Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮದುಮಗಳ ಸೌಂದರ್ಯ ಅನಾವರಣಗೊಳಿಸಿದ ‘ದೇಶೀ...

ಮದುಮಗಳ ಸೌಂದರ್ಯ ಅನಾವರಣಗೊಳಿಸಿದ ‘ದೇಶೀ ದುಲ್ಹನ್ ಫ್ಯಾಶನ್ ಶೋ’

ವಾರ್ತಾಭಾರತಿವಾರ್ತಾಭಾರತಿ6 Feb 2019 10:35 PM IST
share
ಮದುಮಗಳ ಸೌಂದರ್ಯ ಅನಾವರಣಗೊಳಿಸಿದ ‘ದೇಶೀ ದುಲ್ಹನ್ ಫ್ಯಾಶನ್ ಶೋ’

ಮಂಗಳೂರು, ಫೆ.6: ಲಯನ್ಸ್ ಕ್ಲಬ್ ಹಾಗೂ ಚೇತನಾ ಬ್ಯೂಟಿ ಅಕಾಡೆಮಿ ಆಶ್ರಯದಲ್ಲಿ ಮಂಗಳವಾರ ಲಯನ್ಸ್ ಸೇವಾ ಮಂದಿರದಲ್ಲಿ ನಡೆದ ‘ದೇಶೀ ದುಲ್ಹನ್ ಫ್ಯಾಶನ್ ಶೋ’ ದೇಶೀಯ ವಧುವಿನ ಅಲಂಕಾರವನ್ನು ಪ್ರದರ್ಶನಕ್ಕೆ ವೇದಿಕೆಯಾಯಿತು.

ಉತ್ತರ ಹಾಗೂ ದಕ್ಷಿಣ ಭಾರತದ ವಿವಿಧ ರಾಜ್ಯಗಳಲ್ಲಿನ ಸಾಂಪ್ರದಾಯಿಕ ವಿವಾಹಗಳ ಸಂದರ್ಭದಲ್ಲಿ ವಧುವಿನ ಅಲಂಕಾರವನ್ನು ರೂಪದರ್ಶಿಯರು ರ್ಯಾಂಪ್ ಮೇಲೆ ಪ್ರದರ್ಶಿಸುವ ಮೂಲಕ ಮಂಗಳೂರಿನಲ್ಲಿ ಫ್ಯಾಶನ್ ಲೋಕದಲ್ಲಿ ಹೊ ಅಧ್ಯಾಯಕ್ಕೆ ಮುನ್ನುಡಿ ಬರೆದರು.

ಫ್ಯಾಶನ್ ಶೋ ಎಂದಾಕ್ಷಣ ಕೇವಲ ಪಾಶ್ಚಾತ್ಯ ಸಂಸ್ಕೃತಿಯನ್ನಷ್ಟೇ ಬಿಂಬಿಸುವುದಲ್ಲ. ಬದಲಾಗಿ ನಮ್ಮ ಸಾಂಪ್ರದಾಯಿಕ ವಿವಾಹಗಳಲ್ಲಿ ಅಲಂಕರಿಸಲಾ ಗುವ ವಧುವಿನ ಸೌಂದರ್ಯವನ್ನೂ ರ್ಯಾಂಪ್ ಮೇಲೆ ತೆರೆದಿಡಬಹುದು. ಈ ಮೂಲಕ ಇಂದಿನ ಪೀಳಿಗೆಗೆ ಸಾಂಪ್ರದಾಯಿಕ ವಿವಾಹಗಳಲ್ಲಿನ ಅಲಂಕಾರ ಗಳನ್ನು ಪರಿಚಯಿಸಲು ಸಾಧ್ಯ ಎಂಬುದನ್ನು ಈ ಫ್ಯಾಶನ್ ಶೋ ಸಾಬೀತುಪಡಿಸಿತು.

ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಈ ವಿಭಿನ್ನ ಹಾಗೂ ವಿನೂತನ ಪ್ರಯೋಗವನ್ನು ಲಯನ್ಸ್ ಕ್ಲಬ್ ಸಹಭಾಗಿತ್ವದಲ್ಲಿ ನಗರದ ಚೇತನಾ ಬ್ಯೂಟಿ ಅಕಾಡೆಮಿ ಮೂಲಕ ಮಾಡಲಾಗಿತ್ತು. ಅಕಾಡೆಮಿಯ ಮುಖ್ಯಸ್ಥರಾದ ಚೇತನಾ ಅವರು ತಮ್ಮ ಹಳೆ ವಿದ್ಯಾರ್ಥಿಗಳು ಹಾಗೂ ಪ್ರಸಕ್ತ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳನ್ನೇ ರೂಪದರ್ಶಿಗಳನ್ನಾಗಿ ಅವರ ಮೂಲಕ ಉತ್ತರ ಹಾಗೂ ದಕ್ಷಿಣ ಭಾರತದ ಕೆಲ ರಾಜ್ಯಗಳ ವಿಭಿನ್ನ ಶೈಲಿಯ ವಧುವಿನ ಶೃಂಗಾರವನ್ನು ರ್ಯಾಂಪ್ ಮೂಲಕ ಅನಾವರಣಗೊಳಿಸಿದರು.

ವಿವಾಹ, ನಿಶ್ಚಿತಾರ್ಥ, ಔತಣಕೂಟ ಮೊದಲಾದ ವಿವಾಹ ಸಂಬಂಧಿ ಕಾರ್ಯಕ್ರಮಗಳಲ್ಲಿ ಮಧುವಣಗಿತ್ತಿಯರ ಸಾಂಪ್ರದಾಯಿಕ ಅಲಂಕಾರಗಳು ವಿಶೇಷವಾಗಿ ಬಹುತೇಕ ಅಲಂಕಾರಗಳು ಭಾರತೀಯ ಸಾಂಪ್ರದಾಯಿಕ ಉಡುಗೆಯಾದ ಸೀರೆಯಿಂದ ಅಲಂಕೃತವಾಗಿದ್ದು ಈ ಫ್ಯಾಶನ್ ಶೋನ ವಿಶೇಷತೆ.

ಮಂಗಳೂರಿನ ಕೊಂಕಣಿ, ಕ್ರೈಸ್ತ, ಮುಸ್ಲಿಂ ಸಮುದಾಯದ ವಧುವಿನ ಶೃಂಗಾರದೊಂದಿಗೆ ಮರಾಠಿ, ಬಂಗಾಲಿ, ಹಾಗೂ ಉತ್ತರ ಭಾರತ ರಾಜ್ಯಗಳಲ್ಲಿನ ವಿಶೇಷ ವಧುವಿನ ಅಲಂಕಾರಗಳನ್ನು ರೂಪದರ್ಶಿಯರು ರ್ಯಾಂಪ್ ಮೇಲೆ ಹೆಜ್ಜೆ ಹಾಕಿ ಪ್ರದರ್ಶಿಸಿದರು. 15 ಮಂದಿ ರೂಪದರ್ಶಿಯರು ಭಾಗವಹಿಸಿದ್ದ ಈ ಫ್ಯಾಶನ್ ಶೋನಲ್ಲಿ ನವರಾತ್ರಿಯಲ್ಲಿ ಶಾರದಾ ಮಾತೆಯ ವಿಶೇಷ ಅಲಂಕಾರ ವೀಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X