Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗುಂಪಿನಿಂದ ಹತ್ಯೆಗಳ ಹಿಂದಿನ ದ್ವೇಷದ...

ಗುಂಪಿನಿಂದ ಹತ್ಯೆಗಳ ಹಿಂದಿನ ದ್ವೇಷದ ನಿಗೂಢತೆ ಭೇದಿಸಲಿರುವ ಪುಸ್ತಕ

ವಾರ್ತಾಭಾರತಿವಾರ್ತಾಭಾರತಿ3 Feb 2019 10:14 PM IST
share
ಗುಂಪಿನಿಂದ ಹತ್ಯೆಗಳ ಹಿಂದಿನ ದ್ವೇಷದ ನಿಗೂಢತೆ ಭೇದಿಸಲಿರುವ ಪುಸ್ತಕ

ಹೊಸದಿಲ್ಲಿ,ಫೆ.3: ಗುಂಪು ಹಿಂಸಾಚಾರದ ಸಂತ್ರಸ್ತರ ಕಥನಗಳನ್ನು ಸಂಕಲಿಸಿರುವ ನೂತನ ಪುಸ್ತಕವೊಂದು,ಇಂತಹ ಹಿಂಸಾಚಾರಗಳಲ್ಲಿ ಭಾಗಿಯಾಗುವವರು ನಿರ್ಭೀತಿಯಿಂದ ಕಾನೂನುಗಳನ್ನು ಉಲ್ಲಂಘಿಸಲು ಕಾರಣಗಳೇನು ಎನ್ನುವುದನ್ನು ವಿಶ್ಲೇಷಿಸಲು ಪ್ರಯತ್ನಿಸಿದೆ.

ಇತ್ತೀಚಿನ ವರ್ಷಗಳಲ್ಲಿ ಗುಂಪಿನಿಂದ ಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದು,ಇದು ಅಪಾಯದ ಗಂಟೆಯನ್ನು ಬಾರಿಸುತ್ತಿದೆ ಮತ್ತು ಈ ಪ್ರವೃತ್ತಿಯು ಭಾರತದ ಜಾತ್ಯತೀತತೆ ಮತ್ತು ಸಂವಿಧಾನವನ್ನು ಸತ್ವಪರೀಕ್ಷೆಗೊಳಪಡಿಸಿವೆ ಎಂದು ಝಿಯಾವುಸ್ಸಲಾಂ ಅವರು ತನ್ನ ‘ಲಿಂಚ್ ಫೈಲ್ಸ್ : ದಿ ಫರ್‌ಗಾಟನ್ ಸಾಗಾ ಆಫ್ ವಿಕ್ಟಿಮ್ಸ್ ಆಫ್ ಹೇಟ್ ಕ್ರೈಮ್’ ಪುಸ್ತಕದಲ್ಲಿ ಹೇಳಿದ್ದಾರೆ.

ಗುಂಪು ದಿಢೀರ್ ನ್ಯಾಯನಿರ್ಧಾರವನ್ನು ನೀಡುವುದು ನಮ್ಮ ಸಂವಿಧಾನ ನಿರ್ಮಾತೃರು ಯೋಜಿಸಿದ್ದ ರೀತಿಯಲ್ಲ ಎಂದಿರುವ ಅವರು, ದಾದ್ರಿ ಮತ್ತು ಉನಾದಿಂದ ಆಲ್ವಾರ್ ಮತ್ತು ಹಾಪುರ್‌ವರೆಗೆ ಹಾಗೂ ರಾಜಕೋಟ್‌ನಿಂದ ದಿಮಾಪುರವರೆಗೆ ಗುಂಪುಹತ್ಯೆಗಳ ಪ್ರತಿಯೊಂದೂ ವರದಿಯು ಭದ್ರತೆಯ ಕೊರತೆಯನ್ನು ಬೆಟ್ಟು ಮಾಡುತ್ತಿದೆ ಎಂದಿದ್ದಾರೆ.

ಗೋ ಕಳ್ಳಸಾಗಣೆಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಾರ್ಯತಂತ್ರವು ಒಂದೇ ಆಗಿದೆ,‘ಸಾಮಾನ್ಯ ಗರಿಷ್ಠ ಕಾರ್ಯಕ್ರಮ’ವು ಹೆಚ್ಚುಕಡಿಮೆ ಒಂದೇ ಆಗಿದೆ. ಹೆಚ್ಚಿನೆಲ್ಲ ಪ್ರಕರಣಗಳಲ್ಲಿ ಇದು ಆಧಾರವಿಲ್ಲದ ಗೋ ಕಳ್ಳಸಾಗಾಣಿಕೆ ಅಥವಾ ಗೋಹತ್ಯೆ ಆರೋಪದೊಂದಿಗೇ ಆರಂಭಗೊಳ್ಳುತ್ತದೆ ಎಂದು ಅವರು ಪುಸ್ತಕದಲ್ಲಿ ಬರೆದಿದ್ದಾರೆ.

ಗೋರಕ್ಷಕರು ಕಾನೂನನ್ನು ತಮ್ಮ ಕೈಗೆತ್ತಿಕೊಳ್ಳಲು ಕಾರಣಗಳೇನು? ಜನಸಂಖ್ಯಾ ಸ್ಫೋಟ,ಸಂಪನ್ಮೂಲಗಳ ಕೊರತೆ,ಸೀಮಿತ ಉದ್ಯೋಗಾವಕಾಶಗಳು,ಶ್ರೀಮಂತರು ಮತು ಬಡವರ ನಡುವೆ ಹೆಚ್ಚುತ್ತಿರುವ ಅಂತರ ಮತ್ತು ವ್ಯಾಪಕ ಭ್ರಷ್ಟಾಚಾರದಿಂದಾಗಿ ಹುಟ್ಟಿಕೊಂಡಿರುವ ನಿರಾಶ ಭಾವನೆಯಿಂದ ಪೀಡಿತ ನಮ್ಮಂತಹ ಸಮಾಜದಲ್ಲಿ ಜನರು ತೀವ್ರ ಅಸಹಾಯಕತೆ ಮತ್ತು ಹತಾಶೆಯನ್ನು ಬೆಳೆಸಿಕೊಳ್ಳುತ್ತಾರೆ. ಪರಿಣಾಮವಾಗಿ ಅವರಲ್ಲಿ ಸಿಟ್ಟು ಉಂಟಾಗುತ್ತದೆ ಮತ್ತು ಇದು ಗುಂಪು ಹಿಂಸಾಚಾರಗಳಿಗೆ ಕುಮ್ಮಕ್ಕು ನೀಡುತ್ತದೆ ಎಂದಿದ್ದಾರೆ.

ಗುಂಪಿನಿಂದ ಹತ್ಯೆಗಳ ವಿರುದ್ಧ ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಕುರಿತು ಪುಸ್ತಕದಲ್ಲಿ ಚರ್ಚಿಸಿರುವ ಅವರು,ಇದು ಸ್ವಲ್ಪ ಭರವಸೆಯನ್ನು ಮೂಡಿಸಿದೆ ಎಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X