Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಡೇವಿಸ್‌ಕಪ್: ಭಾರತ ವಿರುದ್ಧ ಇಟಲಿಗೆ...

ಡೇವಿಸ್‌ಕಪ್: ಭಾರತ ವಿರುದ್ಧ ಇಟಲಿಗೆ ಮುನ್ನಡೆ

ಮೊದಲ ಪಂದ್ಯದಲ್ಲಿ ರಾಮ್‌ಕುಮಾರ್, ಪ್ರಜ್ಞೇಶ್‌ಗೆ ಸೋಲು

ವಾರ್ತಾಭಾರತಿವಾರ್ತಾಭಾರತಿ1 Feb 2019 11:13 PM IST
share
ಡೇವಿಸ್‌ಕಪ್: ಭಾರತ ವಿರುದ್ಧ ಇಟಲಿಗೆ ಮುನ್ನಡೆ

ಕೋಲ್ಕತಾ, ಫೆ.1: ಹುಲ್ಲುಹಾಸಿನಲ್ಲಿ ಟೆನಿಸ್ ಆಡುವ ಆತಿಥೇಯ ಭಾರತದ ತಂತ್ರ ಮೊದಲ ದಿನ ಫಲ ನೀಡಿಲ್ಲ. ಕೋಲ್ಕತಾದ ಸೌತ್ ಕ್ಲಬ್‌ನಲ್ಲಿ ಶುಕ್ರವಾರ ಆರಂಭವಾದ ಡೇವಿಸ್‌ಕಪ್‌ನ ಅರ್ಹತಾ ಸುತ್ತಿನಲ್ಲಿ ಎರಡೂ ಸಿಂಗಲ್ಸ್ ಪಂದ್ಯಗಳನ್ನು ಗೆದ್ದುಕೊಂಡಿರುವ ಇಟಲಿ ತಂಡ ನಿರೀಕ್ಷೆಗೂ ಮೀರಿದ ಪ್ರದರ್ಶನ ನೀಡಿದೆ.

ಇಟಲಿಯ ಆ್ಯಂಡ್ರಿಯಸ್ ಸೆಪ್ಪಿ ಮೊದಲ ಸಿಂಗಲ್ಸ್ ಪಂದ್ಯದಲ್ಲಿ ರಾಮ್‌ಕುಮಾರ್ ರಾಮನಾಥನ್‌ರನ್ನು 6-4, 6-2 ನೇರ ಸೆಟ್‌ಗಳಿಂದ ಸೋಲಿಸಿ ಇಟಲಿಗೆ 1-0 ಮುನ್ನಡೆ ಒದಗಿಸಿದರು. ಒಂದು ಗಂಟೆ ಹಾಗೂ 11 ನಿಮಿಷಗಳ ಕಾಲ ನಡೆದ ಪಂದ್ಯದಲ್ಲಿ ವಿಶ್ವದ ನಂ.37ನೇ ಆಟಗಾರ ಸೆಪ್ಪಿ ಆರಂಭಿಕ ಹಿನ್ನಡೆಯಿಂದ ಚೇತರಿಸಿಕೊಂಡು ನೇರ ಸೆಟ್‌ಗಳಿಂದ ಜಯ ದಾಖಲಿಸಿದರು. ಚೆನ್ನೈ ಆಟಗಾರ ರಾಮ್‌ಕುಮಾರ್ ಮೊದಲ ಸೆಟ್‌ನಲ್ಲಿ ಎರಡು ಬ್ರೇಕ್ ಪಾಯಿಂಟ್‌ನ್ನು ಸದುಪಯೋಗಪಡಿಸಿಕೊಳ್ಳಲು ವಿಫಲರಾದರು. ಸತತ 5 ಅಂಕ ಗಳಿಸಿದ ಇಟಲಿ ಆಟಗಾರ ಮೊದಲ ಸೆಟನ್ನು 41 ನಿಮಿಷಗಳಲ್ಲಿ ವಶಪಡಿಸಿಕೊಂಡರು. ಮತ್ತೊಂದು ಸಿಂಗಲ್ಸ್ ಪಂದ್ಯದಲ್ಲಿ 22ರ ಹರೆಯದ ಮಾಟೆಯೊ ಬೆರೆಟ್ಟಿನಿ ಭಾರತದ ನಂ.1 ಸಿಂಗಲ್ಸ್ ಆಟಗಾರ ಪ್ರಜ್ಞೇಶ್ ಗುಣೇಶ್ವರನ್ ವಿರುದ್ಧ 6-4, 6-3 ನೇರ ಸೆಟ್‌ಗಳಿಂದ ಜಯ ಸಾಧಿಸಿದ್ದಾರೆ. ಈ ಗೆಲುವಿನ ಮೂಲಕ ಇಟಲಿ ತಂಡಕ್ಕೆ 2-0 ಮುನ್ನಡೆ ದಾಖಲಿಸಲು ನೆರವಾಗಿದ್ದಾರೆ.

ಭಾರತ 0-2 ಹಿನ್ನಡೆ ಅನುಭವಿಸಿರುವ ಹಿನ್ನೆಲೆಯಲ್ಲಿ ಶನಿವಾರ ಭಾರತದ ಡಬಲ್ಸ್ ಜೋಡಿ ರೋಹನ್ ಬೋಪಣ್ಣ ಹಾಗೂ ದಿವಿಜ್ ಶರಣ್ ಮಾಡು-ಮಡಿ ಪಂದ್ಯವನ್ನಾಡಲಿದ್ದಾರೆ.

ಇಟಲಿ ಪರ ಅಗ್ರ ರ್ಯಾಂಕಿನ ಸಿಂಗಲ್ಸ್ ಆಟಗಾರ ಮಾರ್ಕೊ ಸೆಚಿನಾಟೊ ಹಾಗೂ ಸೈಮನ್ ಬೊಲೆಲ್ಲಿ ಡಬಲ್ಸ್ ಪಂದ್ಯ ಆಡಲಿದ್ದಾರೆ. ಈ ಜೋಡಿ 2015ರಲ್ಲಿ ಆಸ್ಟ್ರೇಲಿಯನ್ ಓಪನ್‌ನಲ್ಲಿ ಡಬಲ್ಸ್ ಪ್ರಶಸ್ತಿ ಜಯಿಸಿತ್ತು.

‘‘ನಮ್ಮ ಗಮನ ನಾಳೆಯ ಪಂದ್ಯದ ಮೇಲಿದೆ. ನಮ್ಮ ಕೈಯ್ಯಲ್ಲಿ ಕಠಿಣ ಸವಾಲಿದೆ ಎಂಬ ಅರಿವಿದೆ. ನಮಗೆ ಸಮಯದ ಕೊರತೆಯೂ ಇದೆ’’ ಎಂದು ಮೊದಲ ದಿನ ಭಾರತದ ನೀರಸ ಪ್ರದರ್ಶನದ ಬಳಿಕ ಆಟವಾಡದ ನಾಯಕ ಮಹೇಶ್ ಭೂಪತಿ ಸುದ್ದಿಗಾರರಿಗೆ ತಿಳಿಸಿದರು.

ಕಳೆದ ವರ್ಷ ಏಶ್ಯ-ಒಸಿಯಾನಿಯಾ ಗ್ರೂಪ್-1 ಪಂದ್ಯದಲ್ಲಿ ಇದೇ ರೀತಿಯ ಪರಿಸ್ಥಿತಿ ಎದುರಿಸಿದ್ದ ಭಾರತ ತಂಡ ಅಂತಿಮವಾಗಿ ಚೀನಾವನ್ನು 3-2 ಅಂತರದಿಂದ ರೋಚಕವಾಗಿ ಮಣಿಸಿತ್ತು. ಭೂಪತಿ ಆ ಪಂದ್ಯದಿಂದ ಸ್ಫೂರ್ತಿ ಪಡೆಯಲು ಬಯಸಿದ್ದಾರೆ. ‘‘ದೇಶದ ಪರ ಆಡುವಾಗ ಒತ್ತಡವಿರುವುದು ಸಹಜ. ಕೆಲವೊಮ್ಮೆ ವಿಚಿತ್ರ ಘಟನೆಗಳು ನಡೆಯುತ್ತವೆ. ಚೀನಾದಲ್ಲಿ ನಮಗೆ ಇಂತಹ ಅನುಭವವಾಗಿದೆ. ಇಟಲಿ ತಂಡ ಚೀನಾಗಿಂತ ಬಲಿಷ್ಠವಾಗಿದೆ ಎಂದು ನನಗೆ ಗೊತ್ತು. ಆದರೆ, ಇದೀಗ ನಾವು ಒಂದೇ ನಿರ್ದಿಷ್ಟ ಪಂದ್ಯದತ್ತ ಹೆಚ್ಚು ಗಮನ ನೀಡಬೇಕಾಗಿದೆ’’ ಎಂದು ಭೂಪತಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X