Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಿ.ಎಂ.ವಿ.ಕೃಷ್ಣಪ್ಪ ಬರದ ಜಿಲ್ಲೆಗೆ...

ದಿ.ಎಂ.ವಿ.ಕೃಷ್ಣಪ್ಪ ಬರದ ಜಿಲ್ಲೆಗೆ ಬದುಕು ನೀಡಿದ ಹರಿಕಾರ: ಎಸ್.ಎಂ.ಕೃಷ್ಣ

ದಿ. ಎಂ.ವಿ.ಕೃಷ್ಣಪ್ಪ ಜನ್ಮಶತಮಾನೋತ್ಸಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ3 Feb 2019 11:56 PM IST
share
ದಿ.ಎಂ.ವಿ.ಕೃಷ್ಣಪ್ಪ ಬರದ ಜಿಲ್ಲೆಗೆ ಬದುಕು ನೀಡಿದ ಹರಿಕಾರ: ಎಸ್.ಎಂ.ಕೃಷ್ಣ

ಕೋಲಾರ, ಫೆ.3: ಬರದ ಜಿಲ್ಲೆಗಳಲ್ಲಿ ಜನರಿಗೆ ಬದುಕು ನೀಡಿದ ಹೈನೋದ್ಯಮದ ಇಂದಿನ ಔನತ್ಯವನ್ನು ಕ್ರೀರಕ್ರಾಂತಿಯ ಹರಿಕಾರ ಎಂ.ವಿ.ಕೃಷ್ಣಪ್ಪ ಅವರಿಗೆ ಸಮರ್ಪಣೆಯಾಗಲಿ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅಭಿಪ್ರಾಯಪಟ್ಟರು.

ಕೋಲಾರ, ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಹಾಗೂ ಹಾಲು ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿದ್ದ ದಿವಂಗತ ಎಂ.ವಿ.ಕೃಷ್ಣಪ್ಪ ಅವರ ಜನ್ಮಶತಮಾನೋತ್ಸವ ಕಾರ್ಯಕ್ರಮವನ್ನು ಗೋಪೂಜೆ ಹಾಗೂ ಗೋವುಗಳಿಗೆ ಮೇವು ತಿನ್ನಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಯುವ ಪೀಳಿಗೆಯ ರಾಜಕಾರಣಿಗಳಿಗೆ ಎಂವಿ.ಕೆ ಅವರ ಹಾಸ್ಯದ ತುಣುಕುಗಳಿರುವ ಭಾಷಣ ಓದುವಂತೆ ಸಲಹೆ ನೀಡಿದ ಅವರು, ಹಾಸ್ಯ ಪ್ರವೃತ್ತಿಯ ಮೂಲಕವೇ ಎದುರಾಳಿಗಳನ್ನು ಸಮರ್ಥವಾಗಿ ಎದುರಿಸುತ್ತಿದ್ದ ಕೃಷ್ಣಪ್ಪ ರಾಜಕಾರಣಿಗಳಿಗೆ ಆದರ್ಶವಾಗಿದ್ದರು ಎಂದು ತಿಳಿಸಿದರು. ಸ್ಪೂರ್ತಿಯ ಚಿಲುಮೆಯಾಗಿ ಯುವಶಕ್ತಿಯ ಅವಧೂತರಾಗಿ ರಾಜಕಾರಣಕ್ಕೆ ಬಂದ ಎಂವಿಕೆ ವರ್ಣರಂಜಿತ ವ್ಯಕ್ತಿತ್ವ ಸ್ಮರಿಸುವ ಸಂದರ್ಭ ನನಗೆ ಬಂದಿದ್ದು, ಅವರಿಗೆ ಪ್ರಣಾಮ ಸಲ್ಲಿಸುತ್ತೇನೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಸಿ.ಬಿ.ಕೃಷ್ಣಭೈರೇಗೌಡ ಮಾತನಾಡಿ, ರಾಜ್ಯದ 12 ಜಿಲ್ಲೆಗಳಲ್ಲಿ ಲಾಲ್‌ಬಹುದ್ದೂರು ಶಾಸ್ತ್ರಿ ಅವರನ್ನು ಕರೆಸಿ ಹಾಲು ಒಕ್ಕೂಟಗಳನ್ನು ಉದ್ಘಾಟಿಸಿದ ಎಂ.ವಿ.ಕೆ ಅವರು ಕೆಸಿ ರೆಡ್ಡಿ ನಂತರ ಮುಖ್ಯಮಂತ್ರಿಯಾಗುವ ಅರ್ಹತೆ ಹೊಂದಿದ್ದರು. ಆದರೆ ಸ್ವಲ್ಪ ದರಲ್ಲಿ ತಪ್ಪಿ ಹೋಯಿತು ಎಂದರು. ಸ್ವೀಕರ್ ರಮೇಶ್ ಕುಮಾರ್ ಮಾತನಾಡಿ, ಅಖಂಡ ಕರ್ನಾಟಕದ ಭೂಪಟದಲ್ಲಿ ಶಾಪಗ್ರಸ್ಥ ಬೌಗೋಳಿಕ ಪ್ರದೇಶ, ನದಿ, ಜಲಾಶಯಗಳಿಲ್ಲದ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳ ಜನರಿಗೆ ಬದುಕು ನೀಡಿದವರು ಎಂ.ವಿ.ಕೃಷ್ಣಪ್ಪ ಎಂದರು.
 
ಗ್ರಾಮಗಳ ಹೆಣ್ಣುಮಕ್ಕಳು ಇಂದು ಸ್ವಾಭಿಮಾನದ ಬದುಕು ಕಾಣಲು ಹೈನೋದ್ಯಮ ಮಾತ್ರ ಕಾರಣವಾಗಿದೆ. ತಿಂಗಳಿಗೆ 100 ಕೋಟಿ ರೂ., ವರ್ಷಕ್ಕೆ 1,300 ಕೋಟಿ ರೂ.ಗಳ ಬಟವಾಡೆಯಾಗುತ್ತದೆ. ಇಂತಹ ಆರ್ಥಿಕ ಉತ್ಪತ್ತಿಯನ್ನು ಯಾವ ಆರ್ಥಿಕ ತಜ್ಞರಿಂದಲೂ ತರಿಸಲು ಸಾಧ್ಯವಿಲ್ಲ ಎಂದರು. ಮಾಜಿ ಪ್ರಧಾನಿ ದೇವೇಗೌಡರು ಅನಾರೋಗ್ಯದ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಬರಲಾಗದೇ ಕಳುಹಿಸಿದ್ದ ಸಂದೇಶವನ್ನು ಸಚಿವ ಸಿ.ಬಿ.ಕೃಷ್ಣಭೈರೇಗೌಡ ವಾಚಿಸಿದರು.

ಇದೇ ಸಂದರ್ಭದಲ್ಲಿ ಎಂ.ವಿ.ಕೃಷ್ಣಪ್ಪ ಅವರ ಧರ್ಮಪತ್ನಿ ಪ್ರಮೀಳಾ ಕೃಷ್ಣಪ್ಪ ಅವರನ್ನು ಡಿಸಿಸಿ ಬ್ಯಾಂಕ್ ಮತ್ತು ಕೋಚಿಮುಲ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮಕ್ಕೆ ಆಗಮಿದ್ದ ಸಹಸ್ರಾರು ಮಂದಿಗೆ ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಊಟದ ವ್ಯವಸ್ಥೆ ಮಾಡಿದ್ದರು. ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಕಾರ್ಯಕ್ರಮ ನಿರೂಪಿಸಿದರು.

‘ಸಿದ್ದರಾಮಯ್ಯನವರಿಗೂ, ನನಗೂ ಭಿನ್ನಾಭಿಪ್ರಾಯವಿಲ್ಲ’

ವೇದಿಕೆಯಲ್ಲಿ ಎಸ್.ಎಂ.ಕಷ್ಣ, ಸಿದ್ದರಾಮಯ್ಯ, ಪ್ರಮೀಳ ಎಂ.ವಿ.ಕೃಷ್ಣಪ್ಪ ಅವರಿಗೆ ಮಾತ್ರ ಮೂರು ಆಸನಗಳನ್ನು ದೂರ ದೂರ ಹಾಕಲಾಗಿತ್ತು. ಇದನ್ನು ಕಂಡ ಎಸ್.ಎಂ.ಕೃಷ್ಣ, ಕಾವೇರಿ ಸಮಸ್ಯೆಯ ಬಗ್ಗೆ ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ದಿಲ್ಲಿಯಲ್ಲಿ ನಾಲ್ಕು ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದಿದ್ದ ಸಂದರ್ಭದಲ್ಲಿ ಎಲ್ಲರೂ ದೂರ ದೂರ ಕುಳಿತ ಸಂದರ್ಭವನ್ನು ನೆನಪು ಮಾಡಿಕೊಂಡರು. ಇಂತಹ ಪರಿಸ್ಥಿತಿ ಬೇಡ. ಆಸನಗಳನ್ನು ಹತ್ತಿರವಾಗಿಸಿ. ಸಿದ್ದರಾಮಯ್ಯರೊಂದಿಗೆ ನಾನು ಮಾತನಾಡುತ್ತೇನೆ. ನಮ್ಮಲ್ಲಿ ಏನೂ ಭಿನ್ನಾಭಿಪ್ರಾಯವಿಲ್ಲ ಎಂದು ಎಸ್.ಎಂ.ಕೃಷ್ಣ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X