Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪೊಲೀಸರ ವಿಚಾರಣೆಗೆ ಬೇಸತ್ತು ರವಿ ಪೂಜಾರಿ...

ಪೊಲೀಸರ ವಿಚಾರಣೆಗೆ ಬೇಸತ್ತು ರವಿ ಪೂಜಾರಿ ತಂದೆತಾಯಿ ಮಲ್ಪೆ ಊರನ್ನೇ ತ್ಯಜಿಸಿದ್ದರು !

ವಾರ್ತಾಭಾರತಿವಾರ್ತಾಭಾರತಿ1 Feb 2019 9:59 PM IST
share
ಪೊಲೀಸರ ವಿಚಾರಣೆಗೆ ಬೇಸತ್ತು ರವಿ ಪೂಜಾರಿ ತಂದೆತಾಯಿ ಮಲ್ಪೆ ಊರನ್ನೇ ತ್ಯಜಿಸಿದ್ದರು !

ಉಡುಪಿ, ಫೆ.1: ಪಶ್ಚಿಮ ಆಫ್ರಿಕಾದ ಸೆನೆಗಲ್ ದೇಶದಲ್ಲಿ ಬಂಧಿತರಾಗಿ ದ್ದಾರೆನ್ನಲಾದ ಭೂಗತ ಪಾತಕಿ ರವಿ ಪೂಜಾರಿ(58) ಮೂಲತಃ ಮಲ್ಪೆಯ ವಡಬಾಂಡೇಶ್ವರದವನಾಗಿದ್ದು, ಮಗನ ಅಪರಾಧ ಕೃತ್ಯಗಳಿಗೆ ಪೊಲೀಸರಿಂದ ಪದೇ ಪದೇ ವಿಚಾರಣೆ ಎದುರಿಸಬೇಕಾದ ಪರಿಸ್ಥಿತಿಯಿಂದ ಬೇಸತ್ತ ತಂದೆ ತಾಯಿ ಸುಮಾರು 12 ವರ್ಷಗಳ ಹಿಂದೆಯೇ ಮಲ್ಪೆಯ ಮನೆಯನ್ನು ತ್ಯಜಿಸಿ ಹೋಗಿದ್ದರು.

ವಡಬಾಂಡೇಶ್ವರ ನೆರ್ಗಿ ಸರಸ್ವತಿ ಭಜನಾ ಮಂದಿರ ಬಳಿಯ ನಿವಾಸಿ ಸೂರ್ಯ ಪೂಜಾರಿ ಹಾಗೂ ಸುಶೀಲಾ ಪೂಜಾರಿ ದಂಪತಿಯ ಐವರು ಮಕ್ಕಳಲ್ಲಿ ರವಿ ಪೂಜಾರಿ ಎರಡನೆಯವ. ಈತನಿಗೆ ಓರ್ವ ಅಕ್ಕ, ಓರ್ವ ತಂಗಿ ಹಾಗೂ ಇಬ್ಬರು ತಮ್ಮಂದಿರು. ಇವರಲ್ಲಿ ತಮ್ಮ ಮಧು ಪೂಜಾರಿ ಎಂಬವರು ಮೃತ ಪಟ್ಟಿದ್ದಾರೆ.

ಮುಂಬೈಯ ಕಂಪೆನಿಯೊಂದರಲ್ಲಿ ಕೆಲಸಕ್ಕಿದ್ದ ಸೂರ್ಯ ಪೂಜಾರಿ ನಿವೃತ್ತರಾದ ಬಳಿಕ ಮಲ್ಪೆಯ ಮನೆಯಲ್ಲಿ ಬಂದು ನೆಲೆಸಿದ್ದರು. ರವಿ ಪೂಜಾರಿ ಮಲ್ಪೆಯಲ್ಲಿ ಹುಟ್ಟಿದ್ದರೂ ಬೆಳೆದದ್ದು ಹಾಗೂ ಶಾಲೆಗೆ ಹೋಗಿರುವುದು ಮಾತ್ರ ಮುಂಬೈ ಯಲ್ಲಿ. ಮುಂಬೈಯಲ್ಲಿ ಅಪರಾಧ ಲೋಕದಲ್ಲಿ ತೊಡಗಿಸಿಕೊಂಡಿದ್ದ ರವಿ ಪೂಜಾರಿ ಊರಿಗೆ ಆಗಾಗ ಬಂದು ಹೋಗುತ್ತಿದ್ದನು.

ರವಿ ಪೂಜಾರಿ 1990-92ರ ಅವಧಿಯಲ್ಲಿ ಮಲ್ಪೆಯಲ್ಲಿ ನಡೆದ ತನ್ನ ಅಕ್ಕನ ಮದುವೆಯಲ್ಲಿ ಪಾಲ್ಗೊಂಡಿದ್ದು, ಇದು ಆತ ಊರಿಗೆ ನೀಡಿದ ಕೊನೆಯ ಭೇಟಿಯಾಗಿದೆ. ಈ ಅವಧಿಯಲ್ಲಿ ಆತನಿಗೆ ಸುಮಾರು 28 ವರ್ಷ ವಯಸ್ಸಾ ಗಿತ್ತು. ಅದೇ ಸಮಯದಲ್ಲಿ ಪೊಲೀಸರು ರವಿ ಪೂಜಾರಿಯನ್ನು ಹುಡುಕಿ ಕೊಂಡು ಬಂದಾಗ ಆತ ಅಪರಾಧ ಪ್ರಕರಣಗಳಲ್ಲಿ ತೊಡಗಿಸಿಕೊಂಡಿದ್ದಾನೆ ಎಂಬ ಮಾಹಿತಿ ಕುಟುಂಬದವರಿಗೆ ಗೊತ್ತಾಗಿರುವುದು ಎಂದು ಮೂಲಗಳು ತಿಳಿಸಿವೆ.

ಸೂರ್ಯ ಪೂಜಾರಿಯ ನಿವೃತ್ತಿ ನಂತರ ಪೊಲೀಸರು ರವಿ ಪೂಜಾರಿಯ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿ ಪದೇ ಪದೇ ಮಲ್ಪೆ ಮನೆಗೆ ಆಗಮಿಸಿ ತಂದೆತಾಯಿಯನ್ನು ವಿಚಾರಣೆ ನಡೆಸುತ್ತಿದ್ದರೆನ್ನಲಾಗಿದೆ. ಇದರಿಂದ ಬೇಸತ್ತ ಸೂರ್ಯ ಪೂಜಾರಿ ಸುಮಾರು 12 ವರ್ಷಗಳ ಹಿಂದೆ ಮಲ್ಪೆಯ ಮನೆಯನ್ನು ಮಾರಾಟ ಮಾಡಿ ಊರನ್ನು ತ್ಯಜಿಸಿ ದೆಹಲಿಯಲ್ಲಿ ವಾಸವಾಗಿದ್ದ ತನ್ನ ಪುತ್ರಿ ಯರ ಮನೆಗೆ ಹೋಗಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ಸೂರ್ಯ ಪೂಜಾರಿ ಸುಮಾರು ಐದು ವರ್ಷಗ ಹಿಂದೆ ಅಲ್ಲಿಯೇ ಮೃತಪಟ್ಟಿದ್ದರು.

ಉಡುಪಿ ಜಿಲ್ಲೆಯಲ್ಲಿ 10 ಪ್ರಕರಣ

ಪಶ್ಚಿಮ ಆಫ್ರಿಕಾದ ಸೆನೆಗಲ್ ಬಂಧಿತರಾಗಿದ್ದರೆನ್ನಲಾದ ಭೂಗತ ಪಾತಕಿ ರವಿ ಪೂಜಾರಿ ವಿರುದ್ಧ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಯಲ್ಲಿ ಒಟ್ಟು 10 ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಕನ್ನಡ, ತುಳು, ಹಿಂದಿ, ಇಂಗ್ಲಿಷ್ ಭಾಷೆಯಲ್ಲಿ ನಿರರ್ಗಳವಾಗಿ ಮಾತನಾಡುತಿದ್ದ ಈತನ ವಿರುದ್ಧ 2006ರಲ್ಲಿ ಮೊದಲ ಪ್ರಕರಣವು ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಬಳಿಕ ಕಾರ್ಕಳ, ಬ್ರಹ್ಮಾವರ, ಉಡುಪಿ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 10 ಪ್ರಕರಣಗಳು ದಾಖಲಾಗಿವೆ. ಇದರಲ್ಲಿ ಬಹುತೇಕ ಬೆದರಿಕೆ ಹಾಗೂ ಹಫ್ತಾ ವಸೂಲಿಗೆ ಸಂಬಂಧಿಸಿದ ಪ್ರಕರಣ ಗಳಾಗಿವೆ ಎಂದು ತಿಳಿದುಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X