Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸರಕಾರಿ ಶಾಲೆ ಉಳಿಸಲು ಹೀಗೊಂದು ಅಭಿಯಾನ

ಸರಕಾರಿ ಶಾಲೆ ಉಳಿಸಲು ಹೀಗೊಂದು ಅಭಿಯಾನ

ಧನ ಸಂಗ್ರಹಕ್ಕೆ ರಟ್ಟಿನ ಮಾದರಿಯ ಶಾಲೆ ನಿರ್ಮಾಣ

ವಾರ್ತಾಭಾರತಿವಾರ್ತಾಭಾರತಿ31 Jan 2019 8:20 PM IST
share
ಸರಕಾರಿ ಶಾಲೆ ಉಳಿಸಲು ಹೀಗೊಂದು ಅಭಿಯಾನ

#ಸರಕಾರದ ಗಮನ ಸೆಳೆಯಲು ಹಳೆ ವಿದ್ಯಾರ್ಥಿಗಳ ಹರಸಾಹಸ

ಮಂಗಳೂರು, ಜ.31: ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವ ನಗರದ ಪುರಭವನದ ಮುಂಭಾಗದ ಮೆಟ್ಟಲುಗಳ ಮಧ್ಯೆ ಗುರುವಾರ ಇಬ್ಬರು ಯುವಕರು ರಟ್ಟಿನ ಮಾದರಿಯ ಶಾಲೆಯೊಂದನ್ನು ನಿರ್ಮಿಸಿ ‘ನೀವು ಕನ್ನಡ ಅಭಿಮಾನಿಯೇ, ನಮ್ಮೂರು ಸರಕಾರಿ ಕನ್ನಡ ಶಾಲೆ ಉಳಿಸಲು ಕನಿಷ್ಠ 10 ರೂ. ದಾನ ಮಾಡುವಿರಾ?’ ಎಂಬ ಮನವಿಯ ಪೋಸ್ಟರ್ ಹಿಡಿದು ಗಮನ ಸೆಳೆದಿದ್ದಾರೆ.

ಬಂಟ್ವಾಳ ತಾಲೂಕಿನ ನೆಟ್ಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ವ್ಯಕ್ತಿಯೊಬ್ಬರ ಪಟ್ಟಾ ಜಮೀನಿನಲ್ಲಿದೆ. ಸುಮಾರು 55 ವರ್ಷಗಳ ಇತಿಹಾಸವಿರುವ ಈ ಶಾಲೆಯಲ್ಲಿ ಇದೀಗ 1ರಿಂದ 7ನೆ ತರಗತಿಯ 64 ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಸರಕಾರಿ ಶಾಲೆಯಾದರೂ ಕೂಡ ಕಟ್ಟಡವು ಖಾಸಗಿ ವ್ಯಕ್ತಿಯ ಜಮೀನಿನಲ್ಲಿರುವುದರಿಂದ ಸರಕಾರದಿಂದ ಯಾವುದೇ ಅನುದಾನ ಈ ಶಾಲೆಗೆ ಬರುತ್ತಿಲ್ಲ. ಅಲ್ಲದೆ ಕಟ್ಟಡ ದುರಸ್ತಿಗೂ ಅವಕಾಶ ಸಿಗುತ್ತಿಲ್ಲ ಎನ್ನಲಾಗಿದೆ. ಹಾಗಾಗಿ ಶಾಲಾ ಕಟ್ಟಡವು ದುಸ್ಥಿತಿಯಲ್ಲಿವೆ. ಶಾಲೆಯನ್ನು ಹೇಗಾದರು ಉಳಿಸಬೇಕು ಮತ್ತು ಅಭಿವೃದ್ಧಿಪಡಿಸಬೇಕು ಎಂಬ ನಿಟ್ಟಿನಲ್ಲಿ ಶಾಲೆಯ ಹಳೆ ವಿದ್ಯಾರ್ಥಿಗಳು ತಮ್ಮ ವೃತ್ತಿಯ ಮಧ್ಯೆ ಬಿಡುವು ಮಾಡಿಕೊಂಡು ಹಳೆ ವಿದ್ಯಾರ್ಥಿ ಸಂಘದ ಹಾಗೂ ಶಾಲಾಭಿವೃದ್ಧಿ ಸಮಿತಿಯ ಸಹಕಾರದೊಂದಿಗೆ ಇದೀಗ ವಿನೂತನ ರೀತಿಯಲ್ಲಿ ಅಭಿಯಾನ ಆರಂಭಿಸಿದ್ದಾರೆ.

ತಿಂಗಳ ಹಿಂದೆ ಬೆಂಗಳೂರಿನಲ್ಲಿ ರಟ್ಟಿನ ಮಾದರಿಯ ಶಾಲೆಯನ್ನು ನಿರ್ಮಿಸಿ ಧನ ಸಂಗ್ರಹಕ್ಕೆ ಇಳಿದಿದ್ದ ವೃತ್ತಿಯಲ್ಲಿ ಕಲಾವಿದನಾಗಿರುವ ಜಯರಾಮ ಮತ್ತು ಮೆಡಿಕಲ್ ಪ್ರತಿನಿಧಿಯಾಗಿರುವ ವಿನಯ್ ಎಂಬಿಬ್ಬರು ಯುವಕರು ಇದೀಗ ಮಂಗಳೂರಿನಲ್ಲಿ ಕೂಡಾ ಅಭಿಯಾನ ಮುಂದುವರಿಸಿದ್ದಾರೆ. ಇವರೊಂದಿಗೆ ಇತರ ವಿದ್ಯಾರ್ಥಿಗಳು ಕೂಡ ಸಾಥ್ ನೀಡುತ್ತಾರೆ.

‘49 ಸೆಂಟ್ಸ್ ವಿಸ್ತೀರ್ಣದಲ್ಲಿರುವ ಈ ಶಾಲೆಯು ಖಾಸಗಿ ವ್ಯಕ್ತಿಯ ಬಳಿ ಇದೆ. ಅದನ್ನು ಶಾಲೆಯ ಹೆಸರಿಗೆ ಮಾಡಿಸಿಕೊಳ್ಳಲು ಆ ಜಮೀನಿನ ಮಾಲಕರು ಹಣ ಕೇಳುತ್ತಿದ್ದಾರೆ. ಅವರು ಕೇಳುವಷ್ಟು ಹಣ ಕೊಡಲು ನಮ್ಮಲ್ಲಿಲ್ಲ. ಅದಕ್ಕಾಗಿ ಈ ಮೂಲಕ ಧನ ಸಂಗ್ರಹಕ್ಕೆ ಇಳಿದಿದ್ದೇವೆ. ಒಬ್ಬೊಬ್ಬರು ಕನಿಷ್ಠ 10 ರೂ. ನೀಡಿದರೆ ಒಂದಷ್ಟು ಹಣ ಸಂಗ್ರಹವಾದೀತು ಎಂಬ ವಿಶ್ವಾಸ ನಮ್ಮದು. ಈಗಾಗಲೆ ಜನಪ್ರತಿನಿಧಿಗಳ ಮತ್ತು ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಆದರೆ ಪ್ರಯೋಜನವಾಗಲಿಲ್ಲ. ನಮ್ಮೀ ವಿಶಿಷ್ಟ ಅಭಿಯಾನದ ಮೂಲಕ ಅವರು ಎಚ್ಚೆತ್ತುಕೊಂಡಾರು ಎಂಬ ಆಸೆ ನಮ್ಮದಾಗಿದೆ’ ಎಂದು ಜಯರಾಮ ಮತ್ತು ವಿನಯ್ ಹೇಳುತ್ತಾರೆ.

ನಮ್ಮೀ ವಿಶಿಷ್ಟ ಅಭಿಯಾನದ ಬಗ್ಗೆ ಹಲವರು ನಾನಾ ರೀತಿಯ ಪ್ರಶ್ನೆಗಳನ್ನು ಕೇಳುತ್ತಾರೆ, ಸಂಶಯ ವ್ಯಕ್ತಪಡಿಸುತ್ತಾರೆ. ನಾವು ಎಲ್ಲವನ್ನೂ ಸಹಿಸಿಕೊಳ್ಳುತ್ತಿದ್ದೇವೆ. ನಾವು ಕಲಿತ ಈ ಶಾಲೆಯ ಉಳಿಯಬೇಕು ಎಂಬುದೇ ನಮ್ಮ ಅಭಿಲಾಶೆಯಾಗಿದೆ. ಆಂಗ್ಲಮಾಧ್ಯಮ ಶಾಲೆಗಳ ಆರ್ಭಟದ ಮಧ್ಯೆ ಕನ್ನಡ ಶಾಲೆಗಳು ಮುಚ್ಚಬಾರದು ಎಂಬ ನಿಟ್ಟಿನಲ್ಲಿ ಮೂರು ವರ್ಷದ ಹಿಂದೆ 1ನೆ ತರಗತಿಯಿಂದಲೇ ಇಂಗ್ಲಿಷ್ ಪಠ್ಯ ಬೋಧಿಸುವ ವ್ಯವಸ್ಥೆ ಕಲ್ಪಿಸಲಾಗಿದೆ. ಹಾಗಾಗಿ ಇಲ್ಲೀಗ 64 ಮಕ್ಕಳು ಕಲಿಯುತ್ತಿದ್ದಾರೆ. ಮುಂದೆಯೂ ಮಕ್ಕಳ ಸಂಖ್ಯೆಯನ್ನು ಹೆಚ್ಚಿಸಲು ಪ್ರಯತ್ನಿಸುತ್ತೇವೆ. ಶಾಲೆಗೆ ಸುಸಜ್ಜಿತ ಕಟ್ಟಡ ನಿರ್ಮಿಸಲು ಖಾಸಗಿ ವ್ಯಕ್ತಿಯ ಹೆಸರಿನಲ್ಲಿರುವ ಜಮೀನನ್ನು ಶಾಲೆಯ ಹೆಸರಿನಲ್ಲಿ ಮಾಡದೆ ನಮಗೆ ನಿರ್ವಾಹವಿಲ್ಲ ಎಂದು ಜಯರಾಮ ಮತ್ತು ವಿನಯ್ ವಿಷಾದಿಸುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X