Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಈ ಐಎಎಸ್ ಅಧಿಕಾರಿಯ ಮಗನ ಮದುವೆಯ ಖರ್ಚು...

ಈ ಐಎಎಸ್ ಅಧಿಕಾರಿಯ ಮಗನ ಮದುವೆಯ ಖರ್ಚು ಎಷ್ಟೆಂದು ಗೊತ್ತಾದರೆ ನಿಮ್ಮ ತಲೆ ತಿರುಗುವುದು ಖಚಿತ

ಎರಡೂ ಕಡೆಯವರಿಗೆ ತಲಾ ಖರ್ಚೆಷ್ಟು ಗೊತ್ತೇ?

ವಾರ್ತಾಭಾರತಿವಾರ್ತಾಭಾರತಿ7 Feb 2019 9:58 PM IST
share
ಈ ಐಎಎಸ್ ಅಧಿಕಾರಿಯ ಮಗನ ಮದುವೆಯ ಖರ್ಚು ಎಷ್ಟೆಂದು ಗೊತ್ತಾದರೆ ನಿಮ್ಮ ತಲೆ ತಿರುಗುವುದು ಖಚಿತ

ವಿಶಾಖಪಟ್ಟಣ, ಫೆ.7: ಇಂದು ಮದುವೆ ಎಂದರೆ ನಮ್ಮ ಅಂತಸ್ತು ಪ್ರದರ್ಶನಕ್ಕಿರುವ ಅತ್ಯುತ್ತಮ ಅವಕಾಶ ಎಂದೇ ಭಾವಿಸಿಕೊಂಡವರು ಹೆಚ್ಚು. ಆಗರ್ಭ ಶ್ರೀಮಂತರು ಬಿಡಿ, ಮಧ್ಯಮ ವರ್ಗದ ಜನರೂ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಮದುವೆ ಮಾಡುವುದು ಸರ್ವೇ ಸಾಮಾನ್ಯ. ಇನ್ನು ದೊಡ್ಡ ಹುದ್ದೆಯಲ್ಲಿರುವ ಪ್ರಭಾವಿ ಅಧಿಕಾರಿಯ ಮನೆಯ ಮದುವೆ ಹೇಗಿರಬೇಕು?...

ಆದರೆ ಇಲ್ಲೊಂದು ಹಿರಿಯ ಅಧಿಕಾರಿಯ ಮಗನ ಮದುವೆಯ ವಿಷಯ ಕೇಳಿದರೆ ನಿಮಗೆ ಅಚ್ಚರಿ ಹಾಗು ಸಂತಸ ಖಚಿತ. ಅದೂ ಈ ವ್ಯಕ್ತಿ ಐಎಎಸ್ ಅಧಿಕಾರಿ!. ಆಂಧ್ರ ಪ್ರದೇಶದ ಹಿರಿಯ ಐಎಎಸ್ ಅಧಿಕಾರಿ ಪಟ್ನಾಳ ಬಸಂತ್ ಕುಮಾರ್ ಅವರು ತನ್ನ ಮಗನ ಮದುವೆಗೆ ಖರ್ಚು ಮಾಡಿರುವ ಒಟ್ಟು ಮೊತ್ತ 36,000 ರೂಪಾಯಿ ಎಂದರೆ ನೀವು ನಂಬಲೇಬೇಕು.

ಅದೂ ವರ, ವಧು ಇಬ್ಬರ ಕುಟುಂಬ ಸೇರಿ ಮಾಡಲಿರುವ ಖರ್ಚು ಇದು !

ಬಸಂತ್ ಕುಮಾರ್ ಅವರು ವಿಶಾಖಪಟ್ಟಣ ಮೆಟ್ರೋಪಾಲಿಟನ್ ಪ್ರಾದೇಶಿಕ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು. ತನ್ನ ಮಗನ ಮದುವೆಯನ್ನು ಅದೆಷ್ಟು ವಿಜೃಂಭಣೆಯಿಂದ ಬೇಕಾದರೂ ಮಾಡಬಹುದಾಗಿದ್ದ ಅವರು ಅತ್ಯಂತ ಸರಳವಾಗಿ, ಅಷ್ಟೇ ಕಡಿಮೆ ಖರ್ಚಿನಲ್ಲಿ ಮಾಡುವ ಮೂಲಕ ಬಹುದೊಡ್ಡ ಸಂದೇಶ ರವಾನಿಸಿದ್ದಾರೆ. ಕೈಯಲ್ಲಿ ಇಲ್ಲದಿದ್ದರೂ ಸಾಲ ಸೋಲ ಮಾಡಿ ಧಾಮ್ ಧೂಮ್ ಮದುವೆ ಮಾಡುವವರಿಗೆ ಒಳ್ಳೆಯ ಪಾಠ ಹೇಳಿದ್ದಾರೆ.

36,000 ರೂಪಾಯಿ ಖರ್ಚನ್ನು ವರ ಹಾಗು ವಧುವಿನ ಕಡೆಯವರು ತಲಾ 18,000 ರೂಪಾಯಿಯಂತೆ ಹಂಚಿಕೊಳ್ಳಲಿದ್ದಾರೆ. ಆಂಧ್ರ ಹಾಗು ತೆಲಂಗಾಣ ರಾಜ್ಯಪಾಲ ಇ ಎಸ್ ಎಲ್ ನರಸಿಂಹನ್ ಅವರು ಮದುವೆಯಲ್ಲಿ ಭಾಗವಹಿಸಲಿದ್ದಾರೆ . 2012 ರಲ್ಲಿ ಐಎಎಸ್ ಗೆ ಬಡ್ತಿ ಪಡೆದ ಬಸಂತ್ ಅವರು ಈ ಹಿಂದೆ ರಾಜ್ಯಪಾಲರ ವಿಶೇಷಾಧಿಕಾರಿ ಹಾಗು ಜಂಟಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.

2017 ರಲ್ಲಿ ಬಸಂತ್ ಕುಮಾರ್ ತನ್ನ ಪುತ್ರಿಯ ವಿವಾಹವನ್ನು ಕೇವಲ 16,100 ರೂಪಾಯಿ ಖರ್ಚಿನಲ್ಲಿ ಮಾಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X