Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎನ್‌ಎಸ್‌ಸಿಯನ್ನು ತೊರೆದ ಸದಸ್ಯರು...

ಎನ್‌ಎಸ್‌ಸಿಯನ್ನು ತೊರೆದ ಸದಸ್ಯರು ಸಭೆಗಳಲ್ಲಿ ಆಕ್ಷೇಪವನ್ನೆಂದೂ ವ್ಯಕ್ತಪಡಿಸಿರಲಿಲ್ಲ: ಕೇಂದ್ರ

ವಾರ್ತಾಭಾರತಿವಾರ್ತಾಭಾರತಿ30 Jan 2019 9:25 PM IST
share
ಎನ್‌ಎಸ್‌ಸಿಯನ್ನು ತೊರೆದ ಸದಸ್ಯರು ಸಭೆಗಳಲ್ಲಿ ಆಕ್ಷೇಪವನ್ನೆಂದೂ ವ್ಯಕ್ತಪಡಿಸಿರಲಿಲ್ಲ: ಕೇಂದ್ರ

ಹೊಸದಿಲ್ಲಿ,ಜ.30: ರಾಷ್ಟ್ರೀಯ ಅಂಕಿಅಂಶ ಆಯೋಗಕ್ಕೆ ರಾಜೀನಾಮೆ ನೀಡಿರುವ ಇಬ್ಬರು ಸದಸ್ಯರು ಕಳೆದ ಕೆಲವು ತಿಂಗಳುಗಳಲ್ಲಿ ಆಯೋಗದ ಯಾವುದೇ ಸಭೆಯಲ್ಲಿ ತಮ್ಮ ಕಳವಳಗಳನ್ನು ವ್ಯಕ್ತಪಡಿಸಿರಲಿಲ್ಲ ಎಂದು ಕೇಂದ್ರವು ಬುಧವಾರ ಹೇಳಿದೆ.

ಸ್ವತಂತ್ರ ಸದಸ್ಯರಾದ ಪಿ.ಸಿ.ಮೋಹನನ್ ಮತ್ತು ಜೆ.ವಿ.ಮೀನಾಕ್ಷಿ ಅವರು ಬ್ಯಾಕ್ ಸಿರೀಸ್ ಜಿಡಿಪಿ ದತ್ತಾಂಶಗಳು ಮತ್ತು ಕಾರ್ಮಿಕ ಶಕ್ತಿ ಸಮೀಕ್ಷೆಯ ಬಿಡುಗಡೆಯಲ್ಲಿ ವಿಳಂಬದ ಕುರಿತಂತೆ ಸರಕಾರದ ನಿಲುವಿನಿಂದ ಅಸಮಾಧಾನಗೊಂಡು ಆಯೋಗವನ್ನು ತೊರೆದಿರುವ ಹಿನ್ನೆಲೆಯಲ್ಲಿ ಈ ಹೇಳಿಕೆಯು ಹೊರಬಿದ್ದಿದೆ. ಮೋಹನನ್ ಅವರು ಆಯೋಗದ ಪ್ರಭಾರ ಅಧ್ಯಕ್ಷರೂ ಆಗಿದ್ದರು.

ಮಂಗಳವಾರ ರಾತ್ರಿ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಮೋಹನನ್ ಅವರು, “ನಾನು ಎನ್‌ಎಸ್‌ಸಿಗೆ ರಾಜೀನಾಮೆ ಸಲ್ಲಿಸಿದ್ದೇನೆ. ಇತ್ತೀಚಿನ ದಿನಗಳಲ್ಲಿ ಆಯೋಗವು ಅಷ್ಟೊಂದು ಪರಿಣಾಮಕಾರಿಯಾಗಿಲ್ಲ ಮತ್ತು ಆಯೋಗದ ಕರ್ತವ್ಯಗಳನ್ನು ನಿರ್ವಹಿಸಲು ನಮಗೆ ಸಾಧ್ಯವಾಗುತ್ತಿಲ್ಲ ಎನ್ನುವುದು ನಮ್ಮ ಅಭಿಪ್ರಾಯವಾಗಿದೆ” ಎಂದು ತಿಳಿಸಿದ್ದರು.

ಈ ಬಗ್ಗೆ ಸ್ಪಷ್ಟನೆಯನ್ನು ನೀಡಿರುವ ಅಂಕಿಅಂಶಗಳು ಮತ್ತು ಕಾರ್ಯಕ್ರಮ ಜಾರಿ ಸಚಿವಾಲಯವು, ಈ ಸದಸ್ಯರು ಇತ್ತೀಚಿನ ತಿಂಗಳುಗಳಲ್ಲಿ ಆಯೋಗದ ಯಾವುದೇ ಸಭೆಯಲ್ಲಿ ತಮ್ಮ ಆಕ್ಷೇಪಗಳನ್ನು ವ್ಯಕ್ತಪಡಿಸಿರಲಿಲ್ಲ ಎಂದು ತಿಳಿಸಿದೆ. ತಾನು ಆಯೋಗದ ಸಲಹೆಗಳನ್ನು ಗೌರವಿಸುತ್ತೇನೆ ಮತ್ತು ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತೇನೆ ಎಂದೂ ಅದು ಹೇಳಿದೆ.

  ರಾಷ್ಟ್ರಿಯ ಮಾದರಿ ಸರ್ವೆ ಕಚೇರಿ(ಎನ್‌ಎಸ್‌ಎಸ್‌ಒ)ಯು ನಡೆಸಿರುವ ಕಾರ್ಮಿಕ ಶಕ್ತಿ ಸರ್ವೇಕ್ಷಣೆಗೆ ಸಂಬಂಧಿಸಿದಂತೆ ಸಚಿವಾಲಯವು,ಜುಲೈ 2017ರಿಂದ ಡಿಸೆಂಬರ್ 2018ರವರೆಗಿನ ಅವಧಿಯ ತ್ರೈಮಾಸಿಕಗಳ ದತ್ತಾಂಶಗಳನ್ನು ಎನ್‌ಎಸ್‌ಎಸ್‌ಒ ಸಂಸ್ಕರಿಸುತ್ತಿದೆ ಮತ್ತು ಅದು ಪೂರ್ಣಗೊಂಡ ಬಳಿಕ ವರದಿಯು ಬಿಡುಗಡೆಗೊಳ್ಳಲಿದೆ ಎಂದು ತಿಳಿಸಿದೆ.

ಬ್ಯಾಕ್ ಸಿರೀಸ್ ಜಿಡಿಪಿ ದತ್ತಾಂಶಗಳ ಕುರಿತಂತೆ ಸಚಿವಾಲಯವು,ಅದನ್ನು ಅಂತಿಮಗೊಳಿಸುವಂತೆ ಮತ್ತು ಬಿಡುಗಡೆಗೊಳಿಸುವಂತೆ ಎನ್‌ಎಸ್‌ ಸಿಯೇ ಸಲಹೆ ನೀಡಿತ್ತು ಎಂದು ಹೇಳಿದೆ.

2011-12ನ್ನು ಆಧಾರ ವರ್ಷವಾಗಿ ಪರಿಗಣಿಸುವ ಸರಣಿಯಲ್ಲಿ ಅಳವಡಿಸಿಕೊಂಡಿರುವ ಪದ್ಧತಿಗನುಗುಣವಾಗಿ ಜಿಡಿಪಿಯ ಬ್ಯಾಕ್ ಸಿರೀಸ್ ಅಂಕಿಅಂಶಗಳನ್ನು ಲೆಕ್ಕ ಹಾಕಲಾಗಿದೆ ಮತ್ತು ರಾಷ್ಟ್ರೀಯ ಲೆಕ್ಕಪತ್ರ ಅಂಕಿಅಂಶಗಳ ಕುರಿತ ಸಲಹಾ ಸಮಿತಿಯಲ್ಲಿನ ತಜ್ಞರು ಒಪ್ಪಿಕೊಂಡಿದ್ದಾರೆ ಎಂದೂ ಸಚಿವಾಲಯವು ತಿಳಿಸಿದೆ.

ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರದ ಅವಧಿಯಲ್ಲಿ ಪ್ರಗತಿದರವು ಮೊದಲು ಅಂದಾಜಿಸಿದ್ದಷ್ಟು ಹೆಚ್ಚಿನ ಮಟ್ಟದಲ್ಲಿರಲಿಲ್ಲ ಎನ್ನುವುದು ಬೆಳಕಿಗೆ ಬಂದ ನಂತರ ಬ್ಯಾಕ್ ಸಿರೀಸ್ ಜಿಡಿಪಿ ಅಂಕಿಂಶಗಳು ವಿವಾದವನ್ನು ಸೃಷ್ಟಿಸಿದ್ದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X