Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪದ್ಮಶ್ರೀ ಪುರಸ್ಕಾರ ಹಿಂದಿರುಗಿಸಲಿರುವ...

ಪದ್ಮಶ್ರೀ ಪುರಸ್ಕಾರ ಹಿಂದಿರುಗಿಸಲಿರುವ ಹಿರಿಯ ಮಣಿಪುರಿ ಚಿತ್ರ ನಿರ್ದೇಶಕ

ಕೇಂದ್ರದ ಪೌರತ್ವ ಮಸೂದೆಗೆ ವಿರೋಧ

ವಾರ್ತಾಭಾರತಿವಾರ್ತಾಭಾರತಿ3 Feb 2019 3:46 PM IST
share
ಪದ್ಮಶ್ರೀ ಪುರಸ್ಕಾರ ಹಿಂದಿರುಗಿಸಲಿರುವ ಹಿರಿಯ ಮಣಿಪುರಿ ಚಿತ್ರ ನಿರ್ದೇಶಕ

ಹೊಸದಿಲ್ಲಿ, ಫೆ.3: ಕೇಂದ್ರ ಸರಕಾರದ ಪೌರತ್ವ ಮಸೂದೆಯನ್ನು ವಿರೋಧಿಸಿ ಹಿರಿಯ ಮಣಿಪುರಿ ಚಿತ್ರ ನಿರ್ದೇಶಕ ಅರಿಬಾಮ್ ಶ್ಯಾಂ ಶರ್ಮಾ 2006ರಲ್ಲಿ ಪ್ರದಾನಿಸಲಾದ ಪದ್ಮಶ್ರೀ ಪುರಸ್ಕಾರವನ್ನು ಹಿಂದಿರುಗಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ನೆರೆಯ ಮುಸ್ಲಿಂ ಬಾಹುಳ್ಯದ ದೇಶಗಳಲ್ಲಿರುವ ಮುಸ್ಲಿಮೇತರರಿಗೆ ಭಾರತದ ಪೌರತ್ವವನ್ನು ನೀಡುವ ಪ್ರಸ್ತಾವನೆಗೆ ಈಶಾನ್ಯ ರಾಜ್ಯಗಳಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ. ಈ ಪ್ರಸ್ತಾವನೆ ಮುಸ್ಲಿಮರ ವಿರೋಧಿ ಮನಸ್ಥಿತಿಯದ್ದಾಗಿದ್ದು, ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಹಿಂದೂ ಮತಗಳನ್ನು ಸೆಳೆಯಲು ಕೇಂದ್ರ ಸರಕಾರ ನಡೆಸಿರುವ ಹುನ್ನಾರ ಎಂದು ಹಲವರು ಆರೋಪಿಸಿದ್ದಾರೆ.

ಹಿಂದುಗಳು, ಬೌದ್ಧರು, ಸಿಖ್ಖರು, ಪಾರ್ಸಿಗಳು ಮತ್ತು ಕ್ರೈಸ್ತರಿಗೆ ಭಾರತೀಯ ಪೌರತ್ವ ನೀಡುವಂತೆ 1955ರ ಕಾನೂನಿಗೆ ತಿದ್ದುಪಡಿ ತರುವ ಉದ್ದೇಶದಿಂದ ಪೌರತ್ವ (ತಿದ್ದುಪಡಿ) ಮಸೂದೆಯನ್ನು ಜಾರಿಗೆ ತರಲು ಕೇಂದ್ರ ಸರಕಾರ ಬಯಸಿದೆ. ಕೇಂದ್ರದ ನಿರ್ಧಾರಕ್ಕೆ ಬಹುತೇಕ ಈಶಾನ್ಯ ರಾಜ್ಯಗಳು ವಿರೋಧ ವ್ಯಕ್ತಪಡಿಸಿದ್ದು ಈಗಾಗಲೇ ಅನೇಕ ಪ್ರತಿಭಟನೆಗಳು ನಡೆದಿವೆ.

ರವಿವಾರ ಇಂಪಾಲಾದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ತಮ್ಮ ನಿರ್ಧಾರವನ್ನು ತಿಳಿಸಿದ 83ರ ಹರೆಯದ ಶರ್ಮಾ, ಮಣಿಪುರದ ಜನರಿಗೆ ರಕ್ಷಣೆಯ ಅಗತ್ಯವಿದೆ ಎಂದು ತಿಳಿಸಿದ್ದಾರೆ. ಸರಕಾರ ಈಶಾನ್ಯ ಭಾಗವನ್ನು ಮತ್ತು ರಾಜ್ಯಗಳನ್ನು ಗಾತ್ರ ಮತ್ತು ಜನಸಂಖ್ಯೆಯನ್ನು ಪರಿಗಣಿಸದೆ ಗೌರವಿಸಬೇಕು ಎಂದು ಅವರು ತಿಳಿಸಿದ್ದಾರೆ. ಲೋಕಸಭೆಯಲ್ಲಿ ಜನವರಿ 8ರಂದು ಅಂಗೀಕಾರ ಪಡೆದ ಪೌರತ್ವ ಮಸೂದೆಯ ವಿರುದ್ಧ ಮಣಿಪುರದಲ್ಲಿ ಹಲವು ಪ್ರತಿಭಟನೆಗಳು ನಡೆದಿವೆ. ಬಿಜೆಪಿಯ ಮಿತ್ರಪಕ್ಷಗಳೂ ಸೇರಿದಂತೆ ಇಲ್ಲಿನ ಹತ್ತು ರಾಜಕೀಯ ಪಕ್ಷಗಳು ಈ ಮಸೂದೆಯನ್ನು ವಿರೋಧಿಸಿವೆ.

ಈಶಾನ್ಯ ಭಾಗದ ಮೂಲಜನರಿಗೆ ರಕ್ಷಣೆಯನ್ನು ಒದಗಿಸುವ ನಿಬಂಧನೆಯನ್ನು ಸೇರಿಸದಿದ್ದರೆ ಈ ಮಸೂದೆಯನ್ನು ವಿರೋಧಿಸುವುದಾಗಿ ಮಣಿಪುರ ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X