Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಮಾಜ ಕಾರ್ಯ ಜಾತಿ-ಪಂಥವಿಲ್ಲದೆ...

ಸಮಾಜ ಕಾರ್ಯ ಜಾತಿ-ಪಂಥವಿಲ್ಲದೆ ನಡೆಯಬೇಕು: ಡಾ.ನಿರ್ಮಲಾನಂದನಾಥ ಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ10 Feb 2019 8:12 PM IST
share
ಸಮಾಜ ಕಾರ್ಯ ಜಾತಿ-ಪಂಥವಿಲ್ಲದೆ ನಡೆಯಬೇಕು: ಡಾ.ನಿರ್ಮಲಾನಂದನಾಥ ಸ್ವಾಮಿ

ಬೆಂಗಳೂರು, ಫೆ.10: ಸಮಾಜ ಕಾರ್ಯ ಯಾವಾಗಲೂ ಜಾತಿ-ಪಂಥವಿಲ್ಲದೆ ನಡೆಯಬೇಕು. ಸಮುದಾಯ ಎಂಬುವುದು ಕೇವಲ ನೆಪ ಅಷ್ಟೇ ಎಂದು ಆದಿಚುಂಚನಗಿರಿ ಮಠದ ಡಾ.ನಿರ್ಮಲಾನಂದನಾಥ ಸ್ವಾಮಿ ಅಭಿಪ್ರಾಯಟ್ಟಿದ್ದಾರೆ.

ರವಿವಾರ ಬನಶಂಕರಿಯ ಭುವನೇಶ್ವರಿ ಒಕ್ಕಲಿಗರ ಮಹಿಳಾ ಸಂಘದ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಸಮುದಾಯವನ್ನು ಮೀರಿ ವ್ಯಕ್ತಿ ಬೆಳೆದು ಸಮಾಜದ ಸೇವೆಯನ್ನು ನಿಸ್ವಾರ್ಥವಾಗಿ ಮಾಡಬೇಕು. ಆಗ ಮಾತ್ರ ಜೀವನ ಸಾರ್ಥಕವಾಗುತ್ತದೆ. ಒಂದು ಮರ ಭೂಮಿಯಿಂದ ಹಲವನ್ನು ಪಡೆದು ಮಾನವ ಸಮುದಾಯಕ್ಕೆ ಎಲ್ಲವನ್ನೂ ನೀಡುತ್ತದೆ. ಅದೇ ರೀತಿಯಲ್ಲಿ ನಮ್ಮ ಕಾರ್ಯ ಇರಬೇಕು ಎಂದು ಹೇಳಿದರು.

ಒಳ್ಳೆಯ ಕೆಲಸಗಳನ್ನು ಮಾಡುವಾಗ ಅವಮಾನ, ತೆಗಳಿಕೆ ಬರುತ್ತವೆ. ತಾಳ್ಮೆಯಿಂದ ಅವುಗಳೆಲ್ಲವನ್ನು ಸಹಿಸಿಕೊಂಡು ನಡೆಯಬೇಕು. ತಾಳ್ಮೆ ಇದಿದ್ದರಿಂದಲೇ ಮದರ್ ತೇರೆಸಾ ಸಾಧನೆ ಮಾಡಿದರು. ಅಂತವರ ದಾರಿಯಲ್ಲಿ ನಾವು ಸಾಗಬೇಕು ಎಂದು ಸಲಹೆ ನೀಡಿದರು.

ಬಿಬಿಎಂಪಿ ಮೇಯರ್ ಗಂಗಾಂಬಿಕೆ ಮಾತನಾಡಿ, ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲೂ ಉತ್ತಮ ಸಾಧನೆ ಮಾಡುತ್ತಿದ್ದು, ಪುರುಷರಷ್ಟೇ ನಾವು ಸಮರ್ಥರು ಎಂಬುವುದನ್ನು ತೋರ್ಪಡಿಸುತ್ತಿದ್ದಾರೆ. ಈ ಹಿಂದೆ ಮೇಯರ್ ಪಟ್ಟ ನನಗೆ ಒಲಿದು ಬಂದಾಗ ಕೇವಲ 2 ಬಾರಿ ಆಯ್ಕೆಯಾದ ಇವರು ಉತ್ತಮ ಆಡಳಿ ನೀಡುತ್ತಾರೆಯೇ ಎಂಬ ಅನುಮಾನಗಳಿದ್ದವು. ಆದರೆ ಹಿಂಜರಿಕೆಯನ್ನು ಮೆಟ್ಟಿನಿಂತು ಅಧಿಕಾರ ನಡೆಸುತ್ತಿದ್ದೇನೆ. ಈ ಕ್ಷೇತ್ರದಲ್ಲಿ ಜನಮೆಚ್ಚುವ ಕೆಲಸ ಮಾಡುವುದಾಗಿ ಹೇಳಿದರು.

ಸಂಸ್ಥಾನ ಒಕ್ಕಲಿಗರಿಗೆ ಸೀಮಿತವಲ್ಲ:

‘ಆದಿಚುಂಚನಗಿರಿ ಸಂಸ್ಥಾನ ಒಕ್ಕಲಿಗ ಜಾತಿಗೆ ಸೀಮಿತವಾಗಿಲ್ಲ. ಎಲ್ಲ ಧರ್ಮದವರು ಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ. ಎಲ್ಲರನ್ನೂ ಮಹಾಸಂಸ್ಥಾನ ಮಾತೃ ವಾತ್ಸಲ್ಯದಿಂದ ನೋಡುತ್ತದೆ’

-ಡಾ.ನಿರ್ಮಲಾನಂದನಾಥ ಸ್ವಾಮಿ, ಆದಿಚುಂಚನಗಿರಿ ಮಠ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X