Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ನಕಲಿ ವಿವಿ ಹಗರಣ: ಭಾರತದ ವಿವರಣೆಯನ್ನು...

ನಕಲಿ ವಿವಿ ಹಗರಣ: ಭಾರತದ ವಿವರಣೆಯನ್ನು ಒಪ್ಪದ ಅಮೆರಿಕ

ವಾರ್ತಾಭಾರತಿವಾರ್ತಾಭಾರತಿ5 Feb 2019 8:47 PM IST
share
ನಕಲಿ ವಿವಿ ಹಗರಣ: ಭಾರತದ ವಿವರಣೆಯನ್ನು ಒಪ್ಪದ ಅಮೆರಿಕ

ವಾಶಿಂಗ್ಟನ್, ಫೆ. 5: ಅಮೆರಿಕದ ನಕಲಿ ವಿಶ್ವವಿದ್ಯಾನಿಲಯದಲ್ಲಿ ಪ್ರವೇಶ ಪಡೆದುಕೊಂಡಿರುವ ಭಾರತೀಯ ವಿದ್ಯಾರ್ಥಿಗಳು ‘ಮೋಸ ಹೋಗಿರುವ ಸಾಧ್ಯತೆಯಿದೆ’ ಹಾಗೂ ಅವರು ‘ಪಿತೂರಿಯ ಬಲಿಪಶುಗಳಾಗಿರಬಹುದು’ ಎಂಬ ಭಾರತದ ವಾದವನ್ನು ಅಮೆರಿಕ ತಿರಸ್ಕರಿಸಿದೆ. ತಾವು ಅಪರಾಧ ಮಾಡುತ್ತಿದ್ದೇವೆ ಎನ್ನುವುದು ಬಂಧಿತ ಭಾರತೀಯರಿಗೆ ಗೊತ್ತಿತ್ತು ಎಂದು ಅದು ಹೇಳಿದೆ.

ಕೆಲವು ಭಾರತೀಯರು ಈಗಾಗಲೇ ಭಾರತಕ್ಕೆ ಮರಳಿದ್ದಾರೆ. ಆದರೆ, ಹೆಚ್ಚಿನವರು ಅಮೆರಿಕದ ಸುಪರ್ದಿಯಲ್ಲಿದ್ದಾರೆ. ನಕಲಿ ವಿಶ್ವವಿದ್ಯಾನಿಲಯದಲ್ಲಿ ನೋಂದಾಯಿಸಿಕೊಂಡಿರುವುದಕ್ಕಾಗಿ ಅವರು ಗಡಿಪಾರು ಎದುರಿಸುತ್ತಿದ್ದಾರೆ.

ವಿದ್ಯಾರ್ಥಿ ವೀಸಾಗಳನ್ನು ದುರುಪಯೋಗಪಡಿಸುವವರನ್ನು ಪತ್ತೆಹಚ್ಚುವುದಕ್ಕಾಗಿ ಅಮೆರಿಕದ ಗುಪ್ತಚರ ಸಂಸ್ಥೆಗಳು ಮಿಶಿಗನ್ ರಾಜ್ಯದಲ್ಲಿ ‘ಫಾರ್ಮಿಂಗ್ಟನ್ ವಿಶ್ವವಿದ್ಯಾನಿಲಯ’ ಎಂಬ ನಕಲಿ ವಿಶ್ವವಿದ್ಯಾನಿಲಯವೊಂದನ್ನು ಸ್ಥಾಪಿಸಿರುವುದನ್ನು ಸ್ಮರಿಸಬಹುದಾಗಿದೆ.

ಈ ವಿಶ್ವವಿದ್ಯಾನಿಲಯಕ್ಕೆ ಕಮಿಶನ್ ಆಧಾರದಲ್ಲಿ ವಿದ್ಯಾರ್ಥಿಗಳನ್ನು ಸೇರ್ಪಡೆಗೊಳಿಸುತ್ತಿದ್ದ ಆರೋಪದಲ್ಲಿ ಭಾರತ ಮೂಲದ 8 ಮಂದಿಯನ್ನು ಪೊಲೀಸರು ಈಗಾಗಲೇ ಬಂಧಿಸಿರುವುದನ್ನು ಸ್ಮರಿಸಬಹುದಾಗಿದೆ.

ವಿದ್ಯಾರ್ಥಿಗಳ ಬಂಧನಕ್ಕೆ ಭಾರತ ಕಟುವಾಗಿ ಪ್ರತಿಕ್ರಿಯಿಸಿದೆ. ವಿಶ್ವವಿದ್ಯಾನಿಲಯಕ್ಕೆ ಪ್ರವೇಶ ಪಡೆಯುವಂತೆ ಭಾರತೀಯ ವಿದ್ಯಾರ್ಥಿಗಳನ್ನು ವಂಚಿಸಿರಬಹುದು ಎಂಬುದಾಗಿ ಹೊಸದಿಲ್ಲಿಯಲ್ಲಿರುವ ಅಮೆರಿಕ ರಾಯಭಾರ ಕಚೇರಿಗೆ ಸಲ್ಲಿಸಿರುವ ಹೇಳಿಕೆಯೊಂದರಲ್ಲಿ ಅದು ಹೇಳಿದೆ. ಹಾಗಾಗಿ, ಅವರನ್ನು ‘ನೇಮಕಾತಿದಾರ’ರಿಗಿಂತ ಭಿನ್ನವಾಗಿ ಪರಿಗಣಿಸಬೇಕು ಎಂದು ಭಾರತ ಒತ್ತಾಯಿಸಿದೆ.

‘ಅಪರಾಧ ಮಾಡುತ್ತಿದ್ದೇವೆ ಎನ್ನುವುದು ಅವರಿಗೆ ಗೊತ್ತಿತ್ತು’

‘‘ಈ ವಿಶ್ವವಿದ್ಯಾನಿಲಯದಲ್ಲಿ ಶಿಕ್ಷಕರಿಲ್ಲ ಹಾಗೂ ತರಗತಿಗಳಿಲ್ಲ ಎನ್ನುವುದು ಈ ಯೋಜನೆಯಲ್ಲಿ ಶಾಮೀಲಾದ ಎಲ್ಲರಿಗೂ ತಿಳಿದಿತ್ತು. ಅಮೆರಿಕದಲ್ಲಿ ವಂಚನೆಯಿಂದ ಉಳಿಯುವುದಕ್ಕಾಗಿ ತಾವು ಅಪರಾಧ ಮಾಡುತ್ತಿದ್ದೇವೆ ಎನ್ನುವುದೂ ಅವರಿಗೆ ಗೊತ್ತಿತ್ತು’’ ಎಂದು ಅಮೆರಿಕದ ವಿದೇಶಾಂಗ ಇಲಾಖೆಯ ವಕ್ತಾರರೊಬ್ಬರು ಸೋಮವಾರ ನೀಡಿದ ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X