Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಶ್ತೂನ್ ಪ್ರತಿಭಟನೆಯಲ್ಲಿ ಪಾಲ್ಗೊಂಡ...

ಪಶ್ತೂನ್ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪಾಕ್ ಶಿಕ್ಷಣ ತಜ್ಞನ ಬಂಧನ

ವಾರ್ತಾಭಾರತಿವಾರ್ತಾಭಾರತಿ9 Feb 2019 11:16 PM IST
share
ಪಶ್ತೂನ್ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪಾಕ್ ಶಿಕ್ಷಣ ತಜ್ಞನ ಬಂಧನ

  ಇಸ್ಲಾಮಾಬಾದ್,ಫೆ.9: ಈ ತಿಂಗಳ ಆರಂಭದಲ್ಲಿ ಪಶ್ತೂನ್ ಜನಾಂಗೀಯ ನಾಯಕನೊಬ್ಬನ ಹತ್ಯೆಯನ್ನು ಪ್ರತಿಭಟಿಸಿದ್ದ ಪಾಕಿಸ್ತಾನ ಶಿಕ್ಷಣತಜ್ಞರೊಬ್ಬರ ನಿವಾಸದ ಮೇಲೆ ಪೊಲೀಸರು ದಾಳಿ ನಡೆಸಿ, ಅವರನ್ನು ಬಂಧಿಸಿದ್ದಾರೆ.

 ಅಮ್ಮಾರ್ ಅಲಿ ಜಾನ್ ಅವರನ್ನು ಇಸ್ಲಾಮಾಬಾದ್‌ನಲ್ಲಿರುವ ಅವರ ನಿವಾಸದಿಂದ ಪೊಲೀಸರು ಬಂಧಿಸಿದ್ದು, ಆನಂತರ ಅವರನ್ನು ಗುಲ್ಬರ್ಗ್ ಪೊಲೀಸ್ ಠಾಣೆಗೆ ಕರೆದುಕೊಂಡುಹೋಗಿದ್ದಾರೆಂದು ಡಾನ್ ನ್ಯೂಸ್ ವರದಿ ಮಾಡಿದೆ.

  ಜಾನ್ ಅವರು ಪಶ್ತೂನ್ ಜನಾಂಗೀಯರ ಮಾನವಹಕ್ಕುಗಳಿಗಾಗಿನ ಸಾಮಾಜಿಕ ಸಂಘಟನೆ ಪಶ್ತೂನ್ ‌ತಹಾಫ್ಫುಝ್ ಮೂವ್‌ಮೆಂಟ್ (ಪಿಟಿಎಂ)ನ ನಾಯಕ ಅರ್ಮಾನ್ ಲೋನಿಯವರ ಸಾವಿನ ಘಟನೆಯ ವಿರುದ್ಧ ಪ್ರತಿಭಟನೆ ನಡೆಸಿದ್ದರು.

 ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತದಲ್ಲಿ ಭದ್ರತಾಪಡೆಗಳ ಮೇಲೆ ಉಗ್ರ ಗಾಮಿಗಳು ನಡೆಸಿದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ಪಿಟಿಎಂ ಸಂಘಟನೆಯ ಪ್ರತಿಭಟನಕಾರರನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದ ವೇಳೆ ಗಂಭೀರ ಗಾಯಗೊಂಡಿದ್ದ ಲೋನಿ ಫೆಬ್ರವರಿ 2ರಂದು ಕೊನೆಯುಸಿರೆಳೆದಿದ್ದರು.

ಪ್ರತಿಭಟನೆಯ ಸಂದರ್ಭದಲ್ಲಿ ರಸ್ತೆ ತಡೆ ನಡೆಸುತ್ತಿದ್ದ 100-150ರಷ್ಟಿದ್ದ ತಂಡದ ನೇತೃತ್ವವನ್ನು ಜಾನ್ ವಹಿಸಿದ್ದರೆಂದು ಆರೋಪಿಸಲಾಗಿದೆ.

ರಸ್ತೆ ತಡೆ ವೇಳೆ ಜಾನ್ ಅವರು ಇತರ ಪ್ರತಿಭಟನಕಾರರ ಜೊತೆ ಸರಕಾರಿ ಸಂಸ್ಥೆಗಳು ಹಾಗೂ ಗುಪ್ತಚರ ಏಜೆನ್ಸಿಗಳ ವಿರುದ್ಧ ಘೋಷಣೆಗಳನ್ನು ಕೂಗಿದ್ದರೆಂದು ಎಫ್‌ಐಆರ್ ‌ನಲ್ಲಿ ಆರೋಪಿಸಲಾಗಿದೆ.

2018ರ ಎಪ್ರಿಲ್‌ನಲ್ಲಿ ಜಾನ್ ಅವರನ್ನು ಪಂಜಾಬ್ ವಿವಿಯ ಸಂದರ್ಶಕ ಉಪನ್ಯಾಸಕ ಹುದ್ದೆಯಿಂದ ವಜಾಗೊಳಿಸಲಾಗಿತ್ತು. ಗುತ್ತಿಗೆ ಉಪನ್ಯಾಸಕನ ಹೊಣೆಗಾರಿಕೆಗಳನ್ನು ಈಡೇರಿಸಲು ವಿಫಲರಾಗಿದ್ದಕ್ಕಾಗಿ ಜಾನ್ ಅವರನ್ನು ವಜಾಗೊಳಿಸಲಾಗಿದೆಯೆಂದು ವಿವಿಯ ಆಡಳಿತ ಮಂಡಳಿ ತಿಳಿಸಿತ್ತು. ಆದರೆ ಜಾನ್ ಅವರ ರಾಜಕೀಯ ನಿಲುವಿಗಾಗಿ ಹಾಗೂ ಸರಕಾರಿ ವಿರೋಧಿ ಚಳವಳಿಗಳಿಗಳಲ್ಲಿ ಅವರು ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದುದ್ದಕ್ಕಾಗಿ ಅವರನ್ನು ವಜಾಗೊಳಿಸಲಾಗಿದೆಯೆಂದು ಹೇಳಲಾಗುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X