Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಅರ್ಹತೆ ಗಿಟ್ಟಿಸಲು ಅಂಕಿತಾ,ಕರ್ಮಾನ್...

ಅರ್ಹತೆ ಗಿಟ್ಟಿಸಲು ಅಂಕಿತಾ,ಕರ್ಮಾನ್ ಯತ್ನ

ಫೆಡ್ ಕಪ್ ಟೆನಿಸ್ ಟೂರ್ನಿ

ವಾರ್ತಾಭಾರತಿವಾರ್ತಾಭಾರತಿ5 Feb 2019 11:47 PM IST
share
ಅರ್ಹತೆ ಗಿಟ್ಟಿಸಲು ಅಂಕಿತಾ,ಕರ್ಮಾನ್ ಯತ್ನ

ಹೊಸದಿಲ್ಲಿ, ಫೆ.5: ಬುಧವಾರ ಆರಂಭವಾಗಲಿರುವ ಫೆಡ್ ಕಪ್ ಟೆನಿಸ್ ಟೂರ್ನಮೆಂಟ್‌ನ ವರ್ಲ್ಡ್ ಗ್ರೂಪ್-2ರಲ್ಲಿ ಅರ್ಹತೆ ಗಿಟ್ಟಿಸಲು ಭಾರತದ ಅಗ್ರ ಸಿಂಗಲ್ಸ್ ಆಟಗಾರ್ತಿ ಅಂಕಿತಾ ರೈನಾ ಹಾಗೂ ಕರ್ಮಾನ್ ಕೌರ್ ಥಂಡಿ ನಿರೀಕ್ಷೆಗೂ ಮೀರಿ ಪ್ರದರ್ಶನ ನೀಡುವ ವಿಶ್ವಾಸದಲ್ಲಿದ್ದಾರೆ.

‘ಎ’ ಗುಂಪಿನಲ್ಲಿರುವ ಭಾರತ ಗುರುವಾರ ಥಾಯ್ಲೆಂಡ್ ವಿರುದ್ಧ ಪಂದ್ಯದಲ್ಲಿ ಹೆಚ್ಚು ಸಮಸ್ಯೆ ಎದುರಿಸುವ ಸಾಧ್ಯತೆಯಿಲ್ಲ. ಆದರೆ, ಶುಕ್ರವಾರ ಕಝಕ್‌ಸ್ತಾನದ ವಿರುದ್ಧ ಕಠಿಣ ಸವಾಲು ಎದುರಿಸಲಿದೆ.

ಆತಿಥೇಯ ಕಝಕ್‌ಸ್ತಾನದಲ್ಲಿ ಇಬ್ಬರು ಅಗ್ರ-100 ಸಿಂಗಲ್ಸ್ ಆಟಗಾರರಿದ್ದಾರೆ. ವಿಶ್ವದ ನಂ.43ನೇ ಆಟಗಾರ್ತಿ ಯುಲಿಯಾ ಪುಟಿನ್‌ಸೇವಾ ಹಾಗೂ 96ನೇ ರ್ಯಾಂಕಿನ ಝರಿನಾ ದಿಯಾಸ್ ಭಾರತದ ಆಟಗಾರ್ತಿಗೆ ಸುಲಭವಾಗಿ ಶರಣಾಗಲಾರರು.

‘ಎ’ ಹಾಗೂ ‘ಬಿ’ ಗುಂಪುಗಳಲ್ಲಿ ನಾಲ್ಕು ತಂಡಗಳಿದ್ದು, ಇದರಲ್ಲಿ ಜಯ ಸಾಧಿಸುವ ತಂಡ ವರ್ಲ್ಡ್ ಗ್ರೂಪ್-2ಕ್ಕೆ ಅರ್ಹತೆ ಪಡೆಯಲಿದೆ.

‘ಬಿ’ ಗುಂಪಿನಲ್ಲಿ ಚೀನಾ, ಕೊರಿಯಾ, ಇಂಡೋನೇಶ್ಯಾ ಹಾಗೂ ಪೆಸಿಫಿಕ್ ಒಸಿಯಾನಿಯ ತಂಡಗಳಿವೆ. ಚೀನಾ ತಂಡದಲ್ಲಿ ವಿಶ್ವದ ನಂ.40ನೇ ಆಟಗಾರ್ತಿ ಶುಐ ಝಾಂಗ್ ಹಾಗೂ ವಿಶ್ವದ ನಂ.42ನೇ ಆಟಗಾರ್ತಿ ಸೈಸೈ ಝೆಂಗ್ ಅವರಿದ್ದಾರೆ. ಕಳೆದ ವರ್ಷ ಸ್ವದೇಶದಲ್ಲಿ ಸಿಂಗಲ್ಸ್‌ನಲ್ಲಿ ಅಜೇಯ ಅಭಿಯಾನ ನಡೆಸಿದ್ದ ಅಂಕಿತಾ ಅವರು ಪುಟಿನ್‌ಸೇವಾಗೆ ಶಾಕ್ ನೀಡಿದ್ದರು. ಆದರೆ, ಈ ಬಾರಿ ಕಝಕ್‌ಸ್ತಾನ ತವರಿನಲ್ಲಿ ಫೇವರಿಟ್ ಆಗಿದೆ. ಕರ್ಮಾನ್ ಕಳೆದ ವರ್ಷ ಝರಿನಾಗೆ ಸೋತಿದ್ದರು. ಈ ಬಾರಿ ಉತ್ತಮ ಪ್ರದರ್ಶನದ ನಿರೀಕ್ಷೆಯಲ್ಲಿದ್ದಾರೆ.

ಅಂಕಿತಾ ಮೆಲ್ಬೋರ್ನ್‌ನಲ್ಲಿ ಗ್ರಾಂಡ್‌ಸ್ಲಾಮ್ ಅರ್ಹತಾ ಪಂದ್ಯವನ್ನು ಆಡಿದ ಬಳಿಕ ಇತ್ತೀಚೆಗೆ ಸಿಂಗಾಪುರದಲ್ಲಿ ಪ್ರಶಸ್ತಿ ಜಯಿಸಿದ್ದರು. ಇದೀಗ ಅವರು ಜೀವನಶ್ರೇಷ್ಠ 165ನೇ ರ್ಯಾಂಕಿನಲ್ಲಿದ್ದಾರೆ. ಪ್ರಾರ್ಥನಾ ಥಾಂಬರೆ ಭಾರತೀಯ ತಂಡದಲ್ಲಿರುವ ಏಕೈಕ ಡಬಲ್ಸ್ ಸ್ಪೆಷಲಿಸ್ಟ್. ಈ ತಂಡದಲ್ಲಿ ಎರಡು ಬಾರಿಯ ನ್ಯಾಶನಲ್ ಚಾಂಪಿಯನ್ ಮಹಾಕ್ ಜೈನ್ ಹಾಗೂ ಮಾಜಿ ಚಾಂಪಿಯನ್ ರಿಯಾ ಭಾಟಿಯಾ ಅವರಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X