Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಝಫ್ಫರ್‌ನಗರ ದಂಗೆ: ಇಬ್ಬರು ಯುವಕರ...

ಮುಝಫ್ಫರ್‌ನಗರ ದಂಗೆ: ಇಬ್ಬರು ಯುವಕರ ಹತ್ಯೆ ಪ್ರಕರಣದಲ್ಲಿ 7 ಮಂದಿ ತಪ್ಪಿತಸ್ಥರು

ವಾರ್ತಾಭಾರತಿವಾರ್ತಾಭಾರತಿ6 Feb 2019 10:51 PM IST
share
ಮುಝಫ್ಫರ್‌ನಗರ ದಂಗೆ: ಇಬ್ಬರು ಯುವಕರ ಹತ್ಯೆ ಪ್ರಕರಣದಲ್ಲಿ 7 ಮಂದಿ ತಪ್ಪಿತಸ್ಥರು

ಮುಝಫ್ಫರ್‌ನಗರ,ಫೆ.6: ಉತ್ತರ ಪ್ರದೇಶದಲ್ಲಿ 60 ಜನರ ಹತ್ಯೆಗೆ ಕಾರಣವಾದ 2013ರ ಮುಝಫ್ಫರ್ ನಗರ ದಂಗೆಯ ಕಿಡಿ ಹೊತ್ತಿಸಿದ್ದ ಇಬ್ಬರು ಯುವಕರ ಹತ್ಯೆಯ ಏಳು ಆರೋಪಿಗಳನ್ನು ಬುಧವಾರ ಸ್ಥಳೀಯ ನ್ಯಾಯಾಲಯ ತಪ್ಪಿತಸ್ಥರೆಂದು ತೀರ್ಪು ನೀಡಿದೆ.

2013ರ ಆಗಸ್ಟ್ 27ರಂದು ಮುಝಫ್ಫರ್ ನಗರದ ಕವಲ್ ಗ್ರಾಮದಲ್ಲಿ ಗೌರವ್ ಮತ್ತು ಸಚಿನ್ ಎಂಬ ಇಬ್ಬರು ಯುವಕರನ್ನು ಹತ್ಯೆ ಮಾಡಿದ ಆರೋಪದಲ್ಲಿ ಮುಝಮ್ಮಿಲ್, ಮುಜಸ್ಸಿಮ್, ಫುರ್ಖಾನ್,ನದೀಮ್,ಜನಂಗೀರ್, ಅಫ್ಝಲ್ ಮತ್ತು ಇಕ್ಬಾಲ್‌ರನ್ನು ತಪ್ಪಿತಸ್ಥರು ಎಂದು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಿಮಾಂಶು ಭಟ್ನಗರ್ ತೀರ್ಪು ನೀಡಿದ್ದಾರೆ. ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯ ಶುಕ್ರವಾರ ಘೋಷಿಸಲಿದೆ. ಪೊಲೀಸರು ದಾಖಲಿಸಿರುವ ಎಫ್‌ಐಅರ್ ಪ್ರಕಾರ, ಕವಲ್ ಗ್ರಾಮದ ಇಬ್ಬರು ಯುವಕರನ್ನು ಐದು ಜನರ ಗುಂಪು ಥಳಿಸಿ ಹತ್ಯೆ ಮಾಡಿತ್ತು.

ನಂತರ ವಿಚಾರಣೆಯ ವೇಳೆ ಹತ್ಯೆಯಲ್ಲಿ ಭಾಗಿಯಾಗಿರುವ ಬಗ್ಗೆ ಸಾಕ್ಷಿಗಳು ಲಭ್ಯವಾದ ಹಿನ್ನೆಲೆಯಲ್ಲಿ ಅಪ್ಝಲ್ ಮತ್ತು ಇಕ್ಬಾಲ್ ಹೆಸರನ್ನು ಎಫ್‌ಐಆರ್‌ನಲ್ಲಿ ಸೇರಿಸಲಾಯಿತು. ಸರಕಾರಿ ಅಭಿಯೋಜಕರು ನೀಡಿರುವ ಅಧಿಕೃತ ಅಂಕಿಅಂಶಗಳ ಪ್ರಕಾರ, 2013ರ ಮುಝಫ್ಫರ್ ನಗರ ದಂಗೆಯ ಹಿನ್ನೆಲೆಯಲ್ಲಿ 6,000 ಪ್ರಕರಣಗಳನ್ನು ದಾಖಲಿಸಲಾಗಿತ್ತು. ಈ ದಂಗೆಗಳಲ್ಲಿ ಆರೋಪಿಗಳೆಂದು 1,480 ಮಂದಿಯನ್ನು ಬಂಧಿಸಲಾಗಿತ್ತು. ಈ ಪ್ರಕರಣಗಳ ತನಿಖೆ ನಡೆಸಿದ ವಿಶೇಷ ತನಿಖಾ ತಂಡ 175 ಪ್ರಕರಣಗಳಲ್ಲಿ ದೋಷಾರೋಪ ಸಲ್ಲಿಸಿತ್ತು. 430 ಆರೋಪಿಗಳನ್ನೊಳಗೊಂಡ 56 ಪ್ರಕರಣಗಳಲ್ಲಿ ಖುಲಾಸೆಗೊಳಿಸಲಾಗಿದ್ದರೆ ಕೆಲವೊಂದು ಪ್ರಕರಣಗಳನ್ನು ಸರಕಾರ ಹಿಂಪಡೆದುಕೊಂಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X