Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಾಹಿತ್ಯ ಕ್ಷೇತ್ರದಲ್ಲಿ ಶುದ್ಧ-ಅಶುದ್ಧ...

ಸಾಹಿತ್ಯ ಕ್ಷೇತ್ರದಲ್ಲಿ ಶುದ್ಧ-ಅಶುದ್ಧ ಎಂಬುದು ಇಲ್ಲ: ಪ್ರೊ.ಬರಗೂರು ರಾಮಚಂದ್ರಪ್ಪ

ವಾರ್ತಾಭಾರತಿವಾರ್ತಾಭಾರತಿ6 Feb 2019 9:58 PM IST
share
ಸಾಹಿತ್ಯ ಕ್ಷೇತ್ರದಲ್ಲಿ ಶುದ್ಧ-ಅಶುದ್ಧ ಎಂಬುದು ಇಲ್ಲ: ಪ್ರೊ.ಬರಗೂರು ರಾಮಚಂದ್ರಪ್ಪ

ಬೆಂಗಳೂರು, ಫೆ.6: ಚಳವಳಿಗಳೊಂದಿಗೆ ಸಂಬಂಧವಿರುವವರು ಶುದ್ಧ ಸಾಹಿತ್ಯ ಬರೆಯುವುದಿಲ್ಲ ಎಂಬ ವಾದವಿದೆ. ಆದರೆ, ಸಾಹಿತ್ಯ ಕ್ಷೇತ್ರದಲ್ಲಿ ಶುದ್ಧ-ಅಶುದ್ಧ ಎಂಬುದು ಯಾವುದೂ ಇಲ್ಲ ಎಂದು ಹಿರಿಯ ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ ಅಭಿಪ್ರಾಯಿಸಿದ್ದಾರೆ.

ಬುಧವಾರ ನಗರದ ಕಸಾಪದಲ್ಲಿ ಅ.ನ.ಕೃ ಕನ್ನಡ ಸಂಘ ಹಾಗೂ ಕರುನಾಡ ಸಿರಿ ಸಾಹಿತ್ಯ ವೇದಿಕೆ ವತಿಯಿಂದ ಆಯೋಜಿಸಿದ್ದ ದ್ವಾರನಕುಂಟೆ ಪಾತಣ್ಣ ಅವರ ‘ಬೇಲಿ ಮೇಲಿನ ಹೂ’ ಕಥಾ ಸಂಕಲನ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಶತಮಾನದಿಂದಲೂ ಚಳವಳಿಯೊಂದಿಗೆ ಹಲವಾರು ಸಾಹಿತಿಗಳ ಸಂಬಂಧವಿದೆ. ವಚನಕಾರರಿಂದ ಹಿಡಿದು ಮನುಷ್ಯ ಜಾತಿ ತಾನೊಂದೆ ವಲಂ ಎಂದ ರಾಷ್ಟ್ರಕವಿ ಕುವೆಂಪು, ದಾ.ರಾ.ಬೇಂದ್ರೆ ಸೇರಿದಂತೆ ಅನೇಕರು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಚಳವಳಿಯೊಂದಿಗೆ ಸಂಪರ್ಕವನ್ನಿಟ್ಟುಕೊಂಡವರಾಗಿದ್ದಾರೆ ಎಂದು ಅವರು ತಿಳಿಸಿದರು.

ಚಳವಳಿಯ ಜತೆಗೆ ಇರುವವರು ಸೃಜನಶೀಲತೆಗೆ ವಿರುದ್ಧವಾಗಿ ಬರೆಯುತ್ತಾರೆ ಎಂಬುದು ಶುದ್ಧ ಸುಳ್ಳು. ಆದರೆ, ಚಳುವಳಿಗಾರರಿಗೆ ಒಂದು ನೈತಿಕತೆ ಬೇಕು, ಸೈದ್ಧಾಂತಿಕ ಬದ್ಧತೆ ಬೇಕು. ಜನರು ಸಿದ್ಧಾಂತವನ್ನು ನಿರೀಕ್ಷೆ ಮಾಡುತ್ತಾರೆ. ಅದರ ಜತೆಗೆ ನೈತಿಕತೆಯನ್ನೂ ನಿರೀಕ್ಷೆ ಮಾಡುತ್ತಾರೆ. ಹೀಗಾಗಿ, ಚಳವಳಿಗಾರರಿಗೆ ಬರೆಯುವ, ಮಾತಿನಲ್ಲಿರುವ ಬದ್ಧತೆ ಬದುಕಿನಲ್ಲಿಯೂ ಇರಬೇಕು ಎಂದ ಅವರು, ಅಕ್ಷರ ವರ್ಗ ಚಳವಳಿಯೊಂದಿಗೆ ಸಂಪರ್ಕವಿದ್ದರೆ ದೊಡ್ಡ ಸಾಹಿತಿಯಾಗುತ್ತಾರೆ ಎಂದರು.

ಲೇಖಕ ಪಾತಣ್ಣ ತಮ್ಮ ಕೃತಿಯಲ್ಲಿ ಗ್ರಾಮೀಣ ಬದುಕಿನ ಸಮೃದ್ಧಿಯನ್ನು ಹಿಡಿದಿಟ್ಟಿದ್ದಾರೆ. ಒಂದು ಪರಂಪರೆಯನ್ನು ಕಟ್ಟಿಕೊಟ್ಟಿದ್ದಾರೆ. ಗ್ರಾಮೀಣ ಪರಿಸರಕ್ಕೆ ಸಂಬಂಧಿಸಿದಂತೆ ಬರೆದಿದ್ದಾರೆ ಎಂದ ಅವರು, ಗ್ರಾಮೀಣ ಬದುಕಿನ ಬಗೆಗೆ ಹಲವಾರು ಜನ ಬರೆದಿದ್ದಾರೆ. ಆರಂಭದ ದಿನಗಳಲ್ಲಿ ಬಂದಂತಹ ಕೃತಿಗಳನ್ನು ನೋಡಿದರೆ ಈ ಕೃತಿಯಲ್ಲಿರುವ ವಿಷಯ ನೈಜ ವಸ್ತು, ಹೆಗ್ಗಳಿಕೆಯ ಚಿತ್ರಣವಿದೆ ಎಂದು ಬಣ್ಣಿಸಿದರು.

ಕರ್ನಾಟಕದಲ್ಲಿ ನಡೆದ ಚಳವಳಿಯ ಕಥಾನಕನಗಳೇ ಈ ಕೃತಿಯಲ್ಲಿವೆ ಅನ್ನಿಸುತ್ತದೆ. ಮಹಿಳೆಯರು, ವಿದ್ಯಾರ್ಥಿ-ಯುವಜನರು, ರೈತರು, ಮಕ್ಕಳ ಮೇಲಿನ ದೌರ್ಜನ್ಯ, ದಬ್ಬಾಳಿಕೆ, ಸಂಕಷ್ಟಗಳ ಕುರಿತು ಬರೆಯುತ್ತೇವೆ ಎಂದರೆ ಅದಕ್ಕೆ ಚಳವಳಿಯೇ ಕಾರಣವಾಗಿದೆ. ಈ ನಿಟ್ಟಿನಲ್ಲಿ ಗ್ರಾಮೀಣ ಲೋಕದ ಅನುಭವವನ್ನು ಪ್ರಗತಿಪರವಾಗಿ, ಚಲನಶೀಲವಾಗಿ ಕಟ್ಟಿಕೊಡುವ ಮೂಲಕ ಚಳವಳಿಯು ನಿರಂತರವಾಗಿ ಇರುತ್ತದೆ ಎಂಬುದನ್ನು ಕಟ್ಟಿಕೊಟ್ಟಿದ್ದಾರೆ ಎಂದು ಬರಗೂರು ನುಡಿದರು.

ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಪ್ರೊ.ಚಂದ್ರಶೇಖರ ಪಾಟೀಲ, ಹಿರಿಯ ಪತ್ರಕರ್ತ ಜಾಣಗೆರೆ ವೆಂಕಟರಾಮಯ್ಯ, ಲೇಖಕ ದ್ವಾರನಕುಂಟೆ ಪಾತಣ್ಣ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X