Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ‘ಪತ್ರೊಡೆ’ಯ ಕೆಸುವಿನ ಎಲೆಯ ವಿಶೇಷ...

‘ಪತ್ರೊಡೆ’ಯ ಕೆಸುವಿನ ಎಲೆಯ ವಿಶೇಷ ಆರೋಗ್ಯಲಾಭಗಳು ಏನೇನು ಗೊತ್ತಾ?

ವಿಟಾಮಿನ್ ಗಳ ಕಣಜವಿದು…

ವಾರ್ತಾಭಾರತಿವಾರ್ತಾಭಾರತಿ8 Feb 2019 9:43 PM IST
share
‘ಪತ್ರೊಡೆ’ಯ ಕೆಸುವಿನ ಎಲೆಯ ವಿಶೇಷ ಆರೋಗ್ಯಲಾಭಗಳು ಏನೇನು ಗೊತ್ತಾ?

ಕೆಸುವು ಯಾರಿಗೆ ಗೊತ್ತಿಲ್ಲ? ಎಲ್ಲರೂ ಇದನ್ನು ಇಷ್ಟಪಡುತ್ತಾರೆ. ಮಳೆಗಾಲದಲ್ಲಂತೂ ಕೆಸುವಿನ ಖಾದ್ಯಗಳಿಗೆ ಎಲ್ಲಿಲ್ಲದ ಆದ್ಯತೆ. ಚುಮುಚುಮು ಮಳೆ ಬೀಳುತ್ತಿರುವ ಸಮಯದಲ್ಲಿ ಗರಿಗರಿಯಾದ ಪತ್ರೊಡೆ ತಿನ್ನುವುದರ ರುಚಿಯೇ ಬೇರೆ. ಇಂತಹ ಕೆಸುವಿನ ಗಡ್ಡೆ ಮತ್ತು ಎಲೆಗಳು ಅಧಿಕ ಪ್ರಮಾಣದಲ್ಲಿ ಪೌಷ್ಟಿಕಾಂಶಗಳನ್ನು ಹೊಂದಿದ್ದು, ನಮ್ಮ ಶರೀರಕ್ಕೆ ಹಲವಾರು ಆರೋಗ್ಯಲಾಭಗಳನ್ನು ನೀಡುತ್ತವೆ. ಕೆಸುವಿನ ಎಲೆಗಳ ಇಂತಹ ಕೆಲವು ಆರೋಗ್ಯಲಾಭಗಳ ಕುರಿತು ಮಾಹಿತಿಯಿಲ್ಲಿದೆ.....

* ಕ್ಯಾನ್ಸರನ್ನು ತಡೆಯುತ್ತದೆ

ಕೆಸುವಿನ ಎಲೆಗಳಲ್ಲಿ ಸಮೃದ್ಧವಾಗಿರುವ ವಿಟಾಮಿನ್ ಸಿ ನೀರಿನಲ್ಲಿ ಕರಗಬಲ್ಲ ಉತ್ಕರ್ಷಣ ನಿರೋಧಕವಾಗಿದ್ದು, ಕ್ಯಾನ್ಸರ್ ಗಡ್ಡೆಗಳ ಬೆಳವಣಿಗೆಯನ್ನು ತಡೆಯುತ್ತದೆ ಮತ್ತು ಕ್ಯಾನ್ಸರ್ ಕೋಶಗಳ ಹರಡುವಿಕೆಯನ್ನು ಕಡಿಮೆ ಮಾಡುತ್ತದೆ. ಕೆಸುವಿನ ಎಲೆಗಳ ಸೇವನೆಯಿಂದ ಕರುಳಿನ ಕ್ಯಾನ್ಸರ್ ಮತ್ತು ಸ್ತನ ಕ್ಯಾನ್ಸರ್‌ಗಳ ಅಪಾಯವನ್ನು ತಗ್ಗಿಸಬಹುದು ಎನ್ನುವುದನ್ನು ಅಧ್ಯಯನಗಳು ತೋರಿಸಿವೆ.

* ಕಣ್ಣಿನ ಆರೋಗ್ಯವನ್ನು ಹೆಚ್ಚಿಸುತ್ತದೆ

ಈ ಎಲೆಗಳಲ್ಲಿ ವಿಟಾಮಿನ್ ‘ಎ’ ಅಧಿಕ ಪ್ರಮಾಣದಲ್ಲಿದೆ. ಈ ವಿಟಾಮಿನ್ ಕಣ್ಣುಗಳ ಆರೋಗ್ಯವನ್ನು ಮತ್ತು ಉತ್ತಮ ದೃಷ್ಟಿಯನ್ನು ಕಾಯ್ದುಕೊಳ್ಳಲು ಹಾಗೂ ಅಂಧತ್ವಕ್ಕೆ ಕಾರಣವಾಗಬಲ್ಲ ಕಣ್ಣಿನ ರೋಗಗಳನ್ನು ತಡೆಯಲು ಅಗತ್ಯವಾಗಿದೆ.

* ಅಧಿಕ ರಕ್ತದೊತ್ತಡವನ್ನು ತಗ್ಗಿಸುತ್ತದೆ

ಕೆಸುವಿನ ಎಲೆಗಳಲ್ಲಿ ಸಪೋನಿನ್‌ಗಳು,ಟ್ಯಾನಿನ್‌ಗಳು,ಕಾರ್ಬೊಹೈಡ್ರೇಟ್‌ಗಳು ಮತ್ತು ಫ್ಲಾವನಾಯ್ಡಾಗಳು ಇರುವುದರಿಂದ ಅಧಿಕ ರಕ್ತದೊತ್ತಡವನ್ನು ತಗ್ಗಿಸುತ್ತವೆ. ಅಧಿಕ ರಕ್ತದೊತ್ತಡವು ಹೃದ್ರೋಗಗಳಿಗೂ ಕಾರಣವಾಗುವುದರಿಂದ ಕೆಸುವಿನ ಎಲೆಗಳ ಸೇವನೆ ಹೃದಯದ ಆರೋಗ್ಯಕ್ಕೂ ಪೂರಕವಾಗಿದೆ.

* ರೋಗ ನಿರೋಧಕ ವ್ಯವಸ್ಥೆಯನ್ನು ಬಲಗೊಳಿಸುತ್ತದೆ.

ಸಿ ವಿಟಾಮಿನ್ ಅನ್ನು ಸಮೃದ್ಧವಾಗಿ ಹೊಂದಿರುವ ಈ ಎಲೆಗಳು ಶರೀರದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ನಮ್ಮ ಶರೀರದಲ್ಲಿಯ ಹಲವಾರು ಜೀವಕೋಶಗಳು, ವಿಶೇಷವಾಗಿ ರೋಗ ನಿರೋಧಕ ವ್ಯವಸ್ಥೆಯ ಟಿ-ಸೆಲ್‌ಗಳು ಮತ್ತು ಫ್ಯಾಗೊಸೈಟ್‌ಗಳು ಸೂಕ್ತವಾಗಿ ಕಾಯ ನಿರ್ವಹಿಸಲು ವಿಟಮಿನ್ ಸಿ ಅಗತ್ಯವಾಗಿದೆ. ಶರೀರದಲ್ಲಿ ವಿಟಾಮಿನ್ ಸಿ ಕೊರತೆಯಿದ್ದರೆ ರೋಗಕಾರಕಗಳ ವಿರುದ್ಧ ಹೋರಾಡಲು ರೋಗ ನಿರೋಧಕ ಶಕ್ತಿಗೆ ಸಾಧ್ಯವಾಗುವುದಿಲ್ಲ.

* ಮಧುಮೇಹವನ್ನು ತಡೆಯುತ್ತದೆ

ಕೆಸುವಿನ ಎಲೆಗಳು ರಕ್ತದಲ್ಲಿಯ ಸಕ್ಕರೆಯ ಅಂಶವನ್ನು ಕಡಿಮೆ ಮಾಡುತ್ತವೆ ಮತ್ತು ದೇಹತೂಕ ನಷ್ಟವನ್ನು ತಡೆಯುತ್ತವೆ ಎನ್ನುವುದು ಅಧ್ಯಯನಗಳಿಂದ ಸಾಬೀತಾಗಿದೆ.

* ಜೀರ್ಣಕ್ರಿಯೆಗೆ ನೆರವಾಗುತ್ತದೆ

ಕೆಸುವಿನ ಎಲೆಗಳಲ್ಲಿ ನಾರು ಹೆಚ್ಚಿನ ಪ್ರಮಾಣದಲ್ಲಿರುವುದರಿಂದ ನಾವು ಸೇವಿಸಿದ ಆಹಾರವು ಸರಿಯಾಗಿ ಜೀರ್ಣಗೊಳ್ಳಲು ಮತ್ತು ಶರೀರವು ಪೋಷಕಾಂಶಗಳನ್ನು ಹೀರಿಕೊಳ್ಳಲು ನೆರವಾಗುತ್ತವೆ ಹಾಗೂ ಜೀರ್ಣ ಸಂಬಂಧಿ ಸಮಸ್ಯೆಗಳನ್ನು ಪರಿಹರಿಸುತ್ತವೆ. ಕೆಸುವಿನ ಎಲೆಗಳು ನಮ್ಮ ಕರುಳಿನಲ್ಲಿರುವ,ಜೀರ್ಣಕ್ರಿಯೆಗೆ ಮತ್ತು ಹಾನಿಕಾರಕ ಸೂಕ್ಷ್ಮಜೀವಿಗಳ ವಿರುದ್ಧ ಹೋರಾಟಕ್ಕೆ ನೆರವಾಗುವ ಎಷ್ಚೆರಿಚಿಯಾ ಕೋಲಿ ಮತ್ತು ಲ್ಯಾಕ್ಟೋಬಸಿಲಸ್ ಆ್ಯಸಿಡೊಫಿಲಸ್‌ನಂತಹ ಲಾಭದಾಯಕ ಸೂಕ್ಷ್ಮಜೀವಿಗಳ ಬೆಳವಣಿಗೆಯನ್ನು ಉತ್ತೇಜಿಸುತ್ತವೆ.

* ಉರಿಯೂತವನ್ನು ತಗ್ಗಿಸುತ್ತದೆ

ಕೆಸುವಿನ ಎಲೆಗಳು ಉರಿಯೂತ ನಿರೋಧಕ ಮತ್ತು ಸೂಕ್ಷ್ಮಜೀವಿ ನಿರೋಧಕ ಗುಣಗಳನ್ನು ಹೊಂದಿರುವುದರಿಂದ ದೀರ್ಘಕಾಲಿಕ ಉರಿಯೂತವನ್ನು ಕಡಿಮೆ ಮಾಡಲು ನೆರವಾಗುತ್ತವೆ.

*ನರಮಂಡಲವನ್ನು ರಕ್ಷಿಸುತ್ತದೆ

ಕೆಸುವಿನ ಎಲೆಗಳಲ್ಲಿರುವ ವಿಟಾಮಿನ್ ಬಿ6, ಥಿಯಾಮೈನ್, ನಿಯಾಸಿನ್ ಮತ್ತು ರಿಬೊಫ್ಲಾವಿನ್‌ಗಳು ನರಮಂಡಲಕ್ಕೆ ರಕ್ಷಣೆಯನ್ನೊದಗಿಸುತ್ತವೆ. ಈ ಎಲ್ಲ ಪೌಷ್ಟಿಕಾಂಶಗಳು ಭ್ರೂಣಸ್ಥಿತಿಯಲ್ಲಿ ಮಿದುಳಿನ ಸೂಕ್ತ ಬೆಳವಣಿಗೆಗೆ ಮತ್ತು ನರಮಂಡಲವನ್ನು ಸದೃಢಗೊಳಿಸಲು ನೆರವಾಗುತ್ತವೆ.

* ರಕ್ತಹೀನತೆಯನ್ನು ತಡೆಯುತ್ತದೆ

ಶರೀರದಲ್ಲಿ ಹಿಮೊಗ್ಲೋಬಿನ್ ಸಂಖ್ಯೆ ಕಡಿಮೆಯಾದಾಗ ರಕ್ತಹೀನತೆಯುಂಟಾಗುತ್ತದೆ. ಕೆಸುವಿನ ಎಲೆಗಳಲ್ಲಿ ಗಣನೀಯ ಪ್ರಮಾಣದಲ್ಲಿರುವ ಕಬ್ಬಿಣ ಕೆಂಪು ರಕ್ತಕಣಗಳ ಉತ್ಪಾದನೆಯಲ್ಲಿ ನೆರವಾಗುತ್ತದೆ. ಅಲ್ಲದೆ ಅದರಲ್ಲಿರುವ ವಿಟಾಮಿನ್ ಸಿ ಶರೀರವು ಕಬ್ಬಿಣವನ್ನು ಚೆನ್ನಾಗಿ ಹೀರಿಕೊಳ್ಳಲು ನೆರವಾಗುವ ಮೂಲಕ ರಕ್ತಹೀನತೆಯ ಅಪಾಯವನ್ನು ಇನ್ನಷ್ಟು ತಗ್ಗಿಸುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X