Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರೋಗ ಹರಡವಿಕೆಯನ್ನು ನರಹತ್ಯೆ ಪ್ರಕರಣವಾಗಿ...

ರೋಗ ಹರಡವಿಕೆಯನ್ನು ನರಹತ್ಯೆ ಪ್ರಕರಣವಾಗಿ ಪರಿಗಣಿಸಬಹುದೇ

ರಾಜ್ಯ ಅಡ್ವೋಕೇಟ್ ಜನರಲ್ ಸಹಿತ ನಾಲ್ವರಿಗೆ ಹೈಕೋರ್ಟ್ ಸಲಹೆ

ವಾರ್ತಾಭಾರತಿವಾರ್ತಾಭಾರತಿ5 Feb 2019 11:00 PM IST
share
ರೋಗ ಹರಡವಿಕೆಯನ್ನು ನರಹತ್ಯೆ ಪ್ರಕರಣವಾಗಿ ಪರಿಗಣಿಸಬಹುದೇ

ಬೆಂಗಳೂರು, ಫೆ.5: ಎಚ್‌ಐವಿಗಿಂತಲೂ ಅಪಾಯಕಾರಿ ಎನ್ನಲಾದ ಹರ್ಪೆಸ್ ಸಿಂಪ್ಲೆಕ್ಸ್ ವೈರಸ್ (ಎಚ್‌ಎಸ್‌ವಿ) ಎಂಬ ರೋಗವನ್ನು ಪತಿಯು ಪತ್ನಿಗೆ ಹರಡಿದ್ದಾರೆ ಎನ್ನಲಾದ ಅತಿ ಅಪರೂಪದ ಪ್ರಕರಣವೊಂದು ಹೈಕೋರ್ಟ್ ಮೆಟ್ಟಿಲೇರಿದೆ.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್, ವ್ಯಕ್ತಿಯೊಬ್ಬ ತನಗಿರುವ ಎಚ್‌ಎಸ್‌ವಿ ರೋಗವನ್ನು ಮತ್ತೊಬ್ಬರಿಗೆ ಹರಡುವುದನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳೇನು? ಹೀಗೆ ಜೀವಕ್ಕೆ ಅಪಾಯಕಾರಿಯಾದ ರೋಗ ಹರಡುವ ಕೃತ್ಯವನ್ನು ನರಹತ್ಯೆಗೆ ಪ್ರಯತ್ನಿಸಿದ ಪ್ರಕರಣವಾಗಿ ಪರಿಗಣಿಸಲು ಸಾಧ್ಯವಿದೆಯೇ? ಎಂಬ ಬಗ್ಗೆ ಸೂಕ್ತ ಕಾನೂನಾತ್ಮಕ ಸಲಹೆ ನೀಡುವಂತೆ ರಾಜ್ಯ ಅಡ್ವೋಕೇಟ್ ಜನರಲ್ ಉದಯ ಹೊಳ್ಳ, ಹೆಚ್ಚುವರಿ ಅಡ್ವೋಕೇಟ್ ಜನರಲ್ ಸಂದೇಶ್ ಚೌಟ, ಹೈಕೊರ್ಟ್ ಪ್ಲೀಡರ್ ರಾಚಯ್ಯ ಮತ್ತು ಕೇಂದ್ರ ಸರಕಾರದ ಹೆಚ್ಚುವರಿ ಸಾಲಿಸಿಟರ್ ಜನರಲ್ ಪ್ರಭುಲಿಂಗ ನಾವಡಗಿ ಅವರಿಗೆ ಸೂಚಿಸಿದೆ.

ಅಲ್ಲದೆ ಗುಣಮುಖವಾಗದ ಮತ್ತು ಮಾರಣಾಂತಿಕ ರೋಗ ಹರಡುವುದನ್ನು ಸಾಮಾಜಿಕ ಹತ್ಯೆ (ಸೋಸಿಯಲ್ ಡೆತ್) ಎಂಬುದಾಗಿಯೂ ಪರಿಗಣಿಸಲು ಸಾಧ್ಯವಿದೆಯೇ? ಈ ರೀತಿಯ ಪ್ರಕರಣಗಳ ಸಂಬಂಧ ದೇಶದಲ್ಲಿರುವ ವೈದ್ಯಕೀಯ ಹಾಗೂ ಕಾನೂನಾತ್ಮಕ ಅಂಶಗಳೇನು? ಎಂಬುದರ ಕುರಿತು ನ್ಯಾಯಾಲಯಕ್ಕೆ ಸೂಕ್ತ ಮಾಹಿತಿ ನೀಡಬೇಕು ಎಂದು ನ್ಯಾಯಮೂರ್ತಿ ಅರವಿಂದ ಕುಮಾರ್ ಸೂಚಿಸಿದ್ದಾರೆ.

ಮದುವೆಗೆ ಮುನ್ನ ಎಚ್‌ಎಸ್‌ವಿ ರೋಗ ನನ್ನ ಪತಿಗೆ ಇತ್ತು. ಈ ವಿಚಾರವನ್ನು ತಿಳಿಸದೆ ನನ್ನನ್ನು ಮದುವೆಯಾದರು. ಆ ವಿಚಾರ ಆತನ ಪೋಷಕರು ಹಾಗೂ ಕುಟುಂಬ ಸದಸ್ಯರಿಗೆ ತಿಳಿದಿತ್ತು. ಮದುವೆಯಾದ ನಂತರ ನಮ್ಮಿಬ್ಬರ ನಡುವೆ ಲೈಂಗಿಕ ಸಂಪರ್ಕ ಬೆಳೆದ ಕಾರಣ ನನಗೂ ಎಚ್‌ಎಸ್‌ವಿ ರೋಗ ತಗುಲಿತು. ಹೀಗಾಗಿ ಪತಿ ಹಾಗೂ ಆತನ ಕುಟುಂಬ ಸದಸ್ಯರು ನನಗೆ ವಂಚಿಸಿದ್ದಾರೆ. ಜೀವನಪರ್ಯಂತ ನರಳುವಂತೆ ಮಾಡಿದ್ದಾರೆ. ವರದಕ್ಷಿಣೆ ಕಿರುಕುಳ ನೀಡಿ, ಕೌಟುಂಬಿಕ ದೌರ್ಜನ್ಯ ಎಸಗಿದ್ದಾರೆ. ಜೀವ ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನ ವಿಚಾರಣೆ ನಡೆಸಿದ್ದ ಅಧೀನ ನ್ಯಾಯಾಲಯ, ಮಹಿಳೆಯ ಪತಿ ಹಾಗೂ ಆತನ ಕುಟುಂಬ ಸದಸ್ಯರ ವಿರುದ್ಧ ನರಹತ್ಯೆಗೆ ಯತ್ನಿಸಿದ, ಜೀವಕ್ಕೆ ಅಪಾಯಕಾರಿಯಾದ ರೋಗ ಹರಡಿದ, ವಂಚಿಸಿದ, ಕೌಟುಂಬಿಕ ದೌರ್ಜನ್ಯ ಹಾಗೂ ಅತ್ಯಾಚಾರ ಎಸಗಿದ, ಜೀವ ಬೆದರಿಕೆ ಹಾಕಿ ಹಲ್ಲೆ ನಡೆಸಿದ ಪ್ರಕರಣವೆಂದು ವಿಚಾರಣೆಗೆ ಅಂಗೀಕರಿಸಿ ಸಮನ್ಸ್ ಜಾರಿ ಮಾಡಿತ್ತು. ಅಧೀನ ನ್ಯಾಯಾಲಯದ ಈ ಆದೇಶ ರದ್ದುಪಡಿಸುವಂತೆ ಕೋರಿ ಪತಿ ಹಾಗೂ ಆತನ ಕುಟುಂಬ ಸದಸ್ಯರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಈ ಮೇಲಿನಂತೆ ಸೂಚನೆ ನೀಡಿದೆ.

ಎಚ್‌ಎಸ್‌ವಿ ಎಂದರೇನು
ಎಚ್‌ಎಸ್‌ವಿ ಎಂಬುದು ಸಾಂಕ್ರಾಮಿಕ ರೋಗ. ಬಾಯಿ ಹಾಗೂ ಸ್ಪರ್ಶದಿಂದ ಹರಡುತ್ತದೆ. ಒಮ್ಮೆ ಈ ರೋಗ ಬಂದರೆ ಗುಣಮುಖವಾಗುವುದಿಲ್ಲ. ಎಚ್‌ಐವಿಗಿಂತಲೂ ಜೀವಕ್ಕೆ ಅತ್ಯಂತ ಅಪಾಯಕಾರಿ. ಅಸುರಕ್ಷಿತ ಲೈಂಗಿಕ ಸಂಪರ್ಕದಿಂದಲೂ ರೋಗ ಹರಡುತ್ತದೆ. ರೋಗಬಂದರೆ ಖಾಸಗಿ ಭಾಗಗಳಲ್ಲಿ ಅತಿಯಾದ ನೋವು ಹಾಗೂ ತುರಿಕೆ ಕಾಣಿಸಿಕೊಳ್ಳುತ್ತದೆ. ಮೈಯಲ್ಲಿ ರೋಗ ನಿರೋಧಕ ಶಕ್ತಿ ಕುಂದುತ್ತದೆ. ದೇಹ ಸದಾ ಸುಸ್ತಾಗುವ ಈ ರೋಗದ ಪ್ರಮುಖ ಗುಣಲಕ್ಷಣಗಳು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X