Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ತನ್ನ ಪುತ್ರಿ ನಿಕಾಬ್ ಧರಿಸಿದ್ದಕ್ಕೆ ಬಂದ...

ತನ್ನ ಪುತ್ರಿ ನಿಕಾಬ್ ಧರಿಸಿದ್ದಕ್ಕೆ ಬಂದ ಟೀಕೆಗೆ ಎ.ಆರ್. ರಹಮಾನ್ ಪ್ರತಿಕ್ರಿಯೆ ಏನು ಗೊತ್ತೇ?

ವಾರ್ತಾಭಾರತಿವಾರ್ತಾಭಾರತಿ7 Feb 2019 5:33 PM IST
share
ತನ್ನ ಪುತ್ರಿ ನಿಕಾಬ್ ಧರಿಸಿದ್ದಕ್ಕೆ ಬಂದ ಟೀಕೆಗೆ ಎ.ಆರ್. ರಹಮಾನ್ ಪ್ರತಿಕ್ರಿಯೆ ಏನು ಗೊತ್ತೇ?

ಹೊಸದಿಲ್ಲಿ, ಫೆ.7: ‘ಸ್ಲಮ್ ಡಾಗ್ ಮಿಲಿಯನೇರ್’ ಚಿತ್ರದ 10ನೆ ವರ್ಷಾಚರಣೆ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪ್ರಸಿದ್ಧ ಸಂಗೀತ ನಿರ್ದೇಶಕ ಎ.ಆರ್. ರಹಮಾನ್ ರ ಪುತ್ರಿ  ಖತೀಜಾ ನಿಕಾಬ್ ಧರಿಸಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಖತೀಜಾ ವೇದಿಕೆಯಲ್ಲಿ ರಹಮಾನ್ ರಿಗೆ ಕೆಲ ಪ್ರಶ್ನೆಗಳನ್ನು ಕೇಳಿದ್ದರು.

ಆದರೆ ಟೀಕಾಕಾರರು ನಿಕಾಬ್ ವಿಷಯವನ್ನು ಮುಂದಿಟ್ಟು ಎ.ಆರ್.ರಹಮಾನ್ ರನ್ನು ಟೀಕಿಸತೊಡಗಿದರು. ರಹಮಾನ್ ಪುತ್ರಿ ಈ ರೀತಿ ವಸ್ತ್ರ ಧರಿಸುತ್ತಾರೆಂದು ನಾವು ನಿರೀಕ್ಷಿಸಿಯೂ ಇಲ್ಲ ಎಂದು ಕೆಲವರು ಹೇಳಿದರೆ, ಬಲವಂತವಾಗಿ ಈ ರೀತಿ ನಿಕಾಬ್ ಧರಿಸುವಂತೆ ಮಾಡಲಾಗುತ್ತದೆ ಎಂದು ಕೆಲವರು ಆರೋಪಿಸಿದರು.

ಇದೀಗ ಈ ಟೀಕೆಗಳಿಗೆ ರಹಮಾನ್ ಒಂದು ಫೋಟೊ ಮೂಲಕ ಉತ್ತರಿಸಿದ್ದಾರೆ. ತಮ್ಮ ಟ್ವಿಟರ್ ನಲ್ಲಿ ರಹಮಾನ್ ತನ್ನ ಪತ್ನಿ ಹಾಗು ಇಬ್ಬರು ಪುತ್ರಿಯರು ನೀತಾ ಅಂಬಾನಿ ಜೊತೆಗಿರುವ ಫೊಟೊವನ್ನು ಟ್ವೀಟ್ ಮಾಡಿದ್ದಾರೆ. ಈ ಫೋಟೊದಲ್ಲಿ ಪತ್ನಿ ಹಾಗು ರಹಮಾನ್ ರ ಮತ್ತೋರ್ವ ಪುತ್ರಿ ಸಾಮಾನ್ಯ ವಸ್ತ್ರ ಧರಿಸಿದ್ದು, ನಿಕಾಬ್ ಧರಿಸಿಲ್ಲ ಮತ್ತು ಖತೀಜಾ ಈ ಫೋಟೊದಲ್ಲೂ ನಿಕಾಬ್ ಧರಿಸಿದ್ದಾರೆ.

ಈ ಫೊಟೊ ಟ್ವೀಟ್ ಮಾಡಿರುವ ರಹಮಾನ್, “ನನ್ನ ಕುಟುಂಬದ ಅತ್ಯಮೂಲ್ಯ ಮಹಿಳೆಯರು ಖತೀಜಾ, ರಹೀಮಾ ಮತ್ತು ಸಾಯ್ರಾ ನೀತಾ ಅಂಬಾನಿಯವರ ಜೊತೆಗೆ, ಆಯ್ಕೆಯ ಸ್ವಾತಂತ್ಯ್ಯ” ಎಂದವರು ಪೋಸ್ಟ್ ಮಾಡಿದ್ದಾರ.ೆ

“ಸಂಪೂರ್ಣ ಒಪ್ಪಿಗೆಯಿಂದ ಮತ್ತು ಗೌರವಪೂರ್ವಕವಾಗಿ ನಾನು ಪರ್ದಾ ಧರಿಸಿದ್ದೇನೆ. ನಾನು ನನ್ನ ಜೀವನದ ಆಯ್ಕೆಗಳನ್ನು ಮಾಡಿಕೊಳ್ಳುವ ಪ್ರಬುದ್ಧ ವ್ಯಕ್ತಿ” ಎಂದು ಖತೀಜಾ ಕೂಡ ಪ್ರತಿಕ್ರಿಯಿಸಿದ್ದಾರೆ.

The precious ladies of my family Khatija ,Raheema and Sairaa with NitaAmbaniji #freedomtochoose pic.twitter.com/H2DZePYOtA

— A.R.Rahman (@arrahman) February 6, 2019
share
ವಾರ್ತಾಭಾರತಿ
ವಾರ್ತಾಭಾರತಿ
Next Story
X