Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ರಣಜಿ ಟ್ರೋಫಿ ಫೈನಲ್: ಮೊದಲ ದಿನ...

ರಣಜಿ ಟ್ರೋಫಿ ಫೈನಲ್: ಮೊದಲ ದಿನ ಸೌರಾಷ್ಟ್ರ ಮೇಲುಗೈ

►ಜೈದೇವ್ ಸಾರಥ್ಯದಲ್ಲಿ ಬೌಲರ್‌ಗಳ ಮೆರೆದಾಟ ►ವಿದರ್ಭ ಪ್ರ. ಇನಿಂಗ್ಸ್ 200/7

ವಾರ್ತಾಭಾರತಿವಾರ್ತಾಭಾರತಿ3 Feb 2019 11:21 PM IST
share
ರಣಜಿ ಟ್ರೋಫಿ ಫೈನಲ್: ಮೊದಲ ದಿನ ಸೌರಾಷ್ಟ್ರ ಮೇಲುಗೈ

ನಾಗ್ಪುರ, ಫೆ.3: ನಾಯಕ ಜೈದೇವ್ ಉನಾದ್ಕತ್ ನೇತೃತ್ವದ ಸೌರಾಷ್ಟ್ರ ಬೌಲಿಂಗ್ ದಾಳಿಗೆ ತತ್ತರಿಸಿದ ಚಾಂಪಿಯನ್ ವಿದರ್ಭ ತಂಡ ರಣಜಿ ಟ್ರೋಫಿ ಫೈನಲ್ ಪಂದ್ಯದ ಪ್ರಥಮ ಇನಿಂಗ್ಸ್‌ನಲ್ಲಿ 200 ರನ್ ಗಳಿಸಿ 7 ವಿಕೆಟ್‌ಗಳನ್ನು ಕಳೆದುಕೊಂಡಿದೆ.

ಇಲ್ಲಿಯ ವಿದರ್ಭ ಕ್ರಿಕೆಟ್ ಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಪ್ರಥಮ ದಿನದಾಟವಾದ ರವಿವಾರ ಟಾಸ್ ಗೆದ್ದ ವಿದರ್ಭ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಆದರೆ ತಂಡದ ಈ ನಿರ್ಧಾರ ತಪ್ಪು ಎಂದು ದಾಂಡಿಗರು ನಿರಂತರವಾಗಿ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿದಾಗ ಅರಿವಾಯಿತು. ಆತಿಥೇಯ ತಂಡದ ಪರ ಬ್ಯಾಟಿಂಗ್ ಆರಂಭಿಸಿದ ನಾಯಕ ಫೈಝ್ ಫಝಲ್(16) ಹಾಗೂ ಸಂಜಯ್ ರಾಮಸ್ವಾಮಿ(2) ತಂಡದ ಮೊತ್ತ 29 ರನ್ ಆಗುವಷ್ಟರಲ್ಲಿ ವಿಕೆಟ್ ಕೈಚೆಲ್ಲಿದರು. ಉತ್ತಮವಾಗಿ ಆಡುತ್ತಿದ್ದ ಫೈಝ್ ರನೌಟ್ ಆಗಿ ಪೆವಿಲಿಯನ್ ಸೇರಿದರೆ, ಸಂಜಯ್ ಅವರು ಉನಾದ್ಕತ್‌ಗೆ ಮೊದಲ ಬಲಿಯಾದರು.

ಆ ಬಳಿಕ ಭರವಸೆಯ ಆಟಗಾರ ವಸೀಂ ಜಾಫರ್ (23) ಇನಿಂಗ್ಸ್ ಕಟ್ಟುವ ಕಾಯಕದಲ್ಲಿ ತೊಡಗಿಕೊಂಡರೂ ದೊಡ್ಡ ಮೊತ್ತ ಗಳಿಸುವಲ್ಲಿ ವಿಫಲರಾದರು. ಉನಾದ್ಕತ್ ಅವರು ಜಾಫರ್ ರೂಪದಲ್ಲಿ ತಮ್ಮ ಎರಡನೇ ವಿಕೆಟ್ ಪಡೆದು ಸಂಭ್ರಮಿಸಿದರು. ದೈತ್ಯ ಆಟಗಾರರಾದ ಫಝಲ್ ಹಾಗೂ ವಸೀಂ ಜಾಫರ್‌ರನ್ನು ಕಡಿಮೆ ಮೊತ್ತಕ್ಕೆ ನಿಯಂತ್ರಿಸಿದ ಉನಾದ್ಕತ್ ವಿದರ್ಭ ಬ್ಯಾಟಿಂಗ್‌ಗೆ ಕಡಿವಾಣ ಹಾಕಿದ್ದು, ಪಂದ್ಯಕ್ಕೆ ದೊರೆತ ಮೊದಲ ತಿರುವಾಯಿತು. ಮೋಹಿತ್ ಕಾಳೆ(35) ಹಾಗೂ ಗಣೇಶ್ ಸತೀಶ್(35) ನಾಲ್ಕನೇ ವಿಕೆಟ್ ಜೊತೆಯಾಟದಲ್ಲಿ 46 ರನ್ ಸೇರಿಸಿದಾಗ ತಂಡದ ಮೊತ್ತ ಶತಕದ ಗಡಿ ದಾಟಿತು. ಇವರಿಬ್ಬರು ಕ್ರಮವಾಗಿ ಮಕ್ವಾನಾ ಹಾಗೂ ಮಂಕಡ್‌ಗೆ ವಿಕೆಟ್ ಒಪ್ಪಿಸಿದರು.

ವಿಕೆಟ್ ಕೀಪರ್ ದಾಂಡಿಗ ಅಕ್ಷಯ್ ವಾಡ್ಕರ್(45) ಪ್ರಥಮ ದಿನದಾಟದಲ್ಲಿ ತಂಡದ ಪರ ಗರಿಷ್ಠ ಸ್ಕೋರ್ ಗಳಿಸಿದ ಆಟಗಾರ ಎನಿಸಿದರು. ಆದಿತ್ಯ ಸರ್ವಾಟೆ ಶೂನ್ಯ ಸುತ್ತಿದರು. ಅಕ್ಷಯ್ ಕರ್ನೆವಾರ್(31) ಹಾಗೂ ಅಕ್ಷಯ್ ವಕಾರೆ(0) ಎರಡನೇ ದಿನದಾಟಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ.

ಸೌರಾಷ್ಟ್ರ ಪರ ಉತ್ತಮ ದಾಳಿ ಸಂಘಟಿಸಿದ ಉನಾದ್ಕತ್ 2 ವಿಕೆಟ್ ಪಡೆದರೆ, ಚೇತನ್ ಸಕಾರಿಯಾ, ಪ್ರೇರಕ್ ಮಂಕಡ್, ಧರ್ಮೇಂದ್ರ ಸಿಂಹ ಜಡೇಜ ಹಾಗೂ ಕಮಲೇಶ್ ಮಕ್ವಾನಾ ತಲಾ ಒಂದೊಂದು ವಿಕೆಟ್ ಹಂಚಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X