Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪರಿಸರದ ವಿಷಯದಲ್ಲಿ ಮನುಷ್ಯ...

ಪರಿಸರದ ವಿಷಯದಲ್ಲಿ ಮನುಷ್ಯ ಎಚ್ಚೆತ್ತುಕೊಳ್ಳಲಿ: ಚಿಂತಕ ಅಶೋಕವರ್ಧನ

ಪರಿಸರ ಕುರಿತ ರಾಜ್ಯಮಟ್ಟದ ವಿಚಾರ ಸಂಕಿರಣ

ವಾರ್ತಾಭಾರತಿವಾರ್ತಾಭಾರತಿ4 Feb 2019 7:50 PM IST
share
ಪರಿಸರದ ವಿಷಯದಲ್ಲಿ ಮನುಷ್ಯ ಎಚ್ಚೆತ್ತುಕೊಳ್ಳಲಿ: ಚಿಂತಕ ಅಶೋಕವರ್ಧನ

ಮಂಗಳೂರು, ಫೆ. 4: ಕೆಲಸವಿಲ್ಲದ ಇಂಜಿನಿಯರ್‌ವೊಬ್ಬ ಕಟ್ಟಿದ ಕನಸೇ ನೇತ್ರಾವತಿ ನದಿ ತಿರುವು ಯೋಜನೆ. ಎತ್ತಿನಹೊಳೆಯಂಥ ಯೋಜನೆಗಳಲ್ಲಿ ನೀರಿನ ಬದಲು ಹಣದ ಹೊಳೆಯೇ ಹರಿಯುತ್ತಿದೆ. ಮನುಷ್ಯ ಪರಿಸರದ ವಿಷಯದಲ್ಲಿ ಇನ್ನಾದರೂ ಎಚ್ಚೆತ್ತು ಹೆಜ್ಜೆಯಿಡಬೇಕು. ಇಲ್ಲವಾದರೆ ಜೀವಿಗಳ ವಿಕಾಸದಲ್ಲಿ ಡೈನೋಸರ್‌ಗಳಿಗಾದ ಅವಸ್ಥೆಯೇ ಮನುಷ್ಯನಿಗೂ ಆಗುತ್ತದೆ ಎಂದು ಜಿ.ಎನ್. ಅಶೋಕವರ್ಧನ ಎಚ್ಚರಿಸಿದ್ದಾರೆ.

ನಗರದ ಸಂತ ಆ್ಯಗ್ನೆಸ್ ಕಾಲೇಜಿನಲ್ಲಿ ರಥಬೀದಿ ಡಾ.ದಯಾನಂದ ಪೈ, ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜು, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಮಂಗಳೂರು ಆಕಾಶವಾಣಿ ಸಹಭಾಗಿತ್ವದೊಂದಿಗೆ ಸೋಮವಾರ ನಡೆದ ‘ಪರಿಸರ: ವರ್ತಮಾನದ ತಲ್ಲಣಗಳು; ಕಾಯ್ದೆ ಮತ್ತು ಅನುಷ್ಠಾನ’ ರಾಜ್ಯಮಟ್ಟದ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

ಆಧುನಿಕ ಮಾನವನು ಕೃಷಿ ಸೇರಿದಂತೆ ವಿವಿಧ ಕಾರಣಗಳಿಗಾಗಿ ಅರಣ್ಯ ನಾಶ ಮಾಡುವುದರಲ್ಲಿ ತಲ್ಲೀನನಾಗಿದ್ದಾನೆ. ಪರಿಸರ ಸಂಬಂಧಿ ಯೋಜನೆಗಳಲ್ಲಿ ಮಾತಿನ ಚಮತ್ಕಾರ ಕಾಣಿಸುತ್ತಿದೆ. ಇದರಿಂದ ಹಸಿರು ಹೊದಿಕೆ ಇಳಿಮುಖವಾಗುತ್ತಿದೆ. ಗಣಿಗಾರಿಕೆಯಿಂದಾಗಿ ಹೇಗೆ ಹಸಿರು ಹೊದಿಕೆ ಶೂನ್ಯವಾಗುತ್ತಿದೆ. ಇದಕ್ಕೆ ಕುದುರೆಮುಖದ ಅರಣ್ಯವೊಂದರ ಉದಾಹರಣೆ ಸಾಕು ಎಂದು ಅವರು ವಿವರಿಸಿದರು.

ಸಣ್ಣಪುಟ್ಟ ಮಾರಾಟ ಮಳಿಗೆಗಳ ಮೇಲೆ ದಾಳಿ ಮಾಡಿ ಪ್ಲಾಸ್ಟಿಕ್ ವಶಪಡಿಸಿಕೊಂಡು ದಂಡ ಹಾಕುವುದು ವರ್ಷಗಳಿಂದಲೂ ನಡೆದು ಬರುತ್ತಿದೆ. ಅದನ್ನು ತಯಾರಿಸುವ ಕಾರ್ಕಾನೆಗಳನ್ನು ನಿಲ್ಲಿಸುವ ಯಾವುದೇ ಪ್ರಯತ್ನ ನಡೆಯುತ್ತಿಲ್ಲ. ಕಸ ಸೃಷ್ಟಿಸಿದವರೇ ವಿಲೇವಾರಿ ಮಾಡಬೇಕೆಂದು ಕಡ್ಡಾಯ ಮಾಡಬೇಕಾದ ಸರಕಾರ ತದ್ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ಮನೆಮನೆಗೆ ವಾಹನ ಕಳುಹಿಸಿ ಕಸ ಸಂಗ್ರಹಿಸುತ್ತಿದೆ ಎಂದರು.

ರೈಲು ಮಾರ್ಗ, ರಸ್ತೆ ಅಗಲೀಕರಣ, ಕೊಳವೆ ಮಾರ್ಗ, ಅಣೆಕಟ್ಟುಗಳು, ಸುರಂಗ ಮಾರ್ಗಗಳು ಪಶ್ಚಿಮ ಘಟ್ಟವನ್ನು ಸೀಳಿದೆ. ವಿಶ್ವ ಪಾರಂಪರಿಕ ಜಾಗತಿಕ ಮನ್ನಣೆ ಸಿಗುತ್ತದೆಂದಾದರೂ ವನ್ಯಜೀವಿ ಇಲಾಖೆ, ಸರಕಾರ ಕ್ಷಣ ಕಾಲ ವಿಳಂಬ ಮಾಡದೇ ತಿರಸ್ಕರಿಸಿದೆ ಎಂದರು.

ತಂತ್ರಜ್ಞಾನದ ಅಮಲಿನಲ್ಲಿ ಗುಡ್ಡ ಕಡಿದು ಕಣಿವೆ ತುಂಬಿ ರಸ್ತೆ, ಕಟ್ಟಡ ನಿರ್ಮಿಸುವ ಪ್ರವೃತ್ತಿ ಮುಂದುವರಿದಿದೆ. ರಾಜಕಾರಣಿಗಳು, ಸರಕಾರಿ ಅಧಿಕಾರಿಗಳು ಹೆಚ್ಚಿನವರು ಹೊಟ್ಟೆ ಪಾಡಿನವರು. ಯಾವುದೇ ಕೆಲಸಕ್ಕೆ ನ್ಯಾಯ ಒದಗಿಸುವ ಬದಲು ಸ್ವಂತ ಪ್ರಚಾರ, ಹಣ ಗಳಿಸುವುದರಲ್ಲೇ ಮುಳುಗಿದ್ದಾರೆ. ಹೀಗೆ ದುರ್ಬಲಗೊಂಡ ವ್ಯವಸ್ಥೆಯೇ ಪರಿಸರ ತಲ್ಲಣಗಳಿಗೆ ಕಾರಣ ಎಂದರು.

ಸಂತ ಆ್ಯಗ್ನೆಸ್ ಕಾಲೇಜಿನ ಪ್ರಾಂಶುಪಾಲೆ ಡಾ.ಸಿ.ಎಂ.ಜೆಸ್ವೀನಾ ಎ.ಸಿ. ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿ ರಾಜಶೇಖರ ಡಿ.ಪುರಾಣಿಕ, ಡಾ.ದಯಾನಂದ ಪೈ-ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಪ್ರೊ. ರಾಜಶೇಖರ್ ಹೆಬ್ಬಾರ್, ಆಕಾಶವಾಣಿ ನಿಲಯ ನಿರ್ದೇಶಕಿ ಉಷಾಲತಾ ಎಸ್. ಮತ್ತಿತರರು ಉಪಸ್ಥಿತರಿದ್ದರು.

ಸಂತ ಆ್ಯಗ್ನೆಸ್ ಕಾಲೇಜು ಕನ್ನಡ ಸಂಘದ ಸಂಚಾಲಕ ಡಾ.ಸಂಪೂರ್ಣಾನಂದ ಬಳ್ಕೂರು ಸ್ವಾಗತಿಸಿದರು. ಅನನ್ಯಾ ಬಳಂತಿಮೊಗರು ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮ ಸಂಚಾಲಕ ಡಾ. ಪ್ರಕಾಶಚಂದ್ರ ಶಿಶಿಲ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X