Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಬ್ಯಾರಿ ಮೇಳದಲ್ಲಿ ಮೇಳೈಸಿದ...

ಮಂಗಳೂರು: ಬ್ಯಾರಿ ಮೇಳದಲ್ಲಿ ಮೇಳೈಸಿದ ಫುಡ್‌ಕೋರ್ಟ್

ವಾರ್ತಾಭಾರತಿವಾರ್ತಾಭಾರತಿ8 Feb 2019 10:25 PM IST
share
ಮಂಗಳೂರು: ಬ್ಯಾರಿ ಮೇಳದಲ್ಲಿ ಮೇಳೈಸಿದ ಫುಡ್‌ಕೋರ್ಟ್

ಮಂಗಳೂರು, ಫೆ.8: ನಗರದ ಪುರಭವನದಲ್ಲಿ ಬಿಸಿಸಿಐ ಆಯೋಜಿಸಿರುವ ಬ್ಯಾರಿ ಮೇಳದಲ್ಲಿ ‘ಫುಡ್‌ಕೋರ್ಟ್’ ಮೇಳೈಸಿದ್ದು, ಸಾವಿರಾರು ಗ್ರಾಹಕರು ಮೊದಲ ದಿನವೇ ಫುಡ್‌ಕೋರ್ಟ್‌ಗೆ ಲಗ್ಗೆಯಿಟ್ಟು ಬಗೆಬಗೆಯ ಖಾದ್ಯ ತಿನಿಸುಗಳ ಸಹಿತ ಆಹಾರ ಪದಾರ್ಥಗಳನ್ನು ಸವಿದು ಬಾಯಿ ಚಪ್ಪರಿಸಿದರು.

20ಕ್ಕೂ ಅಧಿಕ ಆಹಾರ ಮಳಿಗೆಗಳಲ್ಲಿ ಅಧಿಕ ಸಂಖ್ಯೆಯಲ್ಲಿರುವ ಬ್ಯಾರಿ ಮುಸ್ಲಿಂ ಮಹಿಳೆಯರು ಸ್ಥಳದಲ್ಲೇ ಆಹಾರ ತಯಾರಿಸಿ ಮಾರಾಟದಲ್ಲೂ ತೊಡಗಿಸಿಕೊಂಡು ಬ್ಯಾರಿ ಸಮುದಾಯವು ‘ಶ್ರಮಜೀವಿ’ ಎಂಬುದನ್ನು ಮತ್ತೊಮ್ಮೆ ಸಾಬೀತು ಪಡಿಸಿದರು.

ಚಿಕನ್, ಮಟನ್ ಐಟಂಗಳಲ್ಲದೆ ಚಹಾ, ಕಾಫಿ, ತಂಪು ಪಾನೀಯ, ಐಸ್‌ಕ್ರೀಂ, ಹಣ್ಣು ಹಂಪಲುಗಳ ಮಳಿಗೆಯೂ ಕಂಡು ಬಂತು. ಕೇರಳದ ಆಹಾರವೂ ಕೂಡ ಮಳಿಗೆಗಳಲ್ಲಿ ಗಮನ ಸೆಳೆಯಿತು.

ಬಂಗುಡೆ, ಮಾಂಜಿ, ಅಂಜಲ್ ಸಹಿತ ಸ್ಥಳದಲ್ಲೇ ಮೀನುಗಳನ್ನು ಹುರಿದು ಕೊಡುವ ದೃಶ್ಯವೂ ಸಾಮಾನ್ಯವಾಗಿತ್ತು. ಉಳಿದಂತೆ ವಿವಿಧ ಬಗೆಯ ಉಪ್ಪಿನಕಾಯಿಯ ಮಾರಾಟ ಕೂಡ ಭರಾಟೆ ಪಡೆದುಕೊಂಡಿತು.

ಬಿ.ಸಿ.ರೋಡ್ ಸಮೀಪದ ತಲಪಾಡಿಯ ಕುಟುಂಬವೊಂದರ ಮಹಿಳಾ ಸದಸ್ಯರಾದ ಡಾ. ಬೆನಝಿರ್ ಫಾತಿಮಾ, ಆಯಿಶತ್ ಶಹನಾಝ್, ಫಮೀದಾ ಅಝೀಝ್ ಮತ್ತಿತರರು ಸ್ವತಃ ಮನೆಯಲ್ಲೇ ವಿವಿಧ ಬಗೆಯ ಆಹಾರವಲ್ಲದೆ, ಚಾಕ್ಲೆಟ್ ಇತ್ಯಾದಿಯನ್ನು ತಯಾರಿಸಿ ಮಾರಾಟ ಮಾಡಿ ಸೈ ಎನಿಸಿದರು.

‘ನಾವು ಮೊದಲ ಬಾರಿಗೆ ಇಂತಹ ವಿಶಿಷ್ಟ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದೇವೆ. ನಮಗೆ ಇಲ್ಲಿ ವ್ಯಾಪಾರವೇ ಮುಖ್ಯವಲ್ಲ. ಶುಚಿ-ರುಚಿಯಾದ ಅಡುಗೆಯನ್ನು ಗ್ರಾಹಕರಿಗೆ ನೀಡುವುದಕ್ಕೆ ಆದಯತೆ ನೀಡುತ್ತೇವೆ. ಮೊದಲ ದಿನವೇ ಉತ್ತಮ ಸ್ಪಂದನೆ ಸಿಕ್ಕಿದೆ’ ಎಂದು ಡಾ.ಬೆನಝೀರ್ ಫಾತಿಮಾ ನುಡಿದರು.

ಈ ಸಂದರ್ಭ ‘ವಾರ್ತಾಭಾರತಿ’ಯೊಂದಿಗೆ ಮಾತನಾಡಿದ ಪಾಂಡೇಶ್ವರದ ಅಮನ್ ಮೊಯ್ದಿನ್ ಬಗೆ ಬಗೆಯ ತಿಂಡಿ ತಿನಿಸುಗಳನ್ನು ಸವಿಯಲು ಇದೊಂದು ಅಪೂರ್ವ ಅವಕಾಶವಾಗಿದೆ. ನಮ್ಮ ನಿರೀಕ್ಷೆಗೂ ಮೀರಿದ ಆಹಾರಗಳು ಇಲ್ಲಿವೆ. ಭಕ್ಷಪ್ರಿಯರು ಒಮ್ಮೆ ಇಲ್ಲಿಗೆ ಭೇಟಿ ನೀಡಲೇಬೇಕಾಗಿದೆ’ ಎಂದರು.

ಉಳಿದಂತೆ ವಸ್ತುಪ್ರದರ್ಶನದ ಮಳಿಗೆಗಳಲ್ಲಿ ಬಿಲ್ಡರ್ ಮೆಟೀರಿಯಲ್ಸ್, ಹಾರ್ಡ್‌ವೇರ್ ಮೆಟೀರಿಯಲ್ಸ್, ಫರ್ನಿಚರ್ಸ್‌, ಪ್ಲೈವುಡ್ಸ್, ಬ್ಯಾರಿಗಳು ನಡೆಸುವ ಶಿಕ್ಷಣ ಸಂಸ್ಥೆಗಳ ಮಳಿಗೆಗಳಲ್ಲದೆ ಅತ್ತರ್- ಟೊಪ್ಪಿ ಹಾಗೂ ಪುಸ್ತಕಗಳೂ ಕೂಡ ಇದೆ. ಶನಿವಾರ ಮತ್ತು ರವಿವಾರ ಕೂಡ ಈ ಎಲ್ಲಾ ಮಳಿಗೆಗಳು ತೆರೆದಿರುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X