ಅರಣ್ಯ ಇಲಾಖೆ ಬೋನಿಗೆ ಬಿದ್ದ ಚಿರತೆ

ಹಾಸನ,ಫೆ.6: ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿರುವ ಘಟನೆ ನಗರ ಹೊರ ವಲಯದ ದೊಡ್ಡಕೊಂಡಗೊಳ ಗ್ರಾಮದಲ್ಲಿ ನಡೆದಿದೆ.
ಈ ಚಿರತೆಯು ಗ್ರಾಮದ ಸುತ್ತಲು ಹಲವು ತಿಂಗಳಿಂದ ಉಪಟಳ ನೀಡುತ್ತಿತ್ತು. ಅಲ್ಲದೆ, ಹಲವು ಕರು ಮತ್ತು ನಾಯಿಗಳನ್ನು ಹೊತ್ತೊಯ್ದಿದ್ದಿತ್ತು.
ಚಿರತೆ ಸೆರೆಯಾಗಿರುವುದರಿಂದ ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ. ಚಿರತೆಯನ್ನು ಮತ್ತೊಂದು ಕಾಡಿಗೆ ಸ್ಥಳಾಂತರಿಸಲು ಅರಣ್ಯ ಇಲಾಖೆ ಸಿಬ್ಬಂದಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮನವಿ ಸಲ್ಲಿಸಿದ್ದರು. ಅದರಂತೆ ಚಿರತೆ ಹಿಡಿಯಲು ಗ್ರಾಮದ ಹೊಲ ದಲ್ಲಿ ಬೋನನ್ನು ಇಡಲಾಗಿತ್ತು. ನಗರದ ಪಕ್ಕದಲ್ಲೇ ಚಿರತೆ ಹಾವಳಿ ಹೆಚ್ಚಿರುವುದರಿಂದ ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿ ಅರಣ್ಯ ಇಲಾಖೆ ಚಿರತೆಗಳನ್ನು ಇಲ್ಲಿಂದ ಸ್ಥಳಾಂತರ ಮಾಡುವಂತೆ ಒತ್ತಾಯ ಮಾಡಿದ್ದರು.
Next Story





