Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಈ 13 ವರ್ಷ ವಯಸ್ಸಿನ ಪೋರ ಯುಪಿಎಸ್‌ಪಿ...

ಈ 13 ವರ್ಷ ವಯಸ್ಸಿನ ಪೋರ ಯುಪಿಎಸ್‌ಪಿ ಪರೀಕ್ಷಾರ್ಥಿಗಳಿಗೆ ‘ಗುರು’

ಯೂಟ್ಯೂಬ್‌ನಲ್ಲಿ ಈತನಿಗೆ ಲಕ್ಷಾಂತರ ಶಿಷ್ಯರು

ವಾರ್ತಾಭಾರತಿವಾರ್ತಾಭಾರತಿ3 Feb 2019 9:08 PM IST
share
ಈ 13 ವರ್ಷ ವಯಸ್ಸಿನ ಪೋರ ಯುಪಿಎಸ್‌ಪಿ ಪರೀಕ್ಷಾರ್ಥಿಗಳಿಗೆ ‘ಗುರು’

ಹೈದರಾಬಾದ್,ಫೆ.3: 13 ವರ್ಷ ವಯಸ್ಸಿನ ಬಾಲಕನೊಬ್ಬ, ಯುಪಿಎಸ್‌ಸಿ ನಾಗರಿಕ ಸೇವಾ ಪರೀಕ್ಷೆಗಳಿಗೆ ಬರೆಯಲು ಸಿದ್ಧತೆ ನಡೆಸುವವರಿಗೆ ಶಿಕ್ಷಕನಾಗಿದ್ದಾನೆಂದರೆ ಯಾರಾದರೂ ಅಚ್ಚರಿ ಪಡಲೇಬೇಕು. ಹೌದು. ತೆಲಂಗಾಣದ ಮಂಚೇರಿಯಲ್ ಪಟ್ಟಣದ 13 ವರ್ಷದ ಬಾಲಕ ಅಮರ್ ಸ್ವಸ್ತಿಕ್ ಆಚಾರ್ಯ ತೊಗಿಟಿ ಯುಪಿಎಸ್‌ಸಿ ಪರೀಕ್ಷೆ ಬರೆಯುವವರಿಗೆ ‘ಗುರು’ವಾಗಿದ್ದಾನೆ.

ಯುಪಿಎಸ್‌ಸಿ ಪರೀಕ್ಷಾರ್ಥಿಗಳಿಗಾಗಿ ಆತ ಯೂಟ್ಯೂಬ್‌ನಲ್ಲಿ ಪ್ರಸಾರ ಮಾಡುವ ವಿಡಿಯೋಗಳು ಭಾರೀ ಜನಪ್ರಿಯವಾಗಿದೆ. ಅಮರ್ ಸ್ವಸ್ತಿಕ್ 2016ರಲ್ಲಿ ತನ್ನ ಹತ್ತನೆ ವಯಸ್ಸಿನಲ್ಲಿ ಯೂಟ್ಯೂಬ್‌ನಲ್ಲಿ ಆರಂಭಿಸಿದ ‘ಲರ್ನ್ ವಿದ್ ಅಮರ್’ ಚಾನೆಲ್ ಭಾರೀ ಜನಪ್ರಿಯವಾಗಿದ್ದು, ಈಗ 1.87 ಲಕ್ಷಕ್ಕೂ ಅಧಿಕ ಸಬ್ ಸ್ಕ್ರೈಬರ್ಗಳನ್ನು ಹೊಂದಿದೆ.

ಅಮರ್ ಸ್ವಸ್ತಿಕ್‌ನ ತಂದೆ ಸರಕಾರಿ ಶಾಲೆಯೊಂದರ ಶಿಕ್ಷಕರಾಗಿದ್ದು, ಅವರು ತನ್ನ ಜಿಲ್ಲೆಯ ಶಿಕ್ಷಕರ ತರಬೇತಿ ಕಾರ್ಯಕ್ರಮಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಳ್ಳುತ್ತಿದ್ದಾರೆ.ಅವರಿಂದ ತಾನು ಪರೀಕ್ಷಾ ತರಬೇತಿಗೆ ಸಂಬಂಧಿಸಿ ಬಹಳಷ್ಟು ಜ್ಞಾನ ವನ್ನು ಸಂಪಾದಿಸಿದ್ದಾಗಿ ಅಮರ್ ಸ್ವಸ್ತಿಕ್ ಹೇಳುತ್ತಾನೆ. ತಾನು ಐದನೆ ಕ್ಲಾಸ್‌ನಲ್ಲಿ ಕಲಿಯುತ್ತಿದ್ದಾಗ ಅಟ್ಲಾಸ್ (ಭೂಪಟ) ಜೊತೆ ಅಟವಾಡುತ್ತಿದ್ದುದನ್ನು ತನ್ನ ತಂದೆ ಗಮನಿಸಿದ್ದರು. ತನ್ನ ಆಸಕ್ತಿಯನ್ನು ಗಮನಿಸಿದ ಅವರು ತನಗೆ ಭೂಗೋಳವನ್ನು ಬೋಧಿಸಲು ಆರಂಭಿಸಿದರೆಂದು ಸ್ವಸ್ತಿಕ್ ಹೇಳುತ್ತಾನೆ. ಒಂದು ದಿನ ಅಮರ್ ತಾನಾಗಿಯೇ ಭೂಗೋಳ ಪಾಠವನ್ನು ಕಲಿಸುತ್ತಿರುವ ವಿಡಿಯೋವೊಂದನ್ನು, ಆತನ ತಾಯಿ ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡಿದ್ದರು.

ವಿಡಿಯೋಗೆ ಉತ್ತಮ ಪ್ರತಿಕ್ರಿಯೆ ಲಭ್ಯವಾಗಿತ್ತು. ಇದರಿಂದ ಸ್ಫೂರ್ತಿ ಪಡೆದ ಅಮರ್, ಯೂಟ್ಯೂಬ್‌ನಲ್ಲಿ ಭೂಗೋಳ ಬೋಧಿಸುವ ಯೂಟ್ಯೂಬ್ ಚಾನೆಲ್ ಅನ್ನು ಆರಂಭಿಸಿದ್ದಾನೆ. ಅಮರ್ ಇದೀಗ ಭೂಗೋಳ ಶಾಸ್ತ್ರದ ಜೊತೆಗೆ ಅರ್ಥಶಾಸ್ತ್ರ ಹಾಗೂ ರಾಜಕೀಯಶಾಸ್ತ್ರವನ್ನು ಬೋಧಿಸುವ ಯೋಜನೆಯನ್ನು ಕೂಡಾ ಹೊಂದಿದ್ದಾನೆ. ತಾನು ವಯಸ್ಕನಾದ ಬಳಿಕ ಯುಪಿಎಸ್‌ಸಿ ಪರೀಕ್ಷೆಗೆ ಬರೆಯುವ ಹಂಬಲ ಹೊಂದಿರುವ ಅಮರ್, ಐಎಎಸ್ ಅಧಿಕಾರಿಯಾಗಿ, ದೇಶವನ್ನು ಭ್ರಷ್ಟಾಚಾರದಿಂದ ಮುಕ್ತಗೊಳಿಸುವ ಹಂಬಲವನ್ನು ಹೊಂದಿದ್ದಾನೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X