Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗೋಣಿಬೀಡು ಬಾಲಕಿ ಆತ್ಮಹತ್ಯೆ ಪ್ರಕರಣ:...

ಗೋಣಿಬೀಡು ಬಾಲಕಿ ಆತ್ಮಹತ್ಯೆ ಪ್ರಕರಣ: ಇಬ್ಬರು ಯುವಕರ ಬಂಧನ

ಪೊಲೀಸರ ತನಿಖೆಯಿಂದ ಬಯಲಾಯ್ತು ಆತ್ಮಹತ್ಯೆಯ ರಹಸ್ಯ

ವಾರ್ತಾಭಾರತಿವಾರ್ತಾಭಾರತಿ3 Feb 2019 11:07 PM IST
share
ಗೋಣಿಬೀಡು ಬಾಲಕಿ ಆತ್ಮಹತ್ಯೆ ಪ್ರಕರಣ: ಇಬ್ಬರು ಯುವಕರ ಬಂಧನ

ಚಿಕ್ಕಮಗಳೂರು, ಫೆ.3: ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯ ಚಕ್ಕುಡಿಗೆ ಗ್ರಾಮದಲ್ಲಿ ಇತ್ತೀಚೆಗೆ ಬಾಲಕೀಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಬಾಲಕಿಯ ಆತ್ಮಹತ್ಯೆ ಘಟನೆ ಸಂಬಂಧ ಆಕೆಯ ಪೋಷಕರು ಶಂಕೆ ವ್ಯಕ್ತಪಡಿಸಿ ದೂರು ನೀಡಿದ್ದರಿಂದ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಬಾಲಕಿ ಆತ್ಮಹತ್ಯೆಗೆ ಇಬ್ಬರು ಯುವಕರು ಕಾರಣ ಎಂಬುದನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಗೋಣಿಬೀಡು ಠಾಣಾ ವ್ಯಾಪ್ತಿಯ ಚಕ್ಕುಡಿಗೆ ಗ್ರಾಮದಲ್ಲಿ ಕಳೆದ ಜ.27ರಂದು 15 ವರ್ಷದ ಬಾಲಕಿಯೋರ್ವಳು ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ಘಟನೆ ಸಂಬಂಧ ಆಕೆಯ ಕುಟುಂಬದವರು ಅನುಮಾನ ವ್ಯಕ್ತಪಡಿಸಿ ಬಾಲಕಿ ಸಾವಿನ ಹಿಂದೆ ಕಾಣದ ಕೈಗಳಿರುವ ಬಗ್ಗೆ ಆರೋಪಿಸಿ ತನಿಖೆ ಕೈಗೊಳ್ಳುವಂತೆ ಗೋಣಿಬೀಡು ಪೊಲೀಸರಿಗೆ ದೂರು ನೀಡಿದ್ದರು ಎಂದು ತಿಳಿದು ಬಂದಿದೆ.

ಪ್ರಕರಣದ ತನಿಖೆ ನಡೆಸಿದ ಪೊಲೀಸರು ಬಾಲಕಿ ಆತ್ಮಹತ್ಯೆಗೆ ಇಬ್ಬರು ಯುವಕರು ನೀಡಿದ ಕಿರುಕುಳವೇ ಕಾರಣ ಎಂಬುದನ್ನು ಪತ್ತೆ ಹಚ್ಚಿದ್ದು, ಘಟನೆ ಸಂಬಂಧ ಚಕ್ಕುಡಿಗೆ ಗ್ರಾಮದ ನವೀನ್(20) ಹಾಗೂ ಮರೇಬೈಲು ಗ್ರಾಮದ 17 ವರ್ಷದ ಬಾಲಕನೋರ್ವನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳಿಬ್ಬರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ತಿಳಿದು ಬಂದಿದೆ.

ಘಟನೆ ವಿವರ: ಜ.27ರಂದು ಚಕ್ಕುಡಿಗೆ ಗ್ರಾಮದ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಬಾಲಕಿಯನ್ನು ಅದೇ ಗ್ರಾಮದ ನವೀನ್ ಎಂಬಾತ ಕಳೆದ ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದ ಎನ್ನಲಾಗಿದ್ದು, ಬಾಲಕಿ ನವೀನನ ಪ್ರೀತಿಯನ್ನು ನಿರಾಕರಿಸಿದ್ದರೂ ಆತನ ಮಾತ್ರ ತನ್ನನ್ನು ಪ್ರೀತಿಸುವಂತೆ ಪದೇ ಪದೇ ಬಾಲಕಿಗೆ ಒತ್ತಡ ಹಾಕುತ್ತಿದ್ದ ಎನ್ನಲಾಗಿದೆ. ನವೀನನ ಒಮ್ಮುಖ ಪ್ರೀತಿಯ ವಿಚಾರವು ಬಾಲಕಿಯ ಕುಟುಂಬದವರಿಗೆ ಹಾಗೂ ನವೀನನ ಪೋಷಕರಿಗೂ ತಿಳಿದು ಕುಟುಂಬಸ್ಥರು ನವೀನನ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದರು ಎಂದು ತಿಳಿದು ಬಂದಿದೆ. 

ಈ ಮಧ್ಯೆ ಮೃತ ಬಾಲಕಿ ಮನೆಯ ಸಮೀಪದಲ್ಲಿ ಕೆಲಸಕ್ಕೆಂದು ಬಂದಿದ್ದ 17 ವರ್ಷದ ಬಾಲಕನೊಬ್ಬ ನವೀನ ಪ್ರೀತಿಸುತ್ತಿದ್ದ ಬಾಲಕಿಯನ್ನು ನೋಡಿ ಪ್ರೀತಿಸುವಂತೆ ಪದೇ ಪದೇ ಬಾಲಕಿಯನ್ನು ಸತಾಯಿಸುತ್ತಿದ್ದ. ಆದರೆ ಇದಕ್ಕೆ ಸೊಪ್ಪು ಹಾಕದ ಬಾಲಕಿ ಈತನ ಪ್ರೇಮ ನಿವೇದನೆಯನ್ನೂ ತಿರಸ್ಕರಿಸಿದ್ದಳು ಎಂದು ತಿಳಿದು ಬಂದಿದೆ. ಆದರೆ ಜ.27ರಂದು ಮಧ್ಯಾಹ್ನದ ವೇಳೆ ಬಾಲಕಿಯ ಮನೆಗೆ ಬಂದಿದ್ದ ಈ ಬಾಲಕ ತನ್ನನ್ನು ಪ್ರೀತಿಸಲೇ ಬೇಕು. ತಪ್ಪಿದಲ್ಲಿ ದೈಹಿಕ ಹಲ್ಲೆ ಮಾಡುವುದಾಗಿ ಬೆದರಿಕೆ ಹಾಕಿ ತೆರಳಿದ್ದ ಎನ್ನಲಾಗಿದೆ.

ತಾನು ಪ್ರೀತಿಸುತ್ತಿದ್ದವಳ ಹಿಂದೆ ಮತ್ತೋರ್ವ ಬೆನ್ನು ಬಿದ್ದಿರುವ ವಿಷಯ ತಿಳಿದ ನವೀನ್ ಅದೇ ದಿನ ಬಾಲಕಿ ಮನೆಗೆ ಬಂದು ತನ್ನನ್ನೇ ಪ್ರೀತಿಸಬೇಕೆಂದು ಗದರಿಸಿದ್ದ ಎಂದು ತಿಳಿದು ಬಂದಿದೆ. ಈ ಇಬ್ಬರು ಪ್ರೇಮಿಗಳ ಕಿರುಕುಳದಿಂದ ನೊಂದು ಕೊಂಡ ಬಾಲಕಿ ಅದೇ ದಿನ ಮಧ್ಯಾಹ್ನ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರೀಶ್ ಪಾಂಡೆ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ. 

ಇಬ್ಬರು ಆರೋಪಿಗಳು ತಮ್ಮ ಪ್ರೇಮ ಪುರಾಣದ ಬಗ್ಗೆ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾರೆಂದು ಪೊಲೀಸ್ ಮೂಲಗಳು ತಿಳಿಸಿದ್ದು, ಬಾಲಕಿ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ 17 ವರ್ಷದ ಬಾಲಪರಾಧಿಯನ್ನು ಸದ್ಯ ಬಾಲ ನ್ಯಾಯ ಮಂಡಳಿ ವಶಕ್ಕೊಪ್ಪಿಸಲಾಗಿದ್ದು, ನವೀನನನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X