Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಧಾನಿಗೆ ಅಸ್ಸಾಂನಲ್ಲಿ ಕರಿ ಪತಾಕೆ...

ಪ್ರಧಾನಿಗೆ ಅಸ್ಸಾಂನಲ್ಲಿ ಕರಿ ಪತಾಕೆ ಪ್ರದರ್ಶನ: ಪೌರತ್ವ ಮಸೂದೆಯಿಂದ ತೊಂದರೆಯಿಲ್ಲ ಎಂದ ಮೋದಿ

ವಾರ್ತಾಭಾರತಿವಾರ್ತಾಭಾರತಿ9 Feb 2019 5:52 PM IST
share
ಪ್ರಧಾನಿಗೆ ಅಸ್ಸಾಂನಲ್ಲಿ ಕರಿ ಪತಾಕೆ ಪ್ರದರ್ಶನ: ಪೌರತ್ವ ಮಸೂದೆಯಿಂದ ತೊಂದರೆಯಿಲ್ಲ ಎಂದ ಮೋದಿ

ಗುವಹಾಟಿ, ಫೆ. 9: ವಿವಾದಿತ ಪೌರತ್ವ ಮಸೂದೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರು ಸತತ ಎರಡನೇ ದಿನ ಪ್ರಧಾನಿ ನರೇಂದ್ರ ಮೋದಿಗೆ ಕರಿ ಪತಾಕೆಗಳನ್ನು ಶನಿವಾರ ಪ್ರದರ್ಶಿಸಿದ್ದಾರೆ.

''ಈ ಮಸೂದೆ ಅಸ್ಸಾಂ ಮತ್ತು ಈಶಾನ್ಯ ರಾಜ್ಯಗಳಿಗೆ ಯಾವುದೇ ರೀತಿಯಲ್ಲಿ ಪ್ರತಿಕೂಲ ಪರಿಣಾಮ ಬೀರದು'' ಎಂದು ಪ್ರಧಾನಿ ಭರವಸೆ ನೀಡಿದರೂ ಅದು ಜನರ ಕೋಪವನ್ನು ಶಮನಗೊಳಿಸಿಲ್ಲ.

ಚಂಗ್ಸಾರಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಸಿಸಿ ಮಾತನಾಡಿದ ಪ್ರಧಾನಿ ''ಪೌರತ್ವ ಮಸೂದೆ ಕೇವಲ ಈಶಾನ್ಯ ಭಾರತ ಅಥವಾ ಅಸ್ಸಾಂಗೆ ಸಂಬಂಧಿಸಿ ದ್ದಲ್ಲ. ತಮ್ಮ ಧರ್ಮಾನುಸಾರ ಬದುಕಲು ಬಯಸುವವರಿಗೆ ಹಾಗೂ  ತಮ್ಮ ಜೀವವುಳಿಸಲು ಪಲಾಯನಗೈದು ಭಾರತ ಮಾತೆಯ ಬಳಿ ಬಂದವರ ಪ್ರಯೋಜನಕ್ಕಾಗಿ ಇದನ್ನು ಜಾರಿಗೆ ತರಲಾಗುತ್ತಿದೆ. ಅಂತಹ ಜನರನ್ನು ನೀವು ಭೇಟಿಯಾಗಿ ಅವರನ್ನು ಅರ್ಥೈಸಿದಾಗ ನಿಮಗಿದು ತಿಳಿಯುತ್ತದೆ,'' ಎಂದು ಹೇಳಿದರು.

ಶುಕ್ರವಾರ ಸಂಜೆ  ಅಸ್ಸಾಂಗೆ ಮೋದಿ ಆಗಮಿಸಿದಾಗ ಕನಿಷ್ಠ ನಾಲ್ಕು ಕಡೆಗಳಲ್ಲಿ ಅವರಿಗೆ ಕರಿ ಪತಾಕೆ ಪ್ರದರ್ಶಿಸಲಾಯಿತು. ಆಲ್ ಅಸ್ಸಾಂ ವಿದ್ಯಾರ್ಥಿ ಯೂನಿಯನ್ ಸದಸ್ಯರು ಪ್ರಧಾನಿಯ ವಾಹನ ಪಡೆ ಸಾಗುತ್ತಿದ್ದಾಗ ಘೋಷಣೆಗಳನ್ನು ಕೂಗಿದರು.

ಶನಿವಾರ ಬೆಳಗ್ಗೆ ಅಸ್ಸಾಂ ಜತೀಯತಾಬಾದಿ ಯುವ ಛಾತ್ರ ಪರಿಷದ್ ಸದಸ್ಯರು  ಗುವಹಾಟಿಯ ಮಚ್ಖೋವಾ ಪ್ರದೇಶದಲ್ಲಿ ಪ್ರಧಾನಿಗೆ ಕರಿ ಪತಾಕೆ ತೋರಿಸಿದರೆ ಗೌಹಾಟಿ ವಿವಿ ಪಕ್ಕ ಪ್ರಧಾನಿ ವಾಹನ ಪಡೆ ಸಾಗಿದಾಗ ವಿದ್ಯಾರ್ಥಿಗಳ ಗುಂಪೊಂದು ಅವರಿಗೆ ಕರಿ ಪತಾಕೆಗಳನ್ನು ಪ್ರದರ್ಶಿಸಿತು.

ತಮ್ಮ ಅರುಣಾಚಲ ಪ್ರದೇಶ ಭೇಟಿಯ ವೇಳೆ ಪ್ರಧಾನಿ ಹೊಲ್ಲೊಂಗಿಯಲ್ಲಿ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣ ಉದ್ಘಾಟಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X