Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಇವರ ಪ್ರಾಣಕ್ಕೆ ಬೆಲೆ ಇಲ್ಲವೇ ? !

ಇವರ ಪ್ರಾಣಕ್ಕೆ ಬೆಲೆ ಇಲ್ಲವೇ ? !

ವಾರ್ತಾಭಾರತಿವಾರ್ತಾಭಾರತಿ8 Feb 2019 5:36 PM IST
share
ಇವರ ಪ್ರಾಣಕ್ಕೆ ಬೆಲೆ ಇಲ್ಲವೇ ? !

ಈ ವೀಡಿಯೊದಲ್ಲಿ ಕಾಣುತ್ತಿರುವ ದೃಶ್ಯ ಕೆಲ ನಿಮಿಷಗಳ ಮೊದಲಷ್ಟೆ ವೆಲೆನ್ಸಿಯಾ ವೃತ್ತದ ಬಳಿ ಕಂಡು ಬಂದಿರುವುದು. ಈ ದೃಶ್ಯವನ್ನು ನೋಡಿದಾಗ ಇವರ ಸಾಹಸಕ್ಕೆ ಜೈ ಎನ್ನಬೇಕೋ ಅಥವಾ ನಮ್ಮ ವ್ಯವಸ್ಥೆಯನ್ನು ಹಳಿಯಬೇಕೋ ತಿಳಿಯುತ್ತಿಲ್ಲ.

ಇವರೇನೋ ಹೊಟ್ಟೆಪಾಡಿಗಾಗಿ ಪ್ರಾಣದ ಹಂಗನ್ನು ತೊರೆದು ಇಂತಹ ಅಪಾಯಕಾರಿ ಕೆಲಸಗಳಲ್ಲಿ ತೊಡಗುತ್ತಾರೆ. ಆದರೆ ಇದನ್ನು ನಿರ್ವಹಿಸುವವರಿಗೆ ಯಾಕೆ ಇವರ ಪ್ರಾಣದ ಬಗ್ಗೆ ಕಾಳಜಿ ಇಲ್ಲ ಎನ್ನುವುದು ಅರ್ಥವಾಗುವುದಿಲ್ಲ.

ಕಳೆದ ಕೆಲ ದಿನಗಳಿಂದ ಇಲ್ಲಿ ಮೆಸ್ಕಾಂನಿಂದ ವಿದ್ಯುತ್ ಕಂಬಗಳಿಗೆ ಹೊಸ ತಂತಿಗಳನ್ನು ಅಳವಡಿಸುವ ಕಾರ್ಯ ನಡೆಯುತ್ತಿದೆ. ನಿಯಮಾನುಸಾರ ವಿದ್ಯುತ್ ಕಂಬಗಳಿಗೆ ಹತ್ತಿ ಕೆಲಸ ನಿರ್ವಹಿಸಬೇಕಾದರೆ ನಿರ್ದಿಷ್ಟ ತರಬೇತಿ, ಸಾಕಷ್ಟು ಸುರಕ್ಷತಾ ವ್ಯವಸ್ಥೆಯನ್ನು ಅನುಸರಿಸಬೇಕು. ಆದರೆ ಈ ದೃಶ್ಯದಲ್ಲಿ ಕಾಣುತ್ತಿರುವಂತೆ ವಿದ್ಯುತ್ ಕಂಬದಲ್ಲಿರುವ ಯುವಕನಲ್ಲಿ ಯಾವುದೇ ಸುರಕ್ಷತೆಗಳು ಕಾಣುವುದಿಲ್ಲ. ಮಾತ್ರವಲ್ಲದೆ, ಮೆಸ್ಕಾಂ ಯುನಿಫಾರಂ ಕೂಡಾ ಇಲ್ಲದಿರುವುದರಿಂದ ಇವರು ಮೆಸ್ಕಾಂ ಅಧಿಕೃತ ಸಿಬ್ಬಂದಿಯೇ ಎಂಬ ಅನುಮಾನವೂ ಇದೆ.

ಸದ್ಯ ಇಲ್ಲಿ ನಡೆಯುತ್ತಿರುವ ತಂತಿ ಅಳವಡಿಕೆ ಕಾರ್ಯದಲ್ಲಿ 10ಕ್ಕೂ ಅಧಿಕ ಮಂದಿಯಲ್ಲಿ ಒಂದಿಬ್ಬರು ಮಾತ್ರವೇ ಯುನಿಫಾರಂನಲ್ಲಿದ್ದಾರೆ. ಈ ಯುವಕನಂತೆ ಇಂದು ಇಲ್ಲಿ ಸುಮಾರು 10ರಷ್ಟು ಯುವಕರು ಈ ರೀತಿ ವಿದ್ಯುತ್ ಕಂಬಗಳಲ್ಲಿ ಅತ್ಯಂತ ಅಪಾಯಕಾರಿ ರೀತಿಯಲ್ಲಿ ತಂತಿಗಳನ್ನು ಅಳವಡಿಸುತ್ತಿರುವುದು ಕಂಡುಬಂತು. ಇದು ಇಲ್ಲಿಗೆ ಮಾತ್ರ ಸೀಮಿತವಾಗುವುದಿಲ್ಲ. ಬಹುತೇಕವಾಗಿ ಮೆಸ್ಕಾನಿಂದ ಈ ರೀತಿ ವಿದ್ಯುತ್ ಕಂಬಗಳಿಗೆ ತಂತಿ ಅಳವಡಿಸುವ ಸಂದರ್ಭ ಯಾವುದೇ ಯುನಿಫಾರಂ ಇಲ್ಲದ (ಅಂದರೆ ಅವರು ಕಂಬ ಹತ್ತಿ ಕಾರ್ಯ ನಿರ್ವಹಿಸುವ ಕುರಿತಂತೆ ನಿರ್ದಿಷ್ಟ ತರಬೇತಿಯನ್ನು ಪಡೆದಿರುವ ಬಗ್ಗೆ ಅನುಮಾನ), ಸುರಕ್ಷತಾ ವ್ಯವಸ್ಥೆಗಳಿಲ್ಲದೆ ಕಾರ್ಯ ನಿರ್ವಹಿಸುತ್ತಿರುವುದು ಸಾಮಾನ್ಯವಾಗಿ ಬಿಟ್ಟಿದೆ.

ಅದೆಷ್ಟೋ ಸಂದರ್ಭಗಳಲ್ಲಿ ವಿದ್ಯುತ್ ಕಂಬಗಳನ್ನು ಹತ್ತಿ ಕಾರ್ಯ ನಿರ್ವಹಿಸುವ ವೇಳೆ ದುರ್ಘಟನೆಗೀಡಾಗಿ ಪ್ರಾಣ ಕಳೆದುಕೊಂಡಿರುವುದನ್ನು ನಾವು ನೋಡಿದ್ದೇವೆ. ಹಾಗಿದ್ದರೆ, ಮೆಸ್ಕಾಂ ಈ ರೀತಿ ಸಾಮಾನ್ಯ ವ್ಯಕ್ತಿಗಳನ್ನು ಯಾವುದೇ ಸುರಕ್ಷತೆ ಇಲ್ಲದೆ, ದುಡಿಸಿಕೊಳ್ಳುವುದನ್ನು ನೋಡಿದಾಗ ಇವರ ಪ್ರಾಣಕ್ಕೆ ಬೆಲೆ ಇಲ್ಲೇ ಎಂದು ನಾವಿಂದು ಕೇಳಬೇಕಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X