Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಮೂತ್ರಪಿಂಡ ಕ್ಯಾನ್ಸರ್‌ನ ಈ ಲಕ್ಷಣಗಳನ್ನು...

ಮೂತ್ರಪಿಂಡ ಕ್ಯಾನ್ಸರ್‌ನ ಈ ಲಕ್ಷಣಗಳನ್ನು ಎಂದಿಗೂ ಕಡೆಗಣಿಸಬೇಡಿ

ವಾರ್ತಾಭಾರತಿವಾರ್ತಾಭಾರತಿ10 Feb 2019 7:11 PM IST
share
ಮೂತ್ರಪಿಂಡ ಕ್ಯಾನ್ಸರ್‌ನ ಈ ಲಕ್ಷಣಗಳನ್ನು ಎಂದಿಗೂ ಕಡೆಗಣಿಸಬೇಡಿ

ಮಾರಣಾಂತಿಕ ರೋಗವಾಗಿರುವ ಕ್ಯಾನ್ಸರ್‌ಗೆ ಶರೀರದ ಯಾವುದೇ ಅಂಗವೂ ತುತ್ತಾಗಬಹುದು. ಮೂತ್ರಪಿಂಡಗಳು ನಮ್ಮ ಶರೀರದ ಪ್ರಮುಖ ಅಂಗಗಳಲ್ಲೊಂದಾಗಿವೆ. ತ್ಯಾಜ್ಯ ವಿಸರ್ಜನೆ,ನೀರಿನ ಮಟ್ಟದ ಸಮತೋಲನ ಕಾಯ್ದುಕೊಳ್ಳುವ ಜೊತೆಗೆ ಆಮ್ಲದ ಮಟ್ಟ,ರಕ್ತದೊತ್ತಡ ಮತ್ತು ಕೆಂಪು ರಕ್ತಕಣಗಳನ್ನು ಕ್ರಮಬದ್ಧಗೊಳಿಸುವುದು ಸೇರಿದಂತೆ ಹಲವಾರು ಕಾರ್ಯಗಳನ್ನು ಮೂತ್ರಪಿಂಡಗಳು ನಿರ್ವಹಿಸುತ್ತವೆ.

ಕ್ಯಾನ್ಸರ್ ಮೂತ್ರಪಿಂಡಗಳನ್ನೂ ಬಾಧಿಸುತ್ತದೆ ಮತ್ತು ಮೂತ್ರಪಿಂಡ ಕ್ಯಾನ್ಸರ್‌ನ್ನು ಅತ್ಯಂತ ಅಪಾಯಕಾರಿ ಎಂದು ಪರಿಗಣಿಸಲಾಗಿದೆ. ಆದರೂ ಕ್ಯಾನ್ಸರ್ ಮೂತ್ರಪಿಂಡಗಳಿಗೆ ಲಗ್ಗೆಯಿಡುವಾಗ ಕೆಲವು ಸಂಕೇತಗಳನ್ನು ನೀಡುತ್ತದೆ. ಈ ಸಂಕೇತಗಳನ್ನು ಸಕಾಲದಲ್ಲಿ ಗುರುತಿಸುವುದು ಅತ್ಯಂತ ಮುಖ್ಯವಾಗಿದೆ. ಮೂತ್ರಪಿಂಡ ಕ್ಯಾನ್ಸರ್ ಯಾರನ್ನೂ ಬಾಧಿಸಬಹುದು,ಆದರೆ ಸಾಮಾನ್ಯವಾಗಿ ಮದ್ಯಪಾನಿಗಳು ಅಥವಾ ಧೂಮ್ರಪಾನಿಗಳು ಇದಕ್ಕೆ ಸುಲಭದ ತುತ್ತಾಗುತ್ತಾರೆ. ಮೂತ್ರಪಿಂಡ ಕ್ಯಾನ್ಸರ್‌ನ ಲಕ್ಷಣಗಳ ಕುರಿತು ಮಾಹಿತಿ ಇಲ್ಲಿದೆ.....

►ಕೆಳಬೆನ್ನಿನಲ್ಲಿ ನೋವು

ಕೆಳಬೆನ್ನಿನಲ್ಲಿ ನೋವನ್ನು ಸಾಮಾನ್ಯವಾಗಿ ಹೆಚ್ಚಿನವರು ಇದೊಂದು ಮಾಮೂಲು ನೋವು ಎಂದುಕೊಂಡು ಕಡೆಗಣಿಸುತ್ತಾರೆ,ಆದರೆ ಇದು ಮೂತ್ರಪಿಂಡ ಕ್ಯಾನ್ಸರ್‌ನ ಅಷ್ಟೊಂದು ಪರಿಚಿತವಲ್ಲದ ಲಕ್ಷಣವೂ ಆಗಿದೆ. ಹೆಚ್ಚಿನವರಲ್ಲಿ ಕ್ಯಾನ್ಸರ್ ರೋಗವು ಮೂತ್ರಪಿಂಡಗಳಿಗೆ ದಾಳಿಯಿಟ್ಟ ಮೇಲೆಯೇ ಕೆಳಬೆನ್ನಿನಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ಈ ನೋವು ತೀವ್ರವಾಗಿರುತ್ತದೆ ಮತ್ತು ರೋಗಿಗೆ ತುಂಬ ತೊಂದರೆಯನ್ನುಂಟು ಮಾಡುತ್ತದೆ.

►ಮೂತ್ರದಲ್ಲಿ ರಕ್ತ

 ಮೂತ್ರದಲ್ಲಿ ರಕ್ತ ಹೋಗುವುದು ಮೂತ್ರಪಿಂಡ ಸಂಬಂಧಿತ ಕಾಯಿಲೆಗಳ ಮೊದಲ ಲಕ್ಷಣವಾಗಿದೆ ಮತ್ತು ಅದು ಮೂತ್ರಪಿಂಡ ಕ್ಯಾನ್ಸರ್‌ನ ಲಕ್ಷಣವೂ ಆಗಿದೆ. ಕೆಲವೊಮ್ಮೆ ರಕ್ತದ ಪ್ರಮಾಣ ಎಷ್ಟು ಕಡಿಮೆಯಿರುತ್ತದೆ ಎಂದರೆ ಅದನ್ನು ಮೂತ್ರ ಪರೀಕ್ಷೆಯಿಂದ ಮಾತ್ರ ಪತ್ತೆ ಹಚ್ಚಬಹುದು. ವ್ಯಕ್ತಿಯ ಮೂತ್ರದಲ್ಲಿ ರಕ್ತ ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಅಗತ್ಯವಾಗುತ್ತದೆ.

►ರಕ್ತಹೀನತೆ

ಮೂತ್ರಪಿಂಡಗಳು ಕೆಂಪು ರಕ್ತಕಣಗಳ ಉತ್ಪಾದನೆಯನ್ನೂ ನಿಯಂತ್ರಿಸುತ್ತವೆ. ಮೂತ್ರಪಿಂಡ ಕ್ಯಾನ್ಸರ್ ಕೆಂಪು ರಕ್ತಕಣಗಳ ಉತ್ಪಾದನೆಯನ್ನು ಕುಂಠಿತಗೊಳಿಸುತ್ತದೆ ಮತ್ತು ಇದು ಅನಿಮಿಯಾ ಅಥವಾ ರಕ್ತಹೀನತೆಗೆ ಕಾರಣವಾಗುತ್ತದೆ. ರಕ್ತಹೀನತೆಯಿಂದ ರೋಗಿಯು ದಿನದ ಹೆಚ್ಚಿನ ಸಮಯ ಬಳಲಿಕೆಯನ್ನು ಅನುಭವಿಸುತ್ತಿರುತ್ತಾನೆ.

►ದೇಹತೂಕ ಇಳಿಕೆ

ಕಾರಣವಿಲ್ಲದೆ ಅಥವಾ ತೂಕ ಇಳಿಸಲು ಯಾವುದೇ ಪ್ರಯತ್ನ ಮಾಡದಿದ್ದರೂ ಶರೀರದ ತೂಕ ಇಳಿಯುತ್ತಿದ್ದರೆ ಅದು ಮೂತ್ರಪಿಂಡ ಕ್ಯಾನ್ಸರ್‌ನ್ನು ಸೂಚಿಸಬಹುದು. ಗಡ್ಡೆಯು ಬೆಳೆಯತೊಡಗುತ್ತಿದ್ದಂತೆ ವ್ಯಕ್ತಿಯಲ್ಲಿ ಹಸಿವು ಕಡಿಮೆಯಾಗಬಹುದು ಮತ್ತು ಆತ ಸೇವಿಸುವ ಆಹಾರದ ಪ್ರಮಾಣ ಕಡಿಮೆಯಾಗಬಹುದು. ಇದು ತೂಕ ನಷ್ಟಕ್ಕೆ ಕಾರಣವಾಗುತ್ತದೆ. ಮೂತ್ರಪಿಂಡಗಳ ಅನಾರೋಗ್ಯವೂ ಶರೀರದ ತೂಕ ಕಡಿಮೆಯಾಗುವಂತೆ ಮಾಡುತ್ತದೆ.

►ಉದರದ ಸುತ್ತ ಗಂಟುಗಳು

ಉದರದ ಸುತ್ತ ಅಥವಾ ಮೂತ್ರಪಿಂಡದ ಬಳಿ ಗಂಟು ಕಾಣಿಸಿಕೊಂಡರೆ ಅದು ಮೂತ್ರಪಿಂಡ ಕ್ಯಾನ್ಸರ್‌ನ ಲಕ್ಷಣವಾಗಬಲ್ಲುದು. ಸಾಮಾನ್ಯವಾಗಿ ಆರಂಭಿಕ ಹಂತದಲ್ಲಿ ಈ ಗಂಟು ಗಟ್ಟಿಯಾಗಿರುತ್ತದೆ. ವೈದ್ಯರು ಸೂಕ್ತ ತಪಾಸಣೆಯಿಂದ ಗಂಟಿನ ನಿಖರ ಕಾರಣವನ್ನು ಪತ್ತೆ ಹಚ್ಚುತ್ತಾರೆ.

ರೋಗನಿರ್ಣಯ:

ವೈದ್ಯರು ಮೊದಲು ಮೂತ್ರಪಿಂಡ ಕ್ಯಾನ್ಸರ್‌ನ ಸಾಮಾನ್ಯ ಲಕ್ಷಣಗಳನ್ನು ಪರೀಕ್ಷಿಸುತ್ತಾರೆ. ಮೂತ್ರ ಮತ್ತು ರಕ್ತ ಪರೀಕ್ಷೆ,ಅಲ್ಟ್ರಾಸೌಂಡ್,ಸಿಟಿ ಸ್ಕಾನ್ ಮತ್ತು ಎಂಆರ್‌ಐನಂತಹ ಕೆಲವು ತಪಾಸಣೆಗಳನ್ನು ಅವರು ಸೂಚಿಸಬಹುದು. ಇದರ ಜೊತೆಗೆ ರೋಗಿಯು ಬಯಾಪ್ಸಿಗೊಳಪಡಬೇಕಾಗುತ್ತದೆ. ಇದರಲ್ಲಿ ಮೂತ್ರಪಿಂಡದ ಸಣ್ಣ ಅಂಗಾಂಶವನ್ನು ತೆಗೆದುಕೊಂಡು ಪರೀಕ್ಷೆಯನ್ನು ನಡೆಸುವುದರಿಂದ ಕ್ಯಾನ್ಸರ್‌ನ ಬಗ್ಗೆ ನಿಖರವಾದ ಮಾಹಿತಿ ದೊರೆಯುತ್ತದೆ.

ಚಿಕಿತ್ಸೆ:

ಮೂತ್ರಪಿಂಡ ಕ್ಯಾನ್ಸರ್‌ಗೆ ಸಾಮಾನ್ಯವಾಗಿ ವಿಕಿರಣ,ಕಿಮೊಥೆರಪಿ ಮತ್ತು ಶಸ್ತ್ರಚಿಕಿತ್ಸೆಯನ್ನು ನಡೆಸಲಾಗುತ್ತದೆ. ಮೊದಲು ಕ್ಯಾನ್ಸರ್ ಯಾವ ಹಂತದಲ್ಲಿದೆ ಎನ್ನುವುದನ್ನು ಖಚಿತಪಡಿಸಿಕೊಳ್ಳುವ ವೈದ್ಯರು ಬಳಿಕ ಮೂತ್ರಪಿಂಡದ ಸಮೀಪದ ಇತರ ಅಂಗಗಳಿಗೂ ರೋಗವು ಹರಡಿದೆಯೇ ಎನ್ನುವುದನ್ನು ಪರೀಕ್ಷಿಸುತ್ತಾರೆ. ನಂತರವೇ ಚಿಕಿತ್ಸೆ ಆರಂಭವಾಗುತ್ತದೆ. ಮೂತ್ರಪಿಂಡ ಕ್ಯಾನ್ಸರ್‌ನ್ನು ಸೂಚಿಸುವ ಯಾವುದೇ ಲಕ್ಷಣಗಳು ಕಂಡುಬಂದರೆ ತಕ್ಷಣವೇ ವೈದ್ಯರನ್ನು ಭೇಟಿಯಾಗಬೇಕಾಗುತ್ತದೆ. ರೋಗವನ್ನು ಆರಂಭಿಕ ಹಂತದಲ್ಲಿಯೇ ಪತ್ತೆ ಹಚ್ಚಿದರೆ ಅದರ ಬೆಳವಣಿಗೆಯನ್ನು ತಡೆಯಲು ನೆರವಾಗುತ್ತದೆ. ಮೂತ್ರಪಿಂಡ ಕ್ಯಾನ್ಸರ್ ಮಾನವ ಶರೀರದ ವಿವಿಧ ಪ್ರಮುಖ ಕಾರ್ಯಗಳ ಮೇಲೆ ಪ್ರತಿಕೂಲ ಪರಿಣಾಮವನ್ನುಂಟು ಮಾಡುತ್ತದೆ. ಹೀಗಾಗಿ ಕ್ಯಾನ್ಸರ್ ಬೆಳವಣಿಗೆಯನ್ನು ಸಾಧ್ಯವಿದ್ದಷ್ಟು ಶೀಘ್ರ ನಿಯಂತ್ರಿಸಬೇಕು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X