Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಕುಡಿತದ ಅಪರಾಧಗಳು

ಕುಡಿತದ ಅಪರಾಧಗಳು

-ರಿಯಾಝ್ ಅಹ್ಮದ್, ರೋಣ-ರಿಯಾಝ್ ಅಹ್ಮದ್, ರೋಣ7 Feb 2019 11:59 PM IST
share

ಮಾನ್ಯರೇ,

ಇತ್ತೀಚೆಗೆ ತುಮಕೂರಿನಲ್ಲಿ ಪಿಎಸ್ಸೈ ಒಬ್ಬರ ಮೇಲೆ ದುಷ್ಕರ್ಮಿಗಳು ನಡೆಸಿರುವ ಹಲ್ಲೆ ನಿಜಕ್ಕೂ ಖಂಡನೀಯ. ಸಾರ್ವಜನಿಕರಿಗೆ ರಕ್ಷಣೆ ಒದಗಿಸುವ ಪೊಲೀಸರೇ ಇಂದು ಕ್ರಿಮಿನಲ್ಸ್‌ಗಳಿಂದ ದಾಳಿಗೆ ಒಳಗಾಗುತ್ತಿರುವಾಗ ಜನಸಾಮಾನ್ಯರನ್ನು ರಕ್ಷಿಸುವವರು ಯಾರು?. ಈ ಹಿಂದೆಯೂ ಅನೇಕ ಬಾರಿ ಪೊಲೀಸರು ಇಂತಹ ಕೆಟ್ಟ ಪರಿಸ್ಥಿತಿಯನ್ನು ಎದುರಿಸಿದ್ದಾರೆ. ಮಾಧ್ಯಮಗಳಲ್ಲಿ ಪ್ರಕಟಗೊಂಡಂತೆ ಪಿಎಸ್ಸೈ ಅವರ ಮೇಲೆ ದಾಳಿ ನಡೆಸಿದವರು ಕುಡಿದು ವಾಹನವನ್ನು ಚಲಾಯಿಸುತ್ತಿದ್ದರು. ಶ್ರೀಮಂತ ವರ್ಗಕ್ಕೆ ಸೇರಿದ ಇವರಿಗೆ ಕಾನೂನಿನ ಯಾವ ಭಯವೂ ಇರುವುದಿಲ್ಲ, ಪೊಲೀಸ್ ಕಸ್ಟಡಿ ಎಂದರೆ ಒಂದು ರೀತಿಯ ತವರು ಮನೆ ಇದ್ದಂತೆ ಇಂತಹವರಿಗೆ. ಪ್ರಬಲ ರಾಜಕಾರಣಿಗಳ ಶಿಫಾರಸು, ಹಣ... ಹೀಗೆ ಎಲ್ಲದರ ನೆರವನ್ನು ಪಡೆದು ಜಾಮೀನಿನಲ್ಲಿ ಮರುಕ್ಷಣವೇ ಇವರು ಜೈಲಿನಿಂದ ಬಿಡುಗಡೆಗೊಳ್ಳುತ್ತಾರೆ. ಇಲ್ಲಿ ಗಮನಿಸಬೇಕಾದ ಮತ್ತೊಂದು ಸಂಗತಿ ಆರೋಪಿಗಳು ಪಾನಮತ್ತರಾಗಿದ್ದರು ಎಂಬುದು. ಸಮಾಜದ ಹಿತ ಕಾಯುವ ಅನೇಕರು ಕುಡಿತದ ದುಷ್ಪರಿಣಾಮವನ್ನು ಸರಕಾರಕ್ಕೆ ಆಗಾಗ ಎಚ್ಚರಿಸುತ್ತಿದ್ದರೂ ಆಳುವ ವರ್ಗ ಈ ಕುರಿತು ಜಾಣ ಮೌನಕ್ಕೆ ಜಾರಿರುವುದು ದುರಂತವೇ ಸರಿ.

ಒಂದೆಡೆ ಕುಡಿತದ ದುಶ್ಚಟದಿಂದಾಗಿ ನಿತ್ಯ ಇಲ್ಲಿ ಅಪರಾಧ ಕೃತ್ಯಗಳಲ್ಲಿ ವಿಪರೀತ ಹೆಚ್ಚಳವಾಗುತ್ತಿದ್ದರೆ, ಮಗದೊಂದೆಡೆ ಮದ್ಯದ ದಾಸರಾಗಿ ಕುಡುಕರು ತಮ್ಮ ಕುಟುಂಬ, ಆರೋಗ್ಯ ಹಣ ಹಾಗೂ ನೆಮ್ಮದಿ ಹೀಗೆ ಎಲ್ಲವನ್ನೂ ಹಾಳು ಮಾಡಿಕೊಳ್ಳುತ್ತಿದ್ದಾರೆ. ನಮ್ಮ ನಾಡಿನ ಅದೆಷ್ಟೊ ಕುಗ್ರಾಮಗಳಲ್ಲಿ ಕುಡಿಯಲು ಶುದ್ಧ ನೀರಿಲ್ಲದೆ ಜನತೆ ನಿತ್ಯ ಸಂಕಷ್ಟದಲ್ಲಿ ದಿನದೂಡುತ್ತಿದ್ದಾರೆ. ಆದರೆ ನೀರಿಲ್ಲದ ಅಂತಹ ಗ್ರಾಮಗಳಲ್ಲಿಯೂ ಎಗ್ಗಿಲ್ಲದೆ ಮದ್ಯ ದೊರಕುತ್ತಿದೆ ಎಂದರೇನರ್ಥ. ಜನರಿಗೆ ಶುದ್ಧ ನೀರನ್ನು ಕುಡಿಸದ ಸರಕಾರ ಯಾವುದೇ ಅಡೆತಡೆಯಿಲ್ಲದೆ ಶರಾಬನ್ನು ಕುಡಿಸುತ್ತಿದೆ. ಈ ರೋಗಕ್ಕೆ ಅಂಟಿಕೊಂಡಿರುವವರ ಅದೆಷ್ಟೋ ಅಮಾಯಕ ಹೆಂಡತಿ ಮಕ್ಕಳನ್ನು ಕಣ್ಣೀರಿನಲ್ಲಿ ಮುಳುಗಿಸಿ ಅವರ ಬದುಕನ್ನು ನರಕವನ್ನಾಗಿಸಿ ಮದ್ಯದಿಂದ ಸರಕಾರವು ಕ್ಷಣಿಕ ಲಾಭವನ್ನು ಪಡೆದುಕೊಂಡರೂ ಮರ್ದಿತರ ಆಕ್ರಂದನ ಒಂದಲ್ಲ ಒಂದು ದಿನ ಇವರ ಪಾಲಿಗೆ ಶಾಪವಾಗಿ ಪರಿಣಮಿಸಲಿದೆ. ಕುಡುಕರನ್ನು ಕಟ್ಟಿಕೊಂಡು ಕೆಡುಕು ಮುಕ್ತ ಸಮಾಜ ನಿರ್ಮಿಸಲು ಹೊರಟಿರುವ ಸರಕಾರದ ವಿರೋಧಾಭಾಸದ ಧೋರಣೆಯನ್ನು ರಾಜ್ಯದ ಜನತೆ ಗಟ್ಟಿಯಾಗಿ ವಿರೋಧಿಸಬೇಕಾಗಿದೆ. ಸರಕಾರ ಒಂದೊಡೆ ಮದ್ಯವನ್ನು ಮುಕ್ತವನ್ನಾಗಿಸಿ ಜನರನ್ನು ಅನಾರೋಗ್ಯದ ಬಾಗಿಲಿಗೆ ತಳ್ಳುತ್ತ ಮಗದೊಂದೆಡೆ ಆರೋಗ್ಯ ಕ್ಷೇತ್ರಕ್ಕೆ ಕೋಟಿಗಟ್ಟಲೆ ಬಜೆಟ್‌ನ್ನು ನಿಗದಿಪಡಿಸುತ್ತಿರುವುದು ಹಾಸ್ಯಾಸ್ಪದವಾಗಿದೆ. ಇನ್ನಾದರೂ ಸರಕಾರ ತನ್ನ ಬೂಟಾಟಿಕೆಯನ್ನು ನಿಲ್ಲಿಸಿ ರಾಜ್ಯವನ್ನು ಮದ್ಯ ಮುಕ್ತವನ್ನಾಗಿಸಲು ಕ್ರಮವನ್ನು ಕೈಗೊಳ್ಳಲಿ. 

share
-ರಿಯಾಝ್ ಅಹ್ಮದ್, ರೋಣ
-ರಿಯಾಝ್ ಅಹ್ಮದ್, ರೋಣ
Next Story
X