Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಮುನ್ನೋಟ 2030’ ರ 10 ಪ್ರಮುಖ...

‘ಮುನ್ನೋಟ 2030’ ರ 10 ಪ್ರಮುಖ ಆಯಾಮಗಳನ್ನು ಮಂಡಿಸಿದ ವಿತ್ತಸಚಿವ

ವಾರ್ತಾಭಾರತಿವಾರ್ತಾಭಾರತಿ1 Feb 2019 10:22 PM IST
share
‘ಮುನ್ನೋಟ 2030’ ರ 10 ಪ್ರಮುಖ ಆಯಾಮಗಳನ್ನು ಮಂಡಿಸಿದ ವಿತ್ತಸಚಿವ

ಹೊಸದಿಲ್ಲಿ,ಫೆ.1: ಶುಕ್ರವಾರ ಮಧ್ಯಂತರ ಬಜೆಟ್ ಮಂಡನೆ ಸಂದರ್ಭ ಸರಕಾರದ ‘ಮುನ್ನೋಟ 2030’ರ 10 ಪ್ರಮುಖ ಆಯಾಮಗಳನ್ನು ವಿತ್ತಸಚಿವ ಪಿಯೂಷ್ ಗೋಯಲ್ ಅವರು ದೇಶದ ಮುಂದಿರಿಸಿದರು. ಇವು ಮುಂದಿನ ದಶಕದಲ್ಲಿ 10 ಲಕ್ಷ ಕೋಟಿ ಡಾ.ಆರ್ಥಿಕತೆಯಾಗಿ ಹೊರಹೊಮ್ಮುವ ಮಹತ್ವಾಕಾಂಕ್ಷೆಯನ್ನು ಹೊಂದಿರುವ ಭಾರತವನ್ನು ಆಧುನಿಕ,ಪ್ರಗತಿಪರ ಮತ್ತು ಪಾರದರ್ಶಕ ಸಮಾಜವನ್ನಾಗಿ ಮಾಡಲಿವೆ ಎಂದರು.

►ರಸ್ತೆಗಳು,ರೈಲ್ವೆ,ಬಂದರುಗಳು,ವಿಮಾನ ನಿಲ್ದಾಣಗಳು ಮತ್ತು ಒಳನಾಡು ಜಲಸಾರಿಗೆಯಲ್ಲಿ ಮುಂದಿನ ಪೀಳಿಗೆಯ ಮೂಲಸೌಕರ್ಯ ನಿರ್ಮಾಣ

►ದೇಶದ ಪ್ರತಿಯೊಂದೂ ಮೂಲೆಯನ್ನು ಮತ್ತು ಪ್ರತಿಯೋರ್ವ ವ್ಯಕ್ತಿಯನ್ನೂ ತಲುಪುವ ‘ಡಿಜಿಟಲ್ ಇಂಡಿಯಾ’ ನಿರ್ಮಾಣ

►ಆಮದು ಅವಲಂಬನೆಯನ್ನು ತಗ್ಗಿಸಲು ಮತ್ತು ನಮ್ಮ ಜನರಿಗ ಶಕ್ತಿ ಭದ್ರತೆಯನ್ನೊದಗಿಸಲು ಸ್ವಚ್ಛ ಮತ್ತು ನವೀಕರಿಸಬಲ್ಲ ಶಕ್ತಿಯ ಬಳಕೆಗೆ ಹೆಚ್ಚಿನ ಗಮನ

►‘ಮೇಕ್ ಇನ್ ಇಂಡಿಯಾ’ ಮಾರ್ಗವನ್ನು ಆಧರಿಸಿ ಆಧುನಿಕ ಕೈಗಾರಿಕಾ ತಂತ್ರಜ್ಞಾನಗಳನ್ನು ಬಳಸಿ ಗ್ರಾಮೀಣ ಕೈಗಾರೀಕರಣದ ವಿಸ್ತರಣೆ

►ಕಿರು-ನೀರಾವರಿ ತಂತ್ರಜ್ಞಾನಗಳನ್ನು ಬಳಸಿ ಎಲ್ಲ ಭಾರತೀಯರಿಗೆ ಸುರಕ್ಷಿತ ಕುಡಿಯುವ ನೀರು ಪೂರೈಕೆಯೊಂದಿಗೆ ಸ್ವಚ್ಛ ನದಿಗಳು

►ಮಹಾಸಾಗರಗಳು ಮತ್ತು ಕರಾವಳಿ ತೀರಗಳ ಬಗ್ಗೆ ಹೆಚ್ಚಿನ ಕಾಳಜಿ

►2022ರಲ್ಲಿ ಬಾಹ್ಯಾಕಾಶಕ್ಕೆ ಮಾನವ ಸಹಿತ ನೌಕೆಯ ಉಡಾವಣೆ

►ಆಹಾರದಲ್ಲಿ ಸ್ವಾವಲಂಬನೆ ಮತ್ತು ಸಾವಯವ ಆಹಾರಕ್ಕೆ ಒತ್ತು ನೀಡುವುದರೊಂದಿಗೆ ಕೃಷಿ ಉತ್ಪಾದಕತೆಯನ್ನು ಹೆಚ್ಚಿಸುವುದು

►ಒತ್ತಡರಹಿತ ಮತ್ತು ಎಲ್ಲರಿಗೂ ಸಮಗ್ರ ಆರೋಗ್ಯ ರಕ್ಷಣೆ ವ್ಯವಸ್ಥೆಯೊಂದಿಗೆ ಆರೋಗ್ಯಕರ ಭಾರತ

►ಕ್ರಿಯಾಶೀಲ,ಜವಾಬ್ದಾರಿಯುತ,ಸ್ನೇಹಮಯಿ ಆಡಳಿತಶಾಹಿ ಮತ್ತು ವಿದ್ಯುನ್ಮಾನ ಆಡಳಿತ ವ್ಯವಸ್ಥೆಯೊಂದಿಗೆ ‘ಕನಿಷ್ಠ ಸರಕಾರ ಗರಿಷ್ಠ ಆಡಳಿತ’

share
ವಾರ್ತಾಭಾರತಿ
ವಾರ್ತಾಭಾರತಿ
Next Story
X