Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 2 ಕೋಟಿ ರೂ. ವಂಚನೆ ಪ್ರಕರಣ: ಬಿಜೆಪಿ...

2 ಕೋಟಿ ರೂ. ವಂಚನೆ ಪ್ರಕರಣ: ಬಿಜೆಪಿ ಮಾಜಿ ಶಾಸಕನ ಸಂಬಂಧಿಕರ ಬಂಧನ

ವಾರ್ತಾಭಾರತಿವಾರ್ತಾಭಾರತಿ9 Feb 2019 7:26 PM IST
share
2 ಕೋಟಿ ರೂ. ವಂಚನೆ ಪ್ರಕರಣ: ಬಿಜೆಪಿ ಮಾಜಿ ಶಾಸಕನ ಸಂಬಂಧಿಕರ ಬಂಧನ

ಬೆಂಗಳೂರು, ಫೆ.9: ಪ್ರತಿಷ್ಠಿತ ಕಂಪೆನಿಗಳ ಹೆಸರಿನಲ್ಲಿ 2 ಕೋಟಿ ರೂಪಾಯಿಗೂ ಅಧಿಕ ಮೊತ್ತ ವಂಚನೆ ಪ್ರಕರಣವನ್ನು ಇಲ್ಲಿನ ಸುಬ್ರಮಣ್ಯಪುರ ಠಾಣಾ ಪೊಲೀಸರು ಭೇದಿಸಿದ್ದು, ಬಿಜೆಪಿ ಮಾಜಿ ಶಾಸಕ ರಾಜು ಕಾಗೆ ಅವರ ಸಂಬಂಧಿಕರನ್ನು ಬಂಧಿಸಲಾಗಿದೆ.

ಪ್ರಕರಣ ಸಂಬಂಧ ಉತ್ತರಹಳ್ಳಿಯ ಗೌಡನಪಾಳ್ಯ ಸಿರಿ ಪ್ಯಾರಾಮೌಂಟ್ ಅಪಾರ್ಟ್‌ಮೆಂಟ್ ನಿವಾಸಿ ದರ್ಶನ್ ಶ್ರೀರಾಂ(32) ಹಾಗೂ ಸಹಕರಿಸುತ್ತಿದ್ದ ಬಿಟಿಎಂ ಲೇಔಟ್‌ನ ಷಣ್ಮುಗ(46)ರನ್ನು ಬಂಧಿಸಿ ವಿಚಾರಣೆಗೊಳಪಡಿಸಲಾಗಿದೆ. ಕೃತ್ಯದಲ್ಲಿ ದರ್ಶನ್ ಶ್ರೀರಾಂ ಜೊತೆ ಆತನ ಪತ್ನಿ ನಿಖಿತಾ ಗಾಡ್ವಿ ಭಾಗಿಯಾಗಿದ್ದು, ಆಕೆಗೆ ಒಂದು ವರ್ಷದ ಮಗು ಇರುವ ಹಿನ್ನೆಲೆ ನೋಟಿಸ್ ನೀಡಲಾಗಿದೆ ಎಂದು ದಕ್ಷಿಣ ವಿಭಾಗದ ಡಿಸಿಪಿ ಅಣ್ಣಾಮಲೈ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಆರೋಪಿತೆ ನಿಖಿತಾ ಗಾಡ್ವಿ ಬೆಳಗಾವಿಯ ಕಾಗವಾಡ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ರಾಜು ಕಾಗೆ ಅವರ ಸಹೋದರನ ಪುತ್ರಿಯಾಗಿದ್ದು, ದರ್ಶನ್ ಶ್ರೀರಾಂರನ್ನು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಕಾಲ್‌ಸೆಂಟರ್ ವಂಚನೆ ಪ್ರಕರಣದಲ್ಲಿ ನಿಖಿತಾ ಆತನ ಪತಿ ಜೊತೆಗೆ ಕೈಜೋಡಿಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಏನಿದು ಪ್ರಕರಣ?: ಆರೋಪಿ ದಂಪತಿಗಳು ಆನ್‌ಲೈನ್ ಪೋರ್ಟಲ್‌ನಲ್ಲಿ ಕಂಪೆನಿ ನಡೆಸುತ್ತಿದ್ದ ಸಂಜೀತ್ ಬೋಹಾ ಎಂಬಾತನನ್ನು ಪರಿಚಯಿಸಿಕೊಂಡು 2015ರಲ್ಲಿಯೇ ‘ಡಿಎನ್‌ಎಸ್ ಪ್ರೈಮ್’ ಹೆಸರಿನ ನಕಲಿ ಕಂಪೆನಿಯನ್ನು ನೋಂದಣಿ ಮಾಡಿಸಿ ಸುಬ್ರಮಣ್ಯಪುರದಲ್ಲಿ ಕಚೇರಿ ಆರಂಭಿಸಿದ್ದಾರೆ.

ಬೆಂಗಳೂರು ಸೇರಿದಂತೆ ಆಂಧ್ರಪ್ರದೇಶ, ತಮಿಳುನಾಡು, ಕೇರಳ ಹಾಗೂ ಗೋವಾ ರಾಜ್ಯಗಳಲ್ಲಿ ಹೊಸದಾಗಿ ‘ಕಾಲ್‌ಸೆಂಟರ್ ಹಾಗೂ ಔಟ್ ಸೋರ್ಸಿಂಗ್’ ಕಂಪೆನಿಗಳನ್ನು ತೆರೆಯುವವರನ್ನು ಸಂಪರ್ಕಿಸುತ್ತಿದ್ದರು.

ಪ್ರತಿಷ್ಠಿತ ಇನ್ಫೋಸಿಸ್, ಹೆಚ್‌ಪಿ ಸೇರಿದಂತೆ ಹಲವು ಕಂಪೆನಿಗಳ ಹೆಸರಿನಲ್ಲಿ ನಕಲಿ ಇ-ಮೇಲ್ ಐಡಿಗಳನ್ನು ಸೃಷ್ಟಿಸಿದ್ದರು. ಇವುಗಳನ್ನು ತೋರಿಸಿ ಕಂಪೆನಿಗಳಿಂದ ಬರುವ ಔಟ್ ಸೋರ್ಸಿಂಗ್ ಪ್ರಾಜೆಕ್ಟ್ ಗಳನ್ನು ಕೊಡಿಸುವುದಾಗಿ ನಂಬಿಸುತ್ತಿದ್ದರು. ‘ರಾಯಲ್ಟಿ ಮತ್ತು ಬಂಡವಾಳ’ ನೆಪದಲ್ಲಿ ಲಕ್ಷಾಂತರ ರೂ. ಹಣ ಪಡೆದು, ಅನಧಿಕೃತ ಪ್ರಾಜೆಕ್ಟ್‌ಗಳನ್ನು ನೀಡುತ್ತಿದ್ದರು. ಬಳಿಕ ಉದ್ದೇಶಪೂರ್ವಕವಾಗಿ ಪ್ರಾಜೆಕ್ಟ್ ಸರಿಯಿಲ್ಲ ಎಂದು ನೆಪ ಹೇಳಿ ದಿಢೀರ್ ಕಾಂಟ್ರ್ಯಾಕ್ಟ್ ರದ್ದುಪಡಿಸುತ್ತಿದ್ದರು ಎಂದು ಅಣ್ಣಾಮಲೈ ವಿವರಿಸಿದರು.

ಬಳಿಕ ಹಣವನ್ನು ನೀಡದೇ ಗ್ರಾಹಕರನ್ನು ವಂಚಿಸುತ್ತಿದ್ದರು. ಹಣ ಕೊಡುವಂತೆ ಒತ್ತಾಯಿಸುವವರ ಮೇಲೆ ಸ್ಥಳೀಯ ರೌಡಿ ಷಣ್ಮುಗನನ್ನು ಬಿಟ್ಟು ಬೆದರಿಸುತ್ತಿದ್ದರು. ಹಳೆ ಕಂಪೆನಿಯನ್ನು ಮುಚ್ಚಿ, ಇತ್ತೀಚೆಗೆ ‘ಫಾಕ್ಸ್ ರನ್’ ಹೆಸರಿನ ಮತ್ತೊಂದು ನಕಲಿ ಕಂಪನಿಯನ್ನು ಆರಂಭಿಸಿದ್ದರು.

ಆರೋಪಿ ದಂಪತಿಗಳು ವಂಚನೆಯ ಹಣದಿಂದ ಸುಬ್ರಮಣ್ಯಪುರ ವ್ಯಾಪ್ತಿಯಲ್ಲಿ ನಿವೇಶನ ಖರೀದಿಸಿ ಐಷಾರಾಮಿ ಜೀವನ ನಡೆಸುತ್ತಿದ್ದರು. ಹೊಂಡಾ ಸಿಟಿ ಕಾರ್, ಆ್ಯಪಲ್ ಕಂನಿಯ ಲ್ಯಾಪ್‌ಟಾಪ್ ಹಾಗೂ ಇನ್ನಿತರ ದಾಖಲಾತಿಗಳನ್ನು ಜಪ್ತಿ ಮಾಡಲಾಗಿದೆ ಎಂದು ಅವರು ವಿವರಿಸಿದರು.

ಹತ್ತಾರು ಪ್ರಕರಣ, ಕೋಟ್ಯಂತರ ವಂಚನೆ..!

ಕುಮಾರಸ್ವಾಮಿ ಲೇಔಟ್ 1, ಯಲಹಂಕ 2 ಸೇರಿದಂತೆ ಒಟ್ಟು 8 ಪ್ರಕರಣಗಳು ದಾಖಲಾಗಿವೆ. ಇದುವರೆಗಿನ ಪ್ರಕರಣಗಳಿಂದ ಒಟ್ಟು 2.10 ಕೋಟಿ ರೂ. ಹಣ ವಂಚನೆಯಾಗಿರುವುದು ಪತ್ತೆಯಾಗಿದೆ. ಸುಮಾರು 75ಕ್ಕೂ ಹೆಚ್ಚು ವಂಚಿತ ಗ್ರಾಹಕರು ದೂರು ನೀಡಲು ಮುಂದಾಗಿದ್ದಾರೆ. ಪ್ರತಿಯೊಬ್ಬರಿಂದ ತಲಾ 8 ರಿಂದ 10 ಲಕ್ಷ ರೂ. ಹಣ ಪಡೆದುಕೊಂಡಿದ್ದಾರೆ.

-ಅಣ್ಣಾಮಲೈ, ಡಿಸಿಪಿ, ದಕ್ಷಿಣ ವಿಭಾಗ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X