Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದೇಶದಲ್ಲಿ ನಿರುದ್ಯೋಗವಿಲ್ಲ ಎಂದ ಕೇಂದ್ರ...

ದೇಶದಲ್ಲಿ ನಿರುದ್ಯೋಗವಿಲ್ಲ ಎಂದ ಕೇಂದ್ರ ಸಚಿವ: ಡಿವೈಎಫ್‌ಐ ಖಂಡನೆ

ವಾರ್ತಾಭಾರತಿವಾರ್ತಾಭಾರತಿ4 Feb 2019 10:42 PM IST
share

ಮಂಗಳೂರು, ಫೆ.4: ಕೇಂದ್ರ ಸರಕಾರದ ಮಧ್ಯಂತರ ಬಜೆಟ್‌ಗೆ ಸರಕಾರ ನಿರೀಕ್ಷಿಸದ ರೀತಿಯಲ್ಲಿ ದೇಶವ್ಯಾಪಿ ತೀವ್ರ ವಿರೋಧ ಹಾಗೂ ಪ್ರತಿರೋಧ ವ್ಯಕ್ತವಾಗುತ್ತಿದ್ದು, ಕೇಂದ್ರ ಸಚಿವ ಅರುಣ್ ಜೇಟ್ಲಿ ದೇಶದಲ್ಲಿ ನಿರುದ್ಯೋಗವೇ ಇಲ್ಲ ಎಂದು ಸಮರ್ಥನೆ ನೀಡುತ್ತಿರುವುದು ಜನತೆಗೆ ಮಾಡುವ ಮಹಾದ್ರೋಹ ಎಂದು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್ (ಡಿವೈಎಫ್‌ಐ) ಕರ್ನಾಟಕ ರಾಜ್ಯ ಸಮಿತಿ ತೀವ್ರವಾಗಿ ಖಂಡಿಸಿದೆ.

#WhereIsMyJob ಕಾರ್ಷಿಕ ಬಿಕ್ಕಟ್ಟಿನ ಪರಿಹಾರಕ್ಕಾಗಿ 170ಕ್ಕೂ ಹೆಚ್ಚು ರೈತ ಸಂಘಟನೆಗಳು ಸೇರಿ ಮಾಡಿದ ಕಿಸಾನ್ ಸಂಘರ್ಷ ಯಾತ್ರೆ, ತಮಿಳುನಾಡು ರೈತರು ತಲೆಬುರುಡೆ ಇಟ್ಟು ನಡೆಸಿದ ಪ್ರತಿಭಟನೆ, ಕಾರ್ಮಿಕರು ಪಾರ್ಲಿಮೆಂಟ್ ಚಲೋ, ದಲಿತ, ಮಹಿಳಾ ಸಮುದಾಯ ಹಾಗೂ ನೌಕರರ ವರ್ಗದ ಹೋರಾಟ, ಉದ್ಯೋಗಕ್ಕೆ ಒತ್ತಾಯಿಸಿ ದೇಶವ್ಯಾಪಿ ಯುವಜನರು ಡಿವೈಎಫ್‌ಐ ನಿಂದ ಕಳೆದ ವರ್ಷ ನವಂಬರ್‌ನಲ್ಲಿ ಘೋಷಣೆಯಡಿ ನಡೆಸಿದ ಹೋರಾಟ, ನಿವೃತ್ತ ಸೈನಿಕರು ಪಿಂಚಣಿಗಾಗಿ ನಡೆಸಿದ ಪ್ರತಿಭಟನೆ ಇನ್ನೂ ಹತ್ತಾರು ಐತಿಹಾಸಿಕ ಹೋರಾಟಗಳು ದೇಶದ ಆಡಳಿತ ಕೇಂದ್ರ ನವ ದೆಹಲಿಯಲ್ಲೆ ನಡೆದಿವೆ. ಆಳುವ ಸರಕಾರವೇ ತನ್ನ ಅಸಮರ್ಥತೆಯನ್ನು ಎತ್ತಿ ಹಿಡಿಯುತ್ತಿದೆಯಲ್ಲದೇ ತಾವು ಆಡಳಿತ ನಡೆಸಲು ಅಯೋಗ್ಯರೆಂದು ಜೇಟ್ಲಿ ಹೇಳಿಕೊಂಡಿದ್ದಾರೆ ಎಂದು ಡಿವೈಎಫ್‌ಐ ರಾಜ್ಯ ಅಧ್ಯಕ್ಷ ಮುನೀರ್ ಕಾಟಿಪಳ್ಳ ಹೇಳಿಕೆಯಲ್ಲಿ ತಿಳಿಸಿದರು.

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಅಧಿಕಾರದಲ್ಲಿ ಇತ್ತಿಚೇಗೆ ನೇಮಕಾತಿ ಸಂದರ್ಭ ಕೋಟಿಗಟ್ಟಲೇ ಯುವಜನರು ಅರ್ಜಿ ಹಾಕಿದ್ದು, ನಿರುದ್ಯೋಗದ ಕರಾಳ ವಾಸ್ತವವನ್ನು ಕಣ್ಣಿಗೆ ರಾಚುವಂತೆ ತೋರುತ್ತಿದೆ. ಭಾರತೀಯ ರೇಲ್ವೆ ಇಲಾಖೆಯ ನೇಮಕಾತಿ ಮಂಡಳಿಯ 62,9067 ಗ್ಯಾಂಗ್ ಮನ್, ಹೆಲ್ಪರ್, ಮೆಕ್ಯಾನಿಕಲ್, ಇಲೆಕ್ಟ್ರಿಷಿಯನ್ ಇತ್ಯಾದಿ ಹುದ್ದೆಗಳಿಗೆ 1 ಕೋಟಿ 90 ಲಕ್ಷ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಇದರಲ್ಲಿ ಬಹುತೇಕರು ಸ್ನಾತಕೋತ್ತರ ಪದವೀಧರರಾಗಿದ್ದಾರೆ ಎಂದು ಮುನೀರ್ ಕಾಟಿಪಳ್ಳ ತಿಳಿಸಿದರು.

ಇನ್ನು ಕೇಂದ್ರ ಸರಕಾರದ ಅಡಿಯಲ್ಲೇ ಇರುವ ಹಲವು ಇಲಾಖೆಗಳಲ್ಲಿ (ಎಲ್‌ಐಸಿಯಂತಹ ಬೃಹತ್ ಸಂಸ್ಥೆಗಳನ್ನು ಹೊರತುಪಡಿಸಿ) 25ಲಕ್ಷಕ್ಕೂ ಅಧಿಕ ಹುದ್ದೆಗಳು ಖಾಲಿ ಇವೆ. ಇನ್ನೂ ಆಯ ರಾಜ್ಯಗಳಲ್ಲಿಯೂ ಕೂಡ ಲಕ್ಷಾಂತರ ಹುದ್ದೆಗಳು ಖಾಲಿ ಬಿದ್ದಿವೆ. ಕೋಟ್ಯಂತರ ಯುವಜನತೆ ಉದ್ಯೋಗವಿಲ್ಲದೇ ದಿನನಿತ್ಯ ಪರದಾಡುತ್ತಿದ್ದರೂ ಕೇಂದ್ರ ಸಚಿವರು ಜನತೆಯನ್ನು ದಿಕ್ಕು ತಪ್ಪಿಸಲು ಈ ರೀತಿ ಸುಳ್ಳಿನ ದಾರಿಗೆ ಶರಣಾಗಿದ್ದಾರೆ ಎಂದು ಹೇಳಿದರು.

ದೇಶವನ್ನು ದಿವಾಳಿ ಅಂಚಿಗೆ ತಲುಪಿಸಿ, ಯುವಜನರಿಗೆ ಉದ್ಯೋಗ ಒದಗಿಸದೇ ನಿರುದ್ಯೋಗ ಹೆಚ್ಚಳಕ್ಕೆ ಕಾರಣವಾಗಿರುವ ಕೇಂದ್ರದ ವಿರುದ್ಧ ಹೋರಾಟಕ್ಕೆ ಮುಂದಾಗಬೇಕೆಂದು ಡಿವೈಎಫ್‌ಐ ಕರ್ನಾಟಕ ರಾಜ್ಯ ಸಮಿತಿ ತೀವ್ರವಾಗಿ ಖಂಡಿಸಿದೆ. ಕೂಡಲೇ ಸಚಿವರು ದೇಶದ ಜನತೆಗೆ ನೀಡಿದ ಈ ಸುಳ್ಳು ಹೇಳಿಕೆಯನ್ನು ವಾಪಸ್ ಪಡೆದು ಕ್ಷಮೆಯಾಚಿಸಬೇಕು. ಖಾಲಿ ಇರುವ ಹುದ್ದೆಗಳನ್ನು ಕೂಡಲೇ ಭರ್ತಿಗೊಳಿಸಲು ಮುಂದಾಗಬೇಕೆಂದು ಪ್ರಕಟನೆಯಲ್ಲಿ ಒತ್ತಾಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X