Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಲಾತ್ಮಕತೆ ಕೃತಿಯೊಂದರ ಯಶಸ್ಸಿನ ಸಂಕೇತ:...

ಕಲಾತ್ಮಕತೆ ಕೃತಿಯೊಂದರ ಯಶಸ್ಸಿನ ಸಂಕೇತ: ಹಿರಿಯ ವಿಮರ್ಶಕ ದಂಡಪ್ಪ

ವಾರ್ತಾಭಾರತಿವಾರ್ತಾಭಾರತಿ3 Feb 2019 10:18 PM IST
share
ಕಲಾತ್ಮಕತೆ ಕೃತಿಯೊಂದರ ಯಶಸ್ಸಿನ ಸಂಕೇತ: ಹಿರಿಯ ವಿಮರ್ಶಕ ದಂಡಪ್ಪ

ಬೆಂಗಳೂರು, ಫೆ. 3: ಕಲಾತ್ಮಕತೆಯೊಂಬುದು ಕೃತಿಯೊಂದರ ಯಶಸ್ಸಿನ ಸಂಕೇತವಾಗಿದೆ. ಈ ಹಿನ್ನೆಲೆಯಲ್ಲಿ ಹಿರಿಯ ಸಾಹಿತಿ ಶೂದ್ರ ಶ್ರೀನಿವಾಸ್‌ರವರ ‘ಯಾತ್ರೆ’ ಕಾದಂಬರಿ ಯಶಸ್ವಿ ಕೃತಿಯಾಗಿದೆ ಎಂದು ಹಿರಿಯ ವಿಮರ್ಶಕ ದಂಡಪ್ಪ ಅಭಿಪ್ರಾಯಪಟ್ಟಿದ್ದಾರೆ.

ರವಿವಾರ ಕಾವ್ಯಮಂಡಲ ಮತ್ತು ಹೇಮಂತ ಪ್ರಕಾಶನ ನಗರದ ಇಸ್ರೋ ಲೇಔಟ್‌ನಲ್ಲಿ ಆಯೋಜಿಸಿದ್ದ ಶೂದ್ರ ಶ್ರೀನಿವಾಸ್‌ರವರ ಯಾತ್ರೆ ಕಾದಂಬರಿ ಕುರಿತು ಅವರು ಮಾತನಾಡಿದರು.

ಕೃತಿಯಲ್ಲಿರುವ ಪಾತ್ರಗಳು ಇಲ್ಲವೆ ಕೃತಿಗೆ ಆರಿಸಿಕೊಂಡುವ ವಸ್ತುವಿಷಯವನ್ನು ಆಧರಿಸಿ ಕೃತಿಯನ್ನು ವಿಮರ್ಶಿಸಲು ಬರುವುದಿಲ್ಲ. ಆ ಕೃತಿಯ ವಸ್ತು ವಿಷಯವನ್ನು ಹೇಗೆ ಕಲಾತ್ಮಕವಾಗಿ ಕಟ್ಟಿಕೊಟ್ಟಿದ್ದಾರೆ ಎನ್ನುವುದರ ಮೇಲೆ ಕೃತಿಯನ್ನು ವಿಮರ್ಶಿಸಬೇಕಾಗುತ್ತದೆ ಎಂದು ಅವರು ತಿಳಿಸಿದರು.

ಕಾದಂಬರಿ ಪ್ರಕಾರವೆ ಮನುಷ್ಯ ಜಿಜ್ಞಾಸೆಯನ್ನು ಸಮಗ್ರವಾಗಿ ಕಟ್ಟಿಕೊಡಲು ಸಾಧ್ಯವಾಗುವಂತಹದ್ದಾಗಿದೆ. ಅದರಲ್ಲೂ ಶೂದ್ರ ಶ್ರೀನಿವಾಸ್‌ರವರ ಯಾತ್ರೆ ಕಾದಂಬರಿಯಲ್ಲಿ ಮನುಷ್ಯ, ಸಮಾಜ ಹಾಗೂ ಜಗತ್ತನ್ನು ಹಿಡಿಯಾಗಿ, ಕಲಾತ್ಮಕವಾಗಿ ರೂಪಿಸುವ ಮೂಲಕ ಮಾನವೀಯತೆ ವೌಲ್ಯಗಳನ್ನು ಓದುಗನ ಮನಸಿನಲ್ಲಿ ಬಿತ್ತುವಲ್ಲಿ ಯಶಸ್ವಿಯಾಗಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಹಿರಿಯ ಸಾಹಿತಿ ಶೂದ್ರ ಶ್ರೀನಿವಾಸ್ ಮಾತನಾಡಿ, ನಗರೀಕರಣವು ಗ್ರಾಮಗಳನ್ನು ಒಂದೊಂದಾಗಿ ನಿರ್ಣಾಮ ಮಾಡುತ್ತಾ ವಿಸ್ತರಿಸಿಕೊಳ್ಳುತ್ತಿದೆ. ಇದರಿಂದಾಗಿ ಇಡೀ ಗ್ರಾಮೀಣ ಸಂಸ್ಕೃತಿಯೆ ನಾಶವಾಗುತ್ತಿದೆ. ಈಗಿನ ಯುವ ತಲೆಮಾರಿಗೆ ನಮ್ಮ ಕೂಡು ಕುಟುಂಬದ ಪರಿಕಲ್ಪನೆಯೆ ಇಲ್ಲವಾಗಿದೆ. ಇದೆಲ್ಲವನ್ನು ಕಾದಂಬರಿ ರೂಪಕ್ಕೆ ತರಲು ನಿರಂತರವಾಗಿ ಪ್ರಯತ್ನಿಸುತ್ತಿದ್ದೇನೆಂದು ತಿಳಿಸಿದರು.

ಕಾದಂಬರಿಯೆಂದರೆ ಅದು ಕೇವಲ ಓದುವಂತಹ ಕ್ರಿಯೆ ಮಾತ್ರವಲ್ಲ. ನಮ್ಮ ಜಗತ್ತಿನ ಅನುಭವವನ್ನು ಹಿಡಿಯಾಗಿ ಕಟ್ಟಿಕೊಡುವ ಸಾರವಾಗಿದೆ. ಕಾದಂಬರಿಯನ್ನು ಓದುವ ಮೂಲಕ ನಮ್ಮ ಸಂಸ್ಕೃತಿ, ಪರಂಪರೆ ಹಾಗೂ ಯಾವುದೆ ವಸ್ತುವಿನ ಕುರಿತು ಆಳವಾಗಿ ತಿಳಿಯಲು, ಆಲೋಚಿಸಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.

ನನ್ನಂತಹ ಹಲವರ ಚಿಂತನೆಯನ್ನು ರೂಪಿಸಿದ ನಾಡಿನ ಸಾಕ್ಷಿಪ್ರಜ್ಞೆಯಾದ ಪಿ.ಲಂಕೇಶ್ ನೇತೃತ್ವದಲ್ಲಿ ತಿಂಗಳಿಗೊಂದು ಪುಸ್ತಕ ಹಾಗೂ ಕಾವ್ಯ, ಕತೆ, ಕಾದಂಬರಿಯ ವಿವಿಧ ನೆಲೆಗಳ ಕುರಿತು ವಿಮರ್ಶಿಸುವ ಕಮ್ಮಟವನ್ನು ಆಯೋಜಿಸಲಾಗುತ್ತಿತ್ತು. ಅದೇ ಮಾದರಿಯಲ್ಲಿ ಮುಂದಿನ ದಿನಗಳಲ್ಲಿ ತಿಂಗಳಿಗೊಮ್ಮೆ ಕಮ್ಮಟವನ್ನು ನಡೆಸಲಾಗುವುದು ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಲೇಖಕರಾದ ಪ್ರೊ.ಮಲರ್ ವಿಳಿ, ಪ್ರೊ.ಜಯಶ್ರೀ ಕಂಬಾರ ಹಾಗೂ ಜಯಶಂಕರ ಹಲಗೂರು ಯಾತ್ರೆ ಕಾದಂಬರಿ ಕುರಿತು ಮಾತನಾಡಿದರು. ಈ ವೇಳೆ ಆದೂರ್ ಪ್ರಕಾಶ್, ಜೇನುಗೂಡು ಸಂಸ್ಥೆಯ ಮುಖ್ಯಸ್ಥರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X