Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: 12ರಂದು ನಾಟಕ ಅಕಾಡೆಮಿ ಪ್ರಶಸ್ತಿ...

ಉಡುಪಿ: 12ರಂದು ನಾಟಕ ಅಕಾಡೆಮಿ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ6 Feb 2019 6:51 PM IST
share

ಉಡುಪಿ, ಫೆ. 6: ಕರ್ನಾಟಕ ನಾಟಕ ಅಕಾಡೆಮಿಯ 2018-19ನೇ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭ ಫೆ.12ರಂದು ನಗರದ ಅಜ್ಜರಕಾಡಿನಲ್ಲಿರುವ ಪುರಭವನದಲ್ಲಿ ಸಂಜೆ 4:30ಕ್ಕೆ ನಡೆಯಲಿದೆ ಎಂದು ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷ ಜೆ.ಲೋಕೇಶ್ ತಿಳಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾರಂಭದಲ್ಲಿ ಅಕಾಡೆಮಿ ಈಗಾಗಲೇ ಪ್ರಕಟಿಸಿದ ವಿವಿಧ ಪ್ರಶಸ್ತಿಗಳನ್ನು ವಿತರಿಸಲಾಗುವುದು. ಅಲ್ಲದೇ ಪದ್ಮಾ ಕೊಡಗು ಅವರ ‘ಉಡುಪಿ ಜಿಲ್ಲಾ ರಂಗಮಾಹಿತಿ’ ಹಾಗೂ ಬಸವರಾಜ ಬೆಂಗೇರಿ ಅವರ ‘ಅವಿಭಜಿತ ಧಾರವಾಡ ಜಿಲ್ಲಾ ರಂಗಮಾಹಿತಿ’ ಕೃತಿಗಳೊಂದಿಗೆ ಅಕಾಡೆಮಿ ಸದಸ್ಯ ಗಣೇಶ ಅಮೀನಗಡ ಅವರ ‘ರಹಿಮಾನವ್ವ ಕಲ್ಮನಿ’ ಕೃತಿಯ ಬಿಡುಗಡೆ ನಡೆಯಲಿದೆ ಎಂದರು.

ಕಾರ್ಯಕ್ರಮವನ್ನು ಖ್ಯಾತ ಲೇಖಕ, ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ಉದ್ಘಾಟಿಸಲಿದ್ದು, ನಾಡಿನ ಖ್ಯಾತ ರಂಗಕರ್ಮಿ ಹಾಗೂ ಚಲನಚಿತ್ರ ನಿರ್ದೇಶಕ ಎಂ.ಎಸ್.ಸತ್ಯು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿಕಟಪೂರ್ವ ನಿರ್ದೇಶಕ ಎನ್.ಆರ್.ವಿಶುಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

ಈ ಬಾರಿ ಪಿ.ಗಂಗಾಧರ ಸ್ವಾಮಿ ಅವರು ಅಕಾಡೆಮಿಯ ಗೌರವ ಪ್ರಶಸ್ತಿಗೆ ಭಾಜನರಾಗಿದ್ದು, ಪ್ರಶಸ್ತಿಯೊಂದಿಗೆ 50,000ರೂ.ನಗದುಬಹುಮಾನ ಪಡೆಯಲಿದ್ದಾರೆ. ನಾಡಿನ ಒಟ್ಟು 25 ಮಂದಿ ಕಲಾವಿದರು, ರಂಗಕರ್ಮಿಗಳು ವಾರ್ಷಿಕ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಇವರು ತಲಾ 25,000ರೂ. ನಗದು ಬಹುಮಾನದೊಂದಿಗೆ ಪ್ರಶಸ್ತಿ ಫಲಕ ಪಡೆಯಲಿದ್ದಾರೆ ಎಂದರು.

ರಾಜಪ್ಪ ಕಿರಗಸೂರು, ಬಸಪ್ಪ ಶರಣಪ್ಪ ಮದರಿ, ಹುವಿವಾನ ಗಂಗಾಧರಯ್ಯ, ಹನುಮಂತಪ್ಪ ವೆ.ಬಾಗಲಕೋಟೆ, ಅಂಜಿನಪ್ಪ, ಸಾವಿತ್ರಿ ನಾರಾಯಣಪ್ಪ ಗೌಡರ, ಜಕಾವುಲ್ಲಾ ಗಂಡಸಿ, ಖಾಜೇಸಾಬ ನಬೀಸಾಬ ಜಂಗಿ, ಮೈಮ್ ರಮೇಶ್, ಕೆಂಚೇಗೌಡ ಟಿ., ಪಿ.ಪ್ರಭಾಕರ ಕಲ್ಯಾಣಿ, ಚಿಂದೋಡಿ ಎಲ್. ಚಂದ್ರಧರ, ಡಿ.ಎಂ.ರಾಜಕುಮಾರ್, ಡಿ.ಎಲ್.ನಂಜುಂಡಸ್ವಾಮಿ,ಈಶ್ವರ ದಲ, ಮೋಹನ್ ಮಾರ್ನಾಡು, ಉಷಾ ಭಂಡಾರಿ, ಪ್ರಭಾಕರ ಜೋಶಿ, ಎಸ್. ಅಂಜೀನಮ್ಮ, ಡಾ.ಕೆ.ವೈ.ನಾರಾಯಣಸ್ವಾಮಿ, ಜಗದೀಶ್ ಕೆಂಗನಾಳ್, ಉಗಮ ಶ್ರೀನಿವಾಸ, ವಿಜಯಾನಂದ ಕರಡಿಗುಡ್ಡ, ಮಕಬೂಲ ಹುಣಸಿಕಟ್ಟಿ, ಎಂ.ರವಿ ಈ ಬಾರಿಯ ವಾರ್ಷಿಕ ಪ್ರಶಸ್ತಿಗೆ ಆಯ್ಕೆಯಾದ ರಂಗಕಲಾವಿದರು, ರಂಗಕರ್ಮಿ ಗಳಾಗಿದ್ದಾರೆ.

ಸಿರಿಗೇರಿ ಯರಿಸ್ವಾಮಿ ಅವರ ‘ರಂಗಸಂಭ್ರಮ’ 2017ರ ಸಾಲಿನ ಪುಸ್ತಕ ಬಹುಮಾನ ಪ್ರಶಸ್ತಿಗೆ ಆಯ್ಕೆಯಾಗಿದ್ದು, 25,000ರೂ.ಗಳನಗದು ಬಹುಮಾನ ಪಡೆಯಲಿದೆ. ಮೃತ್ಯುಂಜಯ ಸ್ವಾಮಿ ಹಿರೇಮಠ, ನಿಕೋಲಸ್, ಎಂ.ಎಸ್. ಮಾಳವಾಡ ಹಾಗೂ ನ.ಲಿ.ನಾಗರಾಜ್ ಇವರು ವಿವಿಧ ದತ್ತಿ ಪುರಸ್ಕಾರಗಳಿಗೆ ಆಯ್ಕೆಯಾಗಿದ್ದು, ಇವರಿಗೆ ತಲಾ 5,000ರೂ.ಗಳ ನಗದು ಬಹುಮಾನ ನೀಡ ಲಾಗುವುದು ಎಂದು ಲೋಕೇಶ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭದ ಸಂಚಾಲಕ ಹಾಗೂ ಅಕಾಡೆಮಿ ಸದಸ್ಯ ಬಾಸುಮಾ ಕೊಡಗು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X