Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೂರನೇ ದಿನವೂ ರಾಜ್ಯಸಭಾ ಕಲಾಪಗಳು...

ಮೂರನೇ ದಿನವೂ ರಾಜ್ಯಸಭಾ ಕಲಾಪಗಳು ಸಂಪೂರ್ಣ ವ್ಯರ್ಥ

ವಾರ್ತಾಭಾರತಿವಾರ್ತಾಭಾರತಿ6 Feb 2019 10:16 PM IST
share
ಮೂರನೇ ದಿನವೂ ರಾಜ್ಯಸಭಾ ಕಲಾಪಗಳು ಸಂಪೂರ್ಣ ವ್ಯರ್ಥ

ಹೊಸದಿಲ್ಲಿ,ಫೆ.6: ಪೌರತ್ವ(ತಿದ್ದುಪಡಿ) ಮಸೂದೆ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಮೀಸಲಾತಿಗಾಗಿ ರೋಸ್ಟರ್ ಪದ್ಧತಿ ಸೇರಿದಂತೆ ವಿವಿಧ ವಿಷಯಗಳಿಗೆ ಸಂಬಂಧಿಸಿ ಪ್ರತಿಭಟನೆಗಳಿಂದಾಗಿ ಸತತ ಮೂರನೇ ದಿನವಾದ ಬುಧವಾರವೂ ರಾಜ್ಯಸಭೆಯ ಕಲಾಪಗಳು ಸಂಪೂರ್ಣ ವ್ಯರ್ಥಗೊಂಡವು.

ಬೆಳಿಗ್ಗೆ ಸದನ ಆರಂಭಗೊಂಡ ಬೆನ್ನಿಗೇ ಪೌರತ್ವ(ತಿದ್ದುಪಡಿ) ಮಸೂದೆ ಸೇರಿದಂತೆ ವಿವಿಧ ವಿಷಯಗಳ ವಿರುದ್ಧ ಪ್ರತಿಭಟನೆ ನಡೆಸಲು ಪ್ರತಿಪಕ್ಷ ಸದಸ್ಯರು ಪ್ರಯತ್ನಿಸಿದಾಗ ಸಭಾಪತಿ ಎಂ.ವೆಂಕಯ್ಯ ನಾಯ್ಡು ಅವರು ಸದನವನ್ನು ಅಪರಾಹ್ನ ಎರಡು ಗಂಟೆಯವರೆಗೆ ಮುಂದೂಡಿದರು. ಸದನವು ಮರುಸಮಾವೇಶಗೊಂಡಾಗ ಆರ್‌ ಜೆಡಿ,ಎಸ್‌ಪಿ,ಬಿಎಸ್‌ ಪಿ ಮತ್ತು ಟಿಎಂಸಿ ಸದಸ್ಯರು ಮುಖ್ಯವಾಗಿ ಶಿಕ್ಷಣ ಸಂಸ್ಥೆಗಳಲ್ಲಿ ರೋಸ್ಟರ್ ಪದ್ಧತಿಯ ಜಾರಿ ಸೇರಿದಂತೆ ವಿವಿಧ ವಿಷಯಗಳನ್ನು ಪ್ರತಿಭಟಿಸಿ ಸದನದ ಅಂಗಳಕ್ಕೆ ಲಗ್ಗೆ ಹಾಕಿದರು. ಕಾಂಗ್ರೆಸ್ ಸದಸ್ಯರೂ ತಮ್ಮ ಪ್ರತಿಭಟನೆಯನ್ನು ದಾಖಲಿಸಲು ಆಸನಗಳಿಂದ ಎದ್ದು ನಿಂತಿದ್ದರು. ರೋಸ್ಟರ್ ಪದ್ಧತಿಯಿಂದ ಉದ್ಯೋಗ ಮೀಸಲಾತಿಯು ಸೀಮಿತಗೊಳ್ಳುತ್ತದೆ ಎನ್ನುವುದು ಈ ಸದಸ್ಯರ ವಾದವಾಗಿತ್ತು.

ಉಪಸಭಾಪತಿ ಹರಿವಂಶ ನಾರಾಯಣ ಸಿಂಗ್ ಅವರು ತಮ್ಮ ಆಸನಗಳಿಗೆ ಮರಳುವಂತೆ ಪ್ರತಿಭಟನಾನಿರತರಿಗೆ ಸೂಚಿಸಿದರಾದರೂ ಪಟ್ಟುಬಿಡದ ಸದಸ್ಯರು ಸರಕಾರ ವಿರೋಧಿ ಘೋಷಣೆಗಳನ್ನು ಕೂಗುವುದನ್ನು ಮುಂದುವರಿಸಿದರು. ರೋಸ್ಟರ್ ಪದ್ಧತಿಯ ವಿರುದ್ಧ ಭಿತ್ತಿಪತ್ರಗಳನ್ನೂ ಪ್ರತಿಪಕ್ಷ ಸದಸ್ಯರು ಪ್ರದರ್ಶಿಸಿದರು.

ಶೂನ್ಯವೇಳೆಯಲ್ಲಿ ಈ ಬಗ್ಗೆ ಮಾತನಾಡಲು ಅವಕಾಶ ನೀಡುವುದಾಗಿ ಎಸ್‌ಪಿ ನಾಯಕ ರಾಮಗೋಪಾಲ ಯಾದವ್ ಅವರಿಗೆ ತಿಳಿಸಿದ ಸಿಂಗ್, ಪ್ರತಿಭಟನೆಗಳನ್ನು ಅಂತ್ಯಗೊಳಿಸುವಂತೆ ಕೋರಿದರು.

ಸರಕಾರವು ಈ ವಿಷಯದಲ್ಲಿ ಸದನದಲ್ಲಿ ನೀಡಿದ್ದ ಭರವಸೆಗಳಿಂದ ವಿಮುಖವಾಗಿದೆ ಎಂದು ಯಾದವ್ ಹೇಳಿದರು. ತನ್ಮಧ್ಯೆ ಸಂಸದೀಯ ವ್ಯವಹಾರಗಳ ಸಚಿವ ವಿಜಯ ಗೋಯೆಲ್ ಅವರು ಯಾದವರನ್ನು ಸಮಾಧಾನಿಸಲು ಪ್ರಯತ್ನಿದರಾದರೂ ಪ್ರತಿಭಟನೆಗಳು ನಿಲ್ಲಲಿಲ್ಲ.

ರೋಸ್ಟರ್ ಪದ್ಧತಿಯ ಬಗ್ಗೆ ಸರಕಾರವು ಪರಿಶೀಲನೆ ನಡೆಸುತ್ತಿದೆ ಮತ್ತು ಸರ್ವೋಚ್ಚ ನ್ಯಾಯಾಲಯಕ್ಕೆ ಸಲ್ಲಿಸಲು ವಿಶೇಷ ರಜಾಕಾಲ ಅರ್ಜಿ ಮತ್ತು ಪುನರ್‌ಪರಿಶೀಲನೆ ಅರ್ಜಿಗಳನ್ನು ಸಿದ್ಧಗೊಳಿಸುತ್ತಿದೆ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ ಜಾವಡೇಕರ್ ತಿಳಿಸಿದರು.

ಪ್ರತಿಪಕ್ಷ ಸದಸ್ಯರು ಪ್ರತಿಭಟನೆಗಳನ್ನು ಮತ್ತು ಘೋಷಣೆಗಳನ್ನು ಕೂಗುವುದನ್ನು ಮುಂದುವರಿಸಿದಾಗ ಉಪಸಭಾಪತಿಗಳು ದಿನದ ಮಟ್ಟಿಗೆ ಸದನವನ್ನು ಮುಂದೂಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X