Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಟ್ಟಡಗಳ ನಿರ್ಮಾಣಕ್ಕೆ ನಿರ್ಭಯಾ ನಿಧಿ...

ಕಟ್ಟಡಗಳ ನಿರ್ಮಾಣಕ್ಕೆ ನಿರ್ಭಯಾ ನಿಧಿ ಬಳಕೆ !

ಮಹಿಳಾ ಸುರಕ್ಷತೆಯ ಮುಖ್ಯ ಉದ್ದೇಶವೇ ವಿಫಲ

ವಾರ್ತಾಭಾರತಿವಾರ್ತಾಭಾರತಿ10 Feb 2019 8:18 PM IST
share
ಕಟ್ಟಡಗಳ ನಿರ್ಮಾಣಕ್ಕೆ ನಿರ್ಭಯಾ ನಿಧಿ ಬಳಕೆ !

ಹೊಸದಿಲ್ಲಿ,ಫೆ.10: ನಿರ್ಭಯಾ ನಿಧಿಯನ್ನು ಕಟ್ಟಡಗಳ ನಿರ್ಮಾಣಕ್ಕೆ ಬಳಸಿಕೊಂಡಿರುವುದನ್ನು ಬಲವಾಗಿ ಆಕ್ಷೇಪಿಸಿರುವ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ನೇತೃತ್ವದ ಗೃಹ ವ್ಯವಹಾರಗಳ ಕುರಿತ ಸಂಸದೀಯ ಸ್ಥಾಯಿ ಸಮಿತಿಯು,ಇಂತಹ ಬಳಕೆಗಳು ಯೋಜನೆಯಡಿ ಮಹಿಳಾ ಸುರಕ್ಷತೆಯ ಮುಖ್ಯ ಉದ್ದೇಶವನ್ನೇ ವಿಫಲಗೊಳಿಸುತ್ತವೆ ಎಂದು ಹೇಳಿದೆ.

ಕಟ್ಟಡಗಳ ನಿರ್ಮಾಣಕ್ಕೆ ಹಣ ಇತರ ಮೂಲಗಳಿಂದ ಬರಬೇಕೇ ಹೊರತು ನಿರ್ಭಯಾ ನಿಧಿಯಿಂದಲ್ಲ ಎನ್ನುವುದು ತನ್ನ ದೃಢವಾದ ಅಭಿಪ್ರಾಯವಾಗಿದೆ ಎಂದೂ ಸಮಿತಿಯು ಹೇಳಿದೆ.

ಗೃಹ ಸಚಿವಾಲಯವು ನಿರ್ಭಯಾ ನಿಧಿಯಿಂದ ಕಟ್ಟಡಗಳ ನಿರ್ಮಾಣದಂತಹ ಯೋಜನೆಗಳಿಗೆ ಹಣ ಮಂಜೂರು ಮಾಡಕೂಡದು ಮತ್ತು ಅದು ತನ್ನ ಮೂಲ ಉದ್ದೇಶಕ್ಕೆ ಅಂಟಿಕೊಳ್ಳಬೇಕು ಎಂದು ಸಮಿತಿಯು ಕಟುವಾಗಿ ಹೇಳಿದೆ.

 2012ರಲ್ಲಿ ದೇಶವ್ಯಾಪಿ ಆಕ್ರೋಶ ಮತ್ತು ಪ್ರತಿಭಟನೆಗಳಿಗೆ ಕಾರಣವಾಗಿದ್ದ ದಿಲ್ಲಿಯಲ್ಲಿ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಹಿನ್ನೆಲೆಯಲ್ಲಿ ದೇಶಾದ್ಯಂತ ಮಹಿಳೆಯರ ಸುರಕ್ಷತೆ ಮತ್ತು ಭದ್ರತೆಯನ್ನು ಹೆಚ್ಚಿಸಲು ಅಗತ್ಯ ಉಪಕ್ರಮಗಳ ಜಾರಿಗಾಗಿ 2013ರಲ್ಲಿ ಆಗಿನ ಯುಪಿಎ ಸರಕಾರವು ನಿರ್ಭಯಾ ನಿಧಿಯನ್ನು ಸ್ಥಾಪಿಸಿತ್ತು.

ನಿರ್ಭಯಾ ನಿಧಿಯಿಂದ ಹಣವನ್ನು ಪರಿಹಾರಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳಿಗೆ ಬಿಡುಗಡೆ ಮಾಡುವುದರಿಂದ ಅದು ಕೇವಲ ವಿತರಣೆ ನಿಧಿಯಾಗುತ್ತದೆ ಮತ್ತು ತಳಮಟ್ಟದಲ್ಲಿ ಮಹಿಳೆಯರ ಭದ್ರತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಯಾವುದೇ ಪರಿಣಾಮವನ್ನು ಬೀರುವುದಿಲ್ಲ ಎಂದು ಸಮಿತಿಯು ಹೇಳಿದೆ.

ಆ್ಯಸಿಡ್ ದಾಳಿ,ಅತ್ಯಾಚಾರ,ಕಳ್ಳಸಾಗಾಣಿಕೆ ಇತ್ಯಾದಿಗಳ ಸಂತ್ರಸ್ತ ಮಹಿಳೆಯರಿಗೆ ಪರಿಹಾರವನ್ನೊದಗಿಸುವ ಕೇಂದ್ರೀಯ ಸಂತ್ರಸ್ತೆಯರ ಪರಿಹಾರ ನಿಧಿ(ಸಿವಿಸಿಎಫ್)ಗೆ ಒಂದು ಬಾರಿಯ ಅನುದಾನವಾಗಿ 200 ಕೋ.ರೂ.ಗಳನ್ನು ಮಂಜೂರು ಮಾಡಿರುವುದನ್ನು ತನ್ನ ವರದಿಯಲ್ಲಿ ಉಲ್ಲೇಖಿಸಿರುವ ಸಮಿತಿಯು, ಸಿವಿಸಿಎಫ್ ಯೋಜನೆಯ ಅಗತ್ಯ ಮತ್ತು ಮಹತ್ವವನ್ನು ಪ್ರಶಂಸಿಸಿದೆಯಾದರೂ,ಈ ಯೋಜನೆಗೆ ಬೇರೆ ಮೂಲಗಳಿಂದ ಹಣವನ್ನು ಒದಗಿಸಬಹುದಿತ್ತು ಎಂದು ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X