Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕನ್ನಡ ಕಲಿತರೆ ಉದ್ಯೋಗವಿಲ್ಲ ಎಂಬ ಸುಳ್ಳು...

ಕನ್ನಡ ಕಲಿತರೆ ಉದ್ಯೋಗವಿಲ್ಲ ಎಂಬ ಸುಳ್ಳು ಸುದ್ದಿ ಹೋಗಲಾಡಿಸಬೇಕು: ಆರ್.ಜಿ. ಹಳ್ಳಿನಾಗರಾಜ್

ದಾವಣಗೆರೆ ತಾಲೂಕು 8ನೇ ಕನ್ನಡ ಸಾಹಿತ್ಯ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ8 Feb 2019 6:28 PM IST
share
ಕನ್ನಡ ಕಲಿತರೆ ಉದ್ಯೋಗವಿಲ್ಲ ಎಂಬ ಸುಳ್ಳು ಸುದ್ದಿ ಹೋಗಲಾಡಿಸಬೇಕು: ಆರ್.ಜಿ. ಹಳ್ಳಿನಾಗರಾಜ್

ದಾವಣಗೆರೆ,ಫೆ.8: ಕನ್ನಡ ಕಲಿತರೆ ಉದ್ಯೋಗವಿಲ್ಲ, ಅನ್ನವಿಲ್ಲ, ಬದುಕಿಲ್ಲ ಎಂಬ ಸುಳ್ಳು ಸುದ್ದಿ ಹೋಗಲಾಡಿಸಿ ಕನ್ನಡ ಕಲಿತರೆ ನಾನು ಬದುಕಬಲ್ಲೆ, ಕನ್ನಡ ಅನ್ನ ಭಾಷೆ ಆಗುತ್ತದೆ ಎಂಬ ಆತ್ಮವಿಶ್ವಾಸ ಕನ್ನಡ ಕಲಿಯುವ ಮಕ್ಕಳಲ್ಲಿ ತುಂಬಿಸಬೇಕು ಎಂದು ಆರ್.ಜಿ. ಹಳ್ಳಿನಾಗರಾಜ್ ಕರೆ ನೀಡಿದರು.

ಶುಕ್ರವಾರ ತಾಲೂಕಿನ ಆನಗೋಡು ಗ್ರಾಮದ ಮರುಳಸಿದ್ದೇಶ್ವರ ದೇವಸ್ಥಾನ ಆವರಣದ ಟಿ. ಗಿರಿಜಾ ವೇದಿಕೆಯಲ್ಲಿ ಹಮ್ಮಿಕೊಂಡಿದ್ದ ದಾವಣಗೆರೆ ತಾಲೂಕು 8ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಅವರು ಮಾತನಾಡಿದರು.

ಕನ್ನಡವನ್ನು ಕಲಿಯುವ ಮಕ್ಕಳಿಗೆ ಇಂಗ್ಲಿಷನ್ನು ಒಂದು ಭಾಷೆಯಾಗಿ ಪ್ರಾಥಮಿಕ ಹಂತದಿಂದಲೇ ಕಲಿಸಬೇಕು. ಇಂಗ್ಲಿಷನ್ನಾಗಲಿ, ಇತರೆ ಭಾಷೆಯನ್ನಾಗಲಿ ಮಗು ಮಾತೃಭಾಷೆ ಜೊತೆಗೆ ಕಲಿಯಬಲ್ಲುದು. ಇಂಗ್ಲಿಷ್ ಪ್ರಾಥಮಿಕ ಹಂತದಲ್ಲೇ ಮೀಡಿಯಂ ಆಗಿ ಕಲಿಸುವ ಬದಲು ಭಾಷೆಯಾಗಿ ಕಲಿಸಬೇಕೆಂದು ತಜ್ಞರೆ ಹೇಳುತ್ತಾರೆ. ಕೋರ್ಟ್‍ಗಳ ಆದೇಶಗಳು ಮಕ್ಕಳ ಶಿಕ್ಷಣದ ಹಕ್ಕನ್ನೇ ಮೊಟಕುಗೊಳಿಸುತ್ತಿವೆ. ಹೀಗಾಗಿ, ಭಾಷಾತಜ್ಞರು ಅಭಿಪ್ರಾಯಿಸುವ ಮಾತೃಭಾಷಾ ಶಿಕ್ಷಣಕ್ಕೆ ಒತ್ತು ಬೀಳಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಸರ್ಕಾರದ ಆದೇಶವನ್ನು ಖಾಸಗಿ ಸಂಸ್ಥೆ, ಅಲ್ಪಸಂಖ್ಯಾತ ಸಂಸ್ಥೆಗಳು ನ್ಯಾಯಾಲಯದಲ್ಲಿ ಪ್ರಶ್ನಿಸುವ ಮೂಲಕ ಪೋಷಕರಲ್ಲಿ ಗೊಂದಲ ಸೃಷ್ಟಿಸಿದವು. ಕನ್ನಡ ಶಾಲೆಗಳಲ್ಲಿ ಮಕ್ಕಳು ಕಡಿಮೆಯಾಗಲು ಇಂಗ್ಲಿಷ್ ಶಿಕ್ಷಣದ ವ್ಯಾಮೋಹ ಕಾರಣ ಎಂಬುದು ನಮಗೆಲ್ಲ ಗೊತ್ತು. ಇಂಗ್ಲಿಷ್ ಕಲಿತರೆ ಸರ್ಕಾರದಲ್ಲಿ, ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಸಿಗುತ್ತದೆ ಎಂಬ ಹಸಿಸುಳ್ಳು ಹಬ್ಬಿಸಲಾಗುತ್ತಿದ್ದು, ಕನ್ನಡದಲ್ಲಿ ಕಲಿತರೆ ಉದ್ಯೋಗ ದಕ್ಕುವುದಿಲ್ಲವೆಂಬ ಸುಳ್ಳನ್ನು ಹೋಗಲಾಡಿಸುವ ಕಾರ್ಯ, ಮಾತೃಭಾಷೆ ಕನ್ನಡಕ್ಕೆ ಬಂದಿರುವ ಕುತ್ತು ಮತ್ತು ಆತಂಕದ ಬಗ್ಗೆ ಇಂತಹ ಸಾಹಿತ್ಯ ಸಮ್ಮೇಳನಗಳಲ್ಲಿ ಪ್ರಾಸ್ತಾಪಿಸಬೇಕಿದೆ ಎಂದರು.

ಸಮ್ಮೇಳನ ಉದ್ಘಾಟಿಸಿದ ವಿದ್ವಾಂಸ ಪ್ರೊ.ಎಲ್.ಎನ್. ಮುಕುಂದರಾವ್ ಮಾತನಾಡಿ, ರಾಜ್ಯದಲ್ಲಿ ಬಂಡಾಯ ಸಾಹಿತ್ಯ ಸೃಷ್ಟಿಗೆ ಕಾರಣರಾದವರಲ್ಲಿ ಆರ್.ಜಿ. ಹಳ್ಳಿನಾಗರಾಜ್ ಪ್ರಮುಖರು. ಬಂಡಾಯ ಸಾಹಿತ್ಯ ಇತ್ತೀಚೆಗೆ ಬಂದಿದ್ದಲ್ಲ. ಶತಶತಮಾನಗಳ ಹಿಂದೆ ಬಂಡಾಯ ಸಾಹಿತ್ಯದ ಕಹಳೆ ಮೊಳಗಿಸಿದವರಲ್ಲಿ ಪಂಪ ಮೊದಲಿಗರು. ಅಗ್ರಗಣ್ಯ ಸ್ಥಾನದಲ್ಲಿದ್ದ ಸಂಸ್ಕೃತ ಭಾಷೆ ಬಿಟ್ಟು ಕನ್ನಡದಲ್ಲಿ ಕೃತಿ ಬರೆಯುವ ಮೂಲಕ ಬಂಡಾಯದ ಬಾವುಟ ಹಾರಿಸಿದವರು ಕವಿ ಪಂಪ ಎಂದು ಅವರು ವಿವರಿಸಿದರು.

ಕಸಾಪ ಜಿಲ್ಲಾಧ್ಯಕ್ಷ ಡಾ.ಎಚ್.ಎಸ್. ಮಂಜುನಾಥ ಕುರ್ಕಿ ಆಶಯ ನುಡಿಗಳನ್ನಾಡಿದರು. ಕಸಾಪ ತಾಲೂಕು ಅಧ್ಯಕ್ಷ ಬಿ. ವಾಮದೇವಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು.

ಸಮ್ಮೇಳನಾಧ್ಯಕ್ಷರಾದ ಆರ್.ಜಿ. ಹಳ್ಳಿನಾಗರಾಜ್ ಅವರಿಗೆ ನಿಕಟಪೂರ್ವ ಅಧ್ಯಕ್ಷ ಪ್ರೊ.ಎಚ್.ಎಸ್. ಹರಿಶಂಕರ್ ಸರ್ವಾಧ್ಯಕ್ಷತೆ ಹಸ್ತಾಂತರಿಸಿದರು. ಇದೇ ಸಂದರ್ಭ ತಾಪಂ ಕಾರ್ಯನಿರ್ವಹಣಾಧಿಕಾರಿ ಎಲ್.ಎಸ್. ಪ್ರಭುದೇವ್‍ಗೆ ಪ್ರಜಾಸ್ನೇಹಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಅಧ್ಯಕ್ಷತೆಯನ್ನು ಜಿಪಂ ಸದಸ್ಯ, ಸಮ್ಮೇಳನ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ ಕೆ.ಎಸ್. ಬಸವಂತಪ್ಪ ವಹಿಸಿದ್ದರು.

ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪ್ರೊ.ಎಸ್.ಬಿ. ರಂಗನಾಥ್, ಕಸಾಪ ನಿಕಟಪೂರ್ವ ಅಧ್ಯಕ್ಷ ಎ.ಆರ್. ಉಜ್ಜಿನಪ್ಪ, ಸಾಹಿತಿ ಎಂ.ಕೆ. ಬಕ್ಕಪ್ಪ, ಲೇಖಕ ಎಸ್. ಸಿದ್ದೇಶ್ ಕುರ್ಕಿ, ಉಪನ್ಯಾಸಕಿ ಎಂ.ಸಿ. ಗೀತಾ ಬಸವರಾಜ್, ಎಪಿಎಂಸಿ ಅಧ್ಯಕ್ಷ ಬಿ. ವೀರಣ್ಣ, ಆನಗೋಡು ಗ್ರಾಪಂ ಅಧ್ಯಕ್ಷ ಕೆ. ರವಿ, ನೇರ್ಲಿಗೆ ಗ್ರಾಪಂ ಅಧ್ಯಕ್ಷೆ ಎಸ್. ಅಕ್ಕಮಹಾದೇವಿ, ಅಣಜಿ ಚಂದ್ರಪ್ಪ, ಎಸ್.ಕೆ. ಚಂದ್ರಶೇಖರ್, ರುದ್ರೇಶ್‍ ನಾಯ್ಕ ಸೇರಿ ಹಲವರಿದ್ದರು. ನಂತರ ಸುದ್ದಿಗೋಷ್ಠಿ, ಕವಿಗೋಷ್ಠಿ, ಬಹಿರಂಗ ಅಧಿವೇಶನ ಮತ್ತು ಸಮಾರೋಪ, ಸನ್ಮಾನ ಸಮಾರಂಭ ನಡೆದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X