ ರಾಜ್ಯ ಸರಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಉಡುಪಿ ತಹಶೀಲ್ದಾರ್ ಪ್ರದೀಪ್ ಕುರ್ಡೆಕರ್ ತಿಳಿಸಿದ್ದಾರೆ.

ಉಡುಪಿ ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್ ಅಧ್ಯಕ್ಷತೆಯಲ್ಲಿ ಇಂದು ನಡೆದ ತಾಲೂಕು ಪಂಚಾಯತ್ ಸಾಮಾನ್ಯ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಸದಸ್ಯೆ ಡಾ.ಸುನೀತಾ ಶೆಟ್ಟಿ, ಉಡುಪಿ ಜಿಲ್ಲೆಯ ಹಲವು ಮಂದಿಯ ವಿವಿಧ ಪಿಂಚಣಿಗಳು ಕಳೆದ ಆರು ತಿಂಗಳುಗಳಿಂದ ಬಾಕಿ ಇದ್ದು, ಇದರಿಂದ ಹಲವು ಮಂದಿ ಸಂಕಷ್ಟದಲ್ಲಿದ್ದಾರೆ. ಆಧಾರ್ ಕಾರ್ಡ್ ಡುಪ್ಲಿಕೇಶನ್ ಸಮಸ್ಯೆಯಿಂದ ಈ ರೀತಿಯಾಗಿರುವುದರಿಂದ ಹಾಸಿಗೆ ಹಿಡಿದ ವೃದ್ಧರು ಕೂಡ ಅಂಚೆ ಕಚೇರಿಗೆ ಹೋಗಬೇಕಾದ ಪರಿಸ್ಥಿತಿ ಇದೆ ಎಂದು ದೂರಿದರು.

ಇದಕ್ಕೆ ಪ್ರತಿಕ್ರಿಯಿಸಿದ ತಹಶೀಲ್ದಾರ್, ಉಡುಪಿ ಹಾಗೂ ಕಾಪು ತಾಲೂಕು ಗಳಲ್ಲಿ 343 ಹಾಗೂ ಬ್ರಹ್ಮಾವರ ತಾಲೂಕಿನಲ್ಲಿ 829 ಮಂದಿಯ ಪಿಂಚಣಿ ಆಧಾರ್ ಡುಪ್ಲಿಕೇಶನ್ ಸಮಸ್ಯೆಯಿಂದ ಕಳೆದ ಕೆಲವು ತಿಂಗಳುಗಳಿಂದ ಬಾಕಿಯಾಗಿದ್ದು, 25 ಮಂದಿಯ ಪಿಂಚಣಿಯು ರದ್ದಾಗಿದೆ. ಈ ಕುರಿತು ನಡೆಸುತ್ತಿರುವ ತನಿಖೆಯು ಶೇ.90ರಷ್ಟು ಪೂರ್ಣಗೊಂಡಿದ್ದು, ಬಾಕಿ ತನಿಖೆಯನ್ನು ವಾರ ದೊಳಗೆ ಪೂರ್ಣಗೊಳಿಸಿ ಸರಕಾರಕ್ಕೆ ವರದಿಯನ್ನು ಕಳುಹಿಸಿಕೊಡಲಾಗುವುದು ಎಂದರು.

ನೋಂದಾವಣಿ ಕಚೇರಿ ಅವ್ಯವಸ್ಥೆ: ಬ್ರಹ್ಮಾವರ ಉಪನೋಂದಾವಣಿ ಕಚೇರಿಯ ಅವ್ಯವಸ್ಥೆ ವಿರುದ್ಧ ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್ ಅವರೇ ಸಭೆಯಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸ್ಥಾಯಿ ಸಮಿತಿ ಅಧ್ಯಕ್ಷ ಭುಜಂಗ ಶೆಟ್ಟಿ ಕೂಡ ಧ್ವನಿಗೂಡಿಸಿದರು.

ಇಲ್ಲಿ ಯಾವುದೇ ನೊಂದಣಿ ಕಾರ್ಯ ಆಗುತ್ತಿಲ್ಲ. ಕಚೇರಿಯಲ್ಲಿ ಉಪ ನೋಂದಾಣಿ ಅಧಿಕಾರಿಯೇ ಇಲ್ಲ. ಸರಿಯಾದ ಕಂಪ್ಯೂಟರ್ ವ್ಯವಸ್ಥೆ ಕೂಡ ಇಲ್ಲ. ಶೌಚಾಲಯ ಸರಿಯಾಗಿ ಇಲ್ಲ. ಇದರಿಂದ ಗ್ರಾಮೀಣ ಪ್ರದೇಶದ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಬಗ್ಗೆ ಸಭೆಯಲ್ಲಿ ನಿರ್ಣಯ ಮಾಡಿ ಸರಕಾರಕ್ಕೆ ಪತ್ರ ಬರೆಯಬೇಕು ಎಂದು ತಾಪಂ ಕಾರ್ಯನಿರ್ವಹಣಾ ಧಿಕಾರಿಗೆ ಅಧ್ಯಕ್ಷರು ಸೂಚನೆ ನೀಡಿದರು.

ಸದಸ್ಯ ಧನಂಜಯ್ ಮಾತನಾಡಿ, ಕೇಳಾರ್ಕಳಬೆಟ್ಟು ಸರಕಾರಿ ಶಾಲೆಗಳಲ್ಲಿ ನಾಲ್ಕು ಮತಗಟ್ಟೆಗಳಿದ್ದು, ಅದರಲ್ಲಿ ಎರಡು ಮತಗಟ್ಟೆಯನ್ನು ತೆಂಕನಿಡಿಯೂರು ಸರಕಾರಿ ಕಾಲೇಜಿಗೆ ವರ್ಗಾಯಿಸಬೇಕು. ಇದರಿಂದ ಸ್ಥಳೀಯ ಜನರಿಗೆ ಹತ್ತಿರ ಆಗುತ್ತದೆ ಎಂದು ಒತ್ತಾಯಿಸಿದರು. ಇದಕ್ಕೆ ಉತ್ತರಿಸಿದ ತಹಶೀಲ್ದಾರ್, ಈ ಬಗ್ಗೆ ಮುಂದಿನ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಪರಿಶೀಲನೆ ನಡೆಸಲಾಗುತ್ತದೆ ಎಂದರು.

ಸಂತ್ರಸ್ತರಿಗೆ ಪರಿಹಾರ ನೀಡಿ: ಪಾದೂರು ತೈಲಾಗಾರ ಕಾಮಗಾರಿ ಸಂದರ್ಭ ಸ್ಫೋಟಗೊಂಡು ಹಾನಿಯಾದ ಮನೆಗಳಿಗೆ ಈವರೆಗೆ ಪರಿಹಾರ ಸಿಕ್ಕಿಲ್ಲ ಎಂದು ನಾಮನಿರ್ದೇಶಿತ ಸದಸ್ಯ ಮಜೂರು ಗ್ರಾಪಂ ಅಧ್ಯಕ್ಷ ಸಂದೀಪ್ ರಾವ್ ದೂರಿದರು.

ಕಳೆದ ವರ್ಷ ಲೋಕೋಪಯೋಗಿ ಇಲಾಖೆಯವರು ಪರಿಶೀಲನೆ ಮಾಡಿ 91 ಮನೆಗಳಿಗೆ ಪರಿಹಾರ ನೀಡುವಂತೆ ವರದಿ ನೀಡಿದ್ದರು. ಆದರೆ ಪರಿಹಾರ ನೀಡಲು ಕಂಪೆನಿ ನಿರಾಕರಿಸಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಕೂಡ ಎರಡು ಮೂರು ಬಾರಿ ಸಭೆ ಕರೆದಿದ್ದಾರೆ. ಇನ್ನೂ ಸರಕಾರ ಮಟ್ಟದಲ್ಲಿ ಈ ಕೆಲಸ ಆಗ ಬೇಕಾಗಿದೆ ಎಂದು ತಹಶೀಲ್ದಾರ್ ಪ್ರದೀಪ್ ಕುರ್ಡೆಕರ್ ತಿಳಿಸಿದರು.

ಸದಸ್ಯ ದಿನೇಶ್ ಕೋಟ್ಯಾನ್ ಮಾತನಾಡಿ, ಸಾಸ್ತಾನ ಟೋಲ್‌ಗೇಟ್‌ನಲ್ಲಿ ರುವ ನಿಯಮದಂತೆ ಹೆಜಮಾಡಿ ಟೋಲ್‌ನಲ್ಲಿ ಪಡುಬಿದ್ರಿ ಜಿಪಂ ವ್ಯಾಪ್ತಿಯ ವಾಹನಗಳಿಗೆ ಉಚಿತ ಪ್ರವೇಶ ನೀಡಬೇಕು. ರಾಷ್ಟ್ರೀಯ ಹೆದ್ದಾರಿ 66ರ ಕಾಮಗಾರಿ ಪೂರ್ಣಗೊಳ್ಳುವವರೆಗೆ ಈ ಕ್ರಮ ಮುಂದುವರೆಸಬೇಕು. ಅಲ್ಲಿಯ ವರೆಗೆ ಹೆಜಮಾಡಿ ಒಳ ರಸ್ತೆಯಲ್ಲಿ ನಿರ್ಮಿಸಿರುವ ಟೋಲ್‌ಗೇಟನ್ನು ತೆರವು ಗೊಳಿಸಬೇಕು ಎಂದು ಆಗ್ರಹಿಸಿದರು.

ಸಭೆಯಲ್ಲಿ ತಾಪಂ ಉಪಾಧ್ಯಕ್ಷ ರಾಜೇಂದ್ರ ಪಿ., ಕಾರ್ಯನಿರ್ವಹಣಾಧಿಕಾರಿ ರಾಜು ಕೆ., ಸಹಾಯಕ ನಿರ್ದೇಶಕ ಹರಿಕೃಷ್ಣ ಶಿವತ್ತಾಯ ಉಪಸ್ಥಿತರಿದ್ದರು.

ಜಿಲ್ಲೆಯಲ್ಲಿ ಮಂಗನಕಾಯಿಲೆ ವರದಿಯಾಗಿಲ್ಲ

ಜಿಲ್ಲೆಯಲ್ಲಿ ಈವರೆಗೆ 95 ಮಂಗಗಳು ಸಾವಿಗೀಡಾಗಿದ್ದು, 30 ಮಂಗಗಳನ್ನು ಮರಣೋತ್ತರ ಪರೀಕ್ಷೆ ನಡೆಸಿ ಅದರ ವರದಿಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಜಿಲ್ಲೆಯ 10 ಶಂಕಿತ ಮಂಗನ ಕಾಯಿಲೆ ಪೀಡಿತರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದ್ದು, ಇವರಲ್ಲಿ ಮಂಗನ ಕಾಯಿಲೆಯ ಯಾವುದೇ ವೈರಸ್ ಕಂಡುಬಂದಿಲ್ಲ ಎಂದು ಉಡುಪಿ ಆರೋಗ್ಯಾಧಿಕಾರಿ ಡಾ.ನಾಗರತ್ನ ಮಾಹಿತಿ ನೀಡಿದರು. ಮಂಗನ ಕಾಯಿಲೆಯು ಕೇವಲ ಮಂಗನಿಂದ ಮಾತ್ರವಲ್ಲ ದನ, ಅಳಿಲು ಗಳಿಂದಲೂ ಹರಡುತ್ತದೆ. ಇದು ಮನುಷ್ಯರಿಗೂ ತಗಲುವ ರೋಗವಾಗಿದೆ. ಆದರೆ ಈ ಕಾಯಿಲೆ ಮನುಷ್ಯರಿಂದ ಮನುಷ್ಯರಿಗೆ ಹರಡುವುದಿಲ್ಲ. ಈ ಬಗ್ಗೆ ಆರೋಗ್ಯ, ಅರಣ್ಯ ಇಲಾಖೆಗಳಿಗೆ ಎಚ್ಚರಿಕೆ ನೀಡಲಾಗಿದೆ. ಕೆಲವು ಅರಣ್ಯ ಪ್ರದೇಶಗಳಲ್ಲಿ ಮಾಹಿತಿ ಫಲವನ್ನು ಅಳವಡಿಸಲಾಗಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X